AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ED Raid: ಮಹಾರಾಷ್ಟ್ರದ ಹಲವೆಡೆ ಇ.ಡಿ ದಾಳಿ; ಅಪಾರ ಪ್ರಮಾಣದ ನಗದು, ಚಿನ್ನಾಭರಣ ವಶ

ಮಹಾರಾಷ್ಟ್ರದ ನಾಗ್ಪುರ, ಮುಂಬೈ ಸೇರಿದಂತೆ 15 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೋಮವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ED Raid: ಮಹಾರಾಷ್ಟ್ರದ ಹಲವೆಡೆ ಇ.ಡಿ ದಾಳಿ; ಅಪಾರ ಪ್ರಮಾಣದ ನಗದು, ಚಿನ್ನಾಭರಣ ವಶ
ಪ್ರಾತಿನಿಧಿಕ ಚಿತ್ರImage Credit source: siasat.com
Follow us
Ganapathi Sharma
|

Updated on:Mar 06, 2023 | 5:46 PM

ಮುಂಬೈ: ಮಹಾರಾಷ್ಟ್ರದ (Maharashtra) ನಾಗ್ಪುರ, ಮುಂಬೈ ಸೇರಿದಂತೆ 15 ಕಡೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಸೋಮವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಪಂಕಜ್ ಮೆಹಾದಿಯಾ, ಲೋಕೇಶ್, ಕಾತಿಕ್ ಜೈನ್‌ ವಿರುದ್ಧದ ಹಣಕಾಸು ಅವ್ಯವಹಾರ ಆರೋಪದ (ಹಣಕಾಸು ಅವ್ಯವಹಾರ ತಡೆ ಕಾಯ್ದೆ, 2002) ತನಿಖೆಯ ಅಂಗವಾಗಿ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ದಾಳಿ ವೇಳೆ, 5.51 ಕೋಟಿ ರೂ. ಮೌಲ್ಯದ ಚಿನ್ನ, ವಜ್ರಾಭರಣ, 1.21 ಕೋಟಿ ನಗದು ಜಪ್ತಿ ಮಾಡಲಾಗಿದೆ.

ಸಿತಾಬುಲ್ದಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್​ಐಆರ್ ಆಧಾರದಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಪಂಕಜ್ ಮೆಹಾದಿಯಾ, ಲೋಕೇಶ್, ಕಾತಿಕ್ ಜೈನ್‌ ಹಾಗೂ ಇತರರ ವಿರುದ್ಧ ಎಫ್​ಐಆಎರ್ ದಾಖಲಾಗಿತ್ತು. ಆರೋಪಿಗಳ ಹಣಕಾಸು ಅವ್ಯವಹಾರದಿಂದಾಗಿ ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಇದನ್ನೂ ಓದಿ: Foxconn: ತೆಲಂಗಾಣದಲ್ಲೇ ಫಾಕ್ಸ್​​ಕಾನ್ ಉತ್ಪಾದನಾ ಘಟಕ; ಕಂಪನಿಯ ಅಧ್ಯಕ್ಷ ಯಾಂಗ್ ಲಿಯು ಸ್ಪಷ್ಟನೆ

ಆರೋಪಿಗಳು 2004 ರಿಂದ 2017 ರವರೆಗೆ ಮಾಡಿದ ಹೂಡಿಕೆಗಳ ಮೇಲೆ ಟಿಡಿಎಸ್ (ಮೂಲದಲ್ಲಿ ಕಡಿತಗೊಳಿಸುವ ತೆರಿಗೆ) ಕಡಿತಗೊಳಿಸಿದ ನಂತರ ಶೇ 12ರಷ್ಟು ಲಾಭವನ್ನು ನೀಡುವುದಾಗಿ ಭರವಸೆ ನೀಡುವ ಆಮಿಷವೊಡ್ಡಿ ವಂಚನೆ ಎಸಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಜಾರಿ ನಿರ್ದೇಶನಾಲಯದ ಪ್ರಕಟಣೆ ತಿಳಿಸಿದೆ.

ಈ ವಿಚಾರವಾಗಿ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಜಾರಿ ನಿರ್ದೇಶನಾಲಯ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Mon, 6 March 23

Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್