AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನದ ಮೂಲ ಸ್ವರೂಪದ ಹಿತರಕ್ಷಣೆಗೆ ನಾಂದಿ ಹಾಡಿದ ಕೇಶವಾನಂದ ಭಾರತಿ ಶ್ರೀಗಳು ದೈವಾಧೀನ

ತಿರುವನಂತಪುರಂ: ಕೇರಳದ ಕಾಸರಗೋಡು ಜಿಲ್ಲೆಯ ಎಡನೀರು ಶ್ರೀಕೇಶವಾನಂದ ಭಾರತಿ ಸ್ವಾಮೀಜಿ ದೈವಾಧೀನರಾಗಿದ್ದಾರೆ. ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಮಠಾಧೀಶರಾಗಿದ್ದ ಸ್ವಾಮೀಜಿಗೆ 79 ವರ್ಷ ಪ್ರಾಯವಾಗಿತ್ತು. ಕಳೆದ ತಡರಾತ್ರಿ ದೈವಾಧೀನರಾದ ಶ್ರೀಗಳು ಸೆ‌ಪ್ಟಂಬರ್​ 2ರಂದು ತಮ್ಮ 60ನೇ ಚಾತುರ್ಮಾಸ ವೃತಾಚರಣೆ ಸಮಾಪ್ತಿಗೊಳಿಸಿದ್ದರು. ಆದರೆ, ಕೆಲವು ದಿನಗಳಿಂದ ಅಸೌಖ್ಯದಲ್ಲಿದ್ದ ಸ್ವಾಮೀಜಿ ನಿನ್ನೆ ಫಲಹಾರ ಸ್ವೀಕರಿಸಿದ ಬಳಿಕ ತಡರಾತ್ರಿ ವಿಧಿವಶರಾಗಿದ್ದಾರೆ. 1960 ರಿಂದ ಮಠಾಧೀಶರಾಗಿ ಸೇವೆ ಸಲ್ಲಿಸಿದ್ದ ಸ್ವಾಮೀಜಿ ಧಾರ್ಮಿಕ, ಶಿಕ್ಷಣ ಮತ್ತು ಸಂಗೀತ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸ್ವತಃ […]

ಸಂವಿಧಾನದ ಮೂಲ ಸ್ವರೂಪದ ಹಿತರಕ್ಷಣೆಗೆ ನಾಂದಿ ಹಾಡಿದ ಕೇಶವಾನಂದ ಭಾರತಿ ಶ್ರೀಗಳು ದೈವಾಧೀನ
KUSHAL V
|

Updated on:Sep 06, 2020 | 4:41 PM

Share

ತಿರುವನಂತಪುರಂ: ಕೇರಳದ ಕಾಸರಗೋಡು ಜಿಲ್ಲೆಯ ಎಡನೀರು ಶ್ರೀಕೇಶವಾನಂದ ಭಾರತಿ ಸ್ವಾಮೀಜಿ ದೈವಾಧೀನರಾಗಿದ್ದಾರೆ. ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಮಠಾಧೀಶರಾಗಿದ್ದ ಸ್ವಾಮೀಜಿಗೆ 79 ವರ್ಷ ಪ್ರಾಯವಾಗಿತ್ತು.

ಕಳೆದ ತಡರಾತ್ರಿ ದೈವಾಧೀನರಾದ ಶ್ರೀಗಳು ಸೆ‌ಪ್ಟಂಬರ್​ 2ರಂದು ತಮ್ಮ 60ನೇ ಚಾತುರ್ಮಾಸ ವೃತಾಚರಣೆ ಸಮಾಪ್ತಿಗೊಳಿಸಿದ್ದರು. ಆದರೆ, ಕೆಲವು ದಿನಗಳಿಂದ ಅಸೌಖ್ಯದಲ್ಲಿದ್ದ ಸ್ವಾಮೀಜಿ ನಿನ್ನೆ ಫಲಹಾರ ಸ್ವೀಕರಿಸಿದ ಬಳಿಕ ತಡರಾತ್ರಿ ವಿಧಿವಶರಾಗಿದ್ದಾರೆ.

1960 ರಿಂದ ಮಠಾಧೀಶರಾಗಿ ಸೇವೆ ಸಲ್ಲಿಸಿದ್ದ ಸ್ವಾಮೀಜಿ ಧಾರ್ಮಿಕ, ಶಿಕ್ಷಣ ಮತ್ತು ಸಂಗೀತ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸ್ವತಃ ಯಕ್ಷಗಾನ‌ ಭಾಗವತಿಕೆ ಮಾಡುತ್ತಿದ್ದ ಶ್ರೀಗಳು ಭೂಸುಧಾರಣಾ ಕಾಯ್ದೆ ವಿರುದ್ಧ ಸಹ ದನಿ ಎತ್ತಿದ್ದರು. ಆಸ್ತಿ ಹಕ್ಕಿನ ಬಗ್ಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇವರು ನಡೆಸಿದ ಕಾನೂನು ಹೋರಾಟ ಭಾರತದ ಸಂವಿಧಾನದ ಮೂಲ ಸ್ವರೂಪದ ಹಿತರಕ್ಷಣೆಗೆ ನಾಂದಿ ಹಾಡಿತು. ಶ್ರೀಗಳು ಸುಪ್ರೀಂ ಕೋರ್ಟ್​ನಲ್ಲಿ ದಾಖಲಿಸಿದ ಕೇಸ್​ ಭಾರತದ ನ್ಯಾಯಾಂಗ ಚರಿತ್ರೆಯಲ್ಲಿ ಕೇಶವಾನಂದ ಭಾರತಿ ಕೇಸ್​ ಎಂದೇ ಖ್ಯಾತಿ ಪಡೆದಿದೆ.

Published On - 2:57 pm, Sun, 6 September 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ