AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಮೂಲದ ಶಿಯೋಮಿ ಕಂಪನಿಯ 5,551.27 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

ಶಿಯೋಮಿ ಕಂಪನಿ ಮೊಬೈಲ್ ಫೋನ್, ಸ್ಮಾರ್ಟ್​ಫೋನ್​ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಕಂಪನಿ. ಇದು ಭಾರತದಲ್ಲಿ 2014ರಿಂದ ಕೆಲಸ ಪ್ರಾರಂಭ ಮಾಡಿದೆ.

ಚೀನಾ ಮೂಲದ ಶಿಯೋಮಿ ಕಂಪನಿಯ 5,551.27 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.
ಶಿಯೋಮಿ
TV9 Web
| Edited By: |

Updated on:Apr 30, 2022 | 5:11 PM

Share

ಭಾರತದಲ್ಲಿರುವ ಚೀನಾ ಮೂಲದ ಶಿಯೋಮಿ ಇಂಡಿಯಾ (Xiaomi India) ಕಂಪನಿಗೆ ಸೇರಿದ 5,551.27 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಜಪ್ತಿ ಮಾಡಿದೆ.  ಚೀನಾ ಮೂಲದ ಶಿಯೋಮಿ ಗ್ರೂಪ್​​ನ ಒಡೆತನದಲ್ಲಿರುವ ಶಿಯೋಮಿ ಇಂಡಿಯಾ ಕಂಪನಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) 1999ರ ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂಬ ಆರೋಪದಡಿ ಇ.ಡಿ. ಆಸ್ತಿಯನ್ನು ಮುಟ್ಟುಗೋಲು ಹಾಕಿದೆ.  ಈ ವರ್ಷದ ಫೆಬ್ರವರಿಯಲ್ಲಿ ಶಿಯೋಮಿ ಇಂಡಿಯಾ ಕಂಪನಿ ಕಾನೂನು ಬಾಹಿರವಾಗಿ ಹಣ ವರ್ಗಾವಣೆ ಮಾಡಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಪ್ರಾರಂಭ ಮಾಡಿತ್ತು. 

ಶಿಯೋಮಿ ಕಂಪನಿ ಮೊಬೈಲ್ ಫೋನ್, ಸ್ಮಾರ್ಟ್​ಫೋನ್​ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಕಂಪನಿ. ಇದು ಭಾರತದಲ್ಲಿ 2014ರಿಂದ ಕೆಲಸ ಪ್ರಾರಂಭ ಮಾಡಿದೆ. 2015ರಿಂದಲೇ ಹಣ ವರ್ಗಾವಣೆ ಕಾರ್ಯ ಪ್ರಾರಂಭ ಮಾಡಿದೆ. ಈ ಕಂಪನಿ 5551.27 ಕೋಟಿಗಳಷ್ಟು ಹಣವನ್ನು ರಾಯಧನದ ರೂಪದಲ್ಲಿ ಶಿಯಾಮಿ ಗ್ರೂಪ್​​ ಸೇರಿ ಒಟ್ಟು ಮೂರು ವಿದೇಶಿ ಮೂಲದ ಘಟಕಗಳಿಗೆ ರವಾನೆ ಮಾಡಿದೆ ಎಂದು  ಹೇಳಲಾಗಿದೆ. ಚೀನಾದಲ್ಲಿರುವ ಮಾತೃಸಂಸ್ಥೆಯ ಸೂಚನೆಯ ಮೇರೆಗೇ ಈ ಹಣವರ್ಗಾವಣೆಯಾಗಿದೆ ಎನ್ನಲಾಗಿದೆ.

ಶಿಯೋಮಿ ಇಂಡಿಯಾವು ಭಾರತದಲ್ಲಿ ಎಂಐ ಎಂಬ ಹೆಸರಿನಲ್ಲಿ ಮೊಬೈಲ್​ ಫೋನ್​​ಗಳ ವ್ಯಾಪಾರ, ವಿತರಣೆ ಮಾಡುತ್ತಿದೆ. ಇದು ಭಾರತದ ಉತ್ಪಾದನಾ ಘಟಕಗಳೇ ತಯಾರಿಸಿದ ಮೊಬೈಲ್​ ಸೆಟ್​ ಮತ್ತು ಅದಕ್ಕೆ ಸಂಬಂಧಪಟ್ಟ ಉತ್ಪನ್ನಗಳನ್ನು ಖರೀದಿಸುತ್ತಿತ್ತು.  ಶಿಯೋಮಿ ಇಂಡಿಯಾ ಯಾವ ಮೂರು ವಿದೇಶಿ ಘಟಕಗಳಿಗೆ ಹಣ ವರ್ಗಾವಣೆ ಮಾಡಿದೆಯೋ, ಅವುಗಳಿಂದ ಯಾವುದೇ ಸೇವೆಯನ್ನೂ ಪಡೆದಿಲ್ಲ, ಏನನ್ನೂ ಖರೀದಿ ಮಾಡಿಲ್ಲ ಎಂದೂ ಇ.ಡಿ. ಹೇಳಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಕೊವಿಡ್​​-19 ಪ್ರಕರಣಗಳು ಹೆಚ್ಚಳ ಹಿನ್ನೆಲೆ: ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಸರ್ಕಾರದಿಂದ ಗೈಡ್​ಲೈನ್ಸ್​ ಜಾರಿ

Published On - 3:56 pm, Sat, 30 April 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ