AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಮೂಲದ ಶಿಯೋಮಿ ಕಂಪನಿಯ 5,551.27 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

ಶಿಯೋಮಿ ಕಂಪನಿ ಮೊಬೈಲ್ ಫೋನ್, ಸ್ಮಾರ್ಟ್​ಫೋನ್​ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಕಂಪನಿ. ಇದು ಭಾರತದಲ್ಲಿ 2014ರಿಂದ ಕೆಲಸ ಪ್ರಾರಂಭ ಮಾಡಿದೆ.

ಚೀನಾ ಮೂಲದ ಶಿಯೋಮಿ ಕಂಪನಿಯ 5,551.27 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.
ಶಿಯೋಮಿ
TV9 Web
| Edited By: |

Updated on:Apr 30, 2022 | 5:11 PM

Share

ಭಾರತದಲ್ಲಿರುವ ಚೀನಾ ಮೂಲದ ಶಿಯೋಮಿ ಇಂಡಿಯಾ (Xiaomi India) ಕಂಪನಿಗೆ ಸೇರಿದ 5,551.27 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಜಪ್ತಿ ಮಾಡಿದೆ.  ಚೀನಾ ಮೂಲದ ಶಿಯೋಮಿ ಗ್ರೂಪ್​​ನ ಒಡೆತನದಲ್ಲಿರುವ ಶಿಯೋಮಿ ಇಂಡಿಯಾ ಕಂಪನಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) 1999ರ ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂಬ ಆರೋಪದಡಿ ಇ.ಡಿ. ಆಸ್ತಿಯನ್ನು ಮುಟ್ಟುಗೋಲು ಹಾಕಿದೆ.  ಈ ವರ್ಷದ ಫೆಬ್ರವರಿಯಲ್ಲಿ ಶಿಯೋಮಿ ಇಂಡಿಯಾ ಕಂಪನಿ ಕಾನೂನು ಬಾಹಿರವಾಗಿ ಹಣ ವರ್ಗಾವಣೆ ಮಾಡಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಪ್ರಾರಂಭ ಮಾಡಿತ್ತು. 

ಶಿಯೋಮಿ ಕಂಪನಿ ಮೊಬೈಲ್ ಫೋನ್, ಸ್ಮಾರ್ಟ್​ಫೋನ್​ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಕಂಪನಿ. ಇದು ಭಾರತದಲ್ಲಿ 2014ರಿಂದ ಕೆಲಸ ಪ್ರಾರಂಭ ಮಾಡಿದೆ. 2015ರಿಂದಲೇ ಹಣ ವರ್ಗಾವಣೆ ಕಾರ್ಯ ಪ್ರಾರಂಭ ಮಾಡಿದೆ. ಈ ಕಂಪನಿ 5551.27 ಕೋಟಿಗಳಷ್ಟು ಹಣವನ್ನು ರಾಯಧನದ ರೂಪದಲ್ಲಿ ಶಿಯಾಮಿ ಗ್ರೂಪ್​​ ಸೇರಿ ಒಟ್ಟು ಮೂರು ವಿದೇಶಿ ಮೂಲದ ಘಟಕಗಳಿಗೆ ರವಾನೆ ಮಾಡಿದೆ ಎಂದು  ಹೇಳಲಾಗಿದೆ. ಚೀನಾದಲ್ಲಿರುವ ಮಾತೃಸಂಸ್ಥೆಯ ಸೂಚನೆಯ ಮೇರೆಗೇ ಈ ಹಣವರ್ಗಾವಣೆಯಾಗಿದೆ ಎನ್ನಲಾಗಿದೆ.

ಶಿಯೋಮಿ ಇಂಡಿಯಾವು ಭಾರತದಲ್ಲಿ ಎಂಐ ಎಂಬ ಹೆಸರಿನಲ್ಲಿ ಮೊಬೈಲ್​ ಫೋನ್​​ಗಳ ವ್ಯಾಪಾರ, ವಿತರಣೆ ಮಾಡುತ್ತಿದೆ. ಇದು ಭಾರತದ ಉತ್ಪಾದನಾ ಘಟಕಗಳೇ ತಯಾರಿಸಿದ ಮೊಬೈಲ್​ ಸೆಟ್​ ಮತ್ತು ಅದಕ್ಕೆ ಸಂಬಂಧಪಟ್ಟ ಉತ್ಪನ್ನಗಳನ್ನು ಖರೀದಿಸುತ್ತಿತ್ತು.  ಶಿಯೋಮಿ ಇಂಡಿಯಾ ಯಾವ ಮೂರು ವಿದೇಶಿ ಘಟಕಗಳಿಗೆ ಹಣ ವರ್ಗಾವಣೆ ಮಾಡಿದೆಯೋ, ಅವುಗಳಿಂದ ಯಾವುದೇ ಸೇವೆಯನ್ನೂ ಪಡೆದಿಲ್ಲ, ಏನನ್ನೂ ಖರೀದಿ ಮಾಡಿಲ್ಲ ಎಂದೂ ಇ.ಡಿ. ಹೇಳಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಕೊವಿಡ್​​-19 ಪ್ರಕರಣಗಳು ಹೆಚ್ಚಳ ಹಿನ್ನೆಲೆ: ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಸರ್ಕಾರದಿಂದ ಗೈಡ್​ಲೈನ್ಸ್​ ಜಾರಿ

Published On - 3:56 pm, Sat, 30 April 22

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!