AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಮೂಲದ ಶಿಯೋಮಿ ಕಂಪನಿಯ 5,551.27 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

ಶಿಯೋಮಿ ಕಂಪನಿ ಮೊಬೈಲ್ ಫೋನ್, ಸ್ಮಾರ್ಟ್​ಫೋನ್​ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಕಂಪನಿ. ಇದು ಭಾರತದಲ್ಲಿ 2014ರಿಂದ ಕೆಲಸ ಪ್ರಾರಂಭ ಮಾಡಿದೆ.

ಚೀನಾ ಮೂಲದ ಶಿಯೋಮಿ ಕಂಪನಿಯ 5,551.27 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.
ಶಿಯೋಮಿ
TV9 Web
| Edited By: |

Updated on:Apr 30, 2022 | 5:11 PM

Share

ಭಾರತದಲ್ಲಿರುವ ಚೀನಾ ಮೂಲದ ಶಿಯೋಮಿ ಇಂಡಿಯಾ (Xiaomi India) ಕಂಪನಿಗೆ ಸೇರಿದ 5,551.27 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಜಪ್ತಿ ಮಾಡಿದೆ.  ಚೀನಾ ಮೂಲದ ಶಿಯೋಮಿ ಗ್ರೂಪ್​​ನ ಒಡೆತನದಲ್ಲಿರುವ ಶಿಯೋಮಿ ಇಂಡಿಯಾ ಕಂಪನಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) 1999ರ ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂಬ ಆರೋಪದಡಿ ಇ.ಡಿ. ಆಸ್ತಿಯನ್ನು ಮುಟ್ಟುಗೋಲು ಹಾಕಿದೆ.  ಈ ವರ್ಷದ ಫೆಬ್ರವರಿಯಲ್ಲಿ ಶಿಯೋಮಿ ಇಂಡಿಯಾ ಕಂಪನಿ ಕಾನೂನು ಬಾಹಿರವಾಗಿ ಹಣ ವರ್ಗಾವಣೆ ಮಾಡಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಪ್ರಾರಂಭ ಮಾಡಿತ್ತು. 

ಶಿಯೋಮಿ ಕಂಪನಿ ಮೊಬೈಲ್ ಫೋನ್, ಸ್ಮಾರ್ಟ್​ಫೋನ್​ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಕಂಪನಿ. ಇದು ಭಾರತದಲ್ಲಿ 2014ರಿಂದ ಕೆಲಸ ಪ್ರಾರಂಭ ಮಾಡಿದೆ. 2015ರಿಂದಲೇ ಹಣ ವರ್ಗಾವಣೆ ಕಾರ್ಯ ಪ್ರಾರಂಭ ಮಾಡಿದೆ. ಈ ಕಂಪನಿ 5551.27 ಕೋಟಿಗಳಷ್ಟು ಹಣವನ್ನು ರಾಯಧನದ ರೂಪದಲ್ಲಿ ಶಿಯಾಮಿ ಗ್ರೂಪ್​​ ಸೇರಿ ಒಟ್ಟು ಮೂರು ವಿದೇಶಿ ಮೂಲದ ಘಟಕಗಳಿಗೆ ರವಾನೆ ಮಾಡಿದೆ ಎಂದು  ಹೇಳಲಾಗಿದೆ. ಚೀನಾದಲ್ಲಿರುವ ಮಾತೃಸಂಸ್ಥೆಯ ಸೂಚನೆಯ ಮೇರೆಗೇ ಈ ಹಣವರ್ಗಾವಣೆಯಾಗಿದೆ ಎನ್ನಲಾಗಿದೆ.

ಶಿಯೋಮಿ ಇಂಡಿಯಾವು ಭಾರತದಲ್ಲಿ ಎಂಐ ಎಂಬ ಹೆಸರಿನಲ್ಲಿ ಮೊಬೈಲ್​ ಫೋನ್​​ಗಳ ವ್ಯಾಪಾರ, ವಿತರಣೆ ಮಾಡುತ್ತಿದೆ. ಇದು ಭಾರತದ ಉತ್ಪಾದನಾ ಘಟಕಗಳೇ ತಯಾರಿಸಿದ ಮೊಬೈಲ್​ ಸೆಟ್​ ಮತ್ತು ಅದಕ್ಕೆ ಸಂಬಂಧಪಟ್ಟ ಉತ್ಪನ್ನಗಳನ್ನು ಖರೀದಿಸುತ್ತಿತ್ತು.  ಶಿಯೋಮಿ ಇಂಡಿಯಾ ಯಾವ ಮೂರು ವಿದೇಶಿ ಘಟಕಗಳಿಗೆ ಹಣ ವರ್ಗಾವಣೆ ಮಾಡಿದೆಯೋ, ಅವುಗಳಿಂದ ಯಾವುದೇ ಸೇವೆಯನ್ನೂ ಪಡೆದಿಲ್ಲ, ಏನನ್ನೂ ಖರೀದಿ ಮಾಡಿಲ್ಲ ಎಂದೂ ಇ.ಡಿ. ಹೇಳಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಕೊವಿಡ್​​-19 ಪ್ರಕರಣಗಳು ಹೆಚ್ಚಳ ಹಿನ್ನೆಲೆ: ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಸರ್ಕಾರದಿಂದ ಗೈಡ್​ಲೈನ್ಸ್​ ಜಾರಿ

Published On - 3:56 pm, Sat, 30 April 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ