AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಅಸಂವಿಧಾನಿಕ ಹಲ್ಲೆ: ಪೆಗಾಸಸ್ ಹಸ್ತಕ್ಷೇಪದ ಬಗ್ಗೆ ಸುಪ್ರೀಂಕೋರ್ಟ್​ ನಿಗಾ ತನಿಖೆಗೆ ಎಡಿಟರ್ಸ್​ ಗಿಲ್ಡ್​ ಆಗ್ರಹ

ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ವ್ಯಾಪಾರಸ್ಥರು ಮತ್ತು ರಾಜಕಾರಿಣಿಗಳ ಮೇಲೆ ಪೆಗಾಸಸ್ ಮೂಲಕ ಸರ್ಕಾರದ ಸಂಸ್ಥೆಗಳು ಕಣ್ಗಾವಲು ಇರಿಸಿರುವುದನ್ನು ಎಡಿಟರ್ಸ್​ ಗಿಲ್ಡ್​ ಖಂಡಿಸಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಅಸಂವಿಧಾನಿಕ ಹಲ್ಲೆ: ಪೆಗಾಸಸ್ ಹಸ್ತಕ್ಷೇಪದ ಬಗ್ಗೆ ಸುಪ್ರೀಂಕೋರ್ಟ್​ ನಿಗಾ ತನಿಖೆಗೆ ಎಡಿಟರ್ಸ್​ ಗಿಲ್ಡ್​ ಆಗ್ರಹ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 21, 2021 | 10:05 PM

Share

ದೆಹಲಿ: ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ವ್ಯಾಪಾರಸ್ಥರು ಮತ್ತು ರಾಜಕಾರಿಣಿಗಳ ಮೇಲೆ ಇಸ್ರೇಲಿ ಗೂಢಚರ್ಯೆ ಸಂಸ್ಥೆ ಅಭಿವೃದ್ಧಿಪಡಿಸಿರುವ ಪೆಗಾಸಸ್ ಮೂಲಕ ಸರ್ಕಾರದ ಸಂಸ್ಥೆಗಳು ಕಣ್ಗಾವಲು ಇರಿಸಿರುವುದನ್ನು ಖಂಡಿಸಿರುವ ಎಡಿಟರ್ಸ್​ ಗಿಲ್ಡ್​, ಈ ಬಗ್ಗೆ ಸುಪ್ರೀಂಕೋರ್ಟ್​ ಕಣ್ಗಾವಲಿನಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ.

‘ಈ ಪ್ರಕರಣದ ಸುಪ್ರೀಂಕೋರ್ಟ್​ ಕಣ್ಗಾವಲಿನಲ್ಲಿ ತುರ್ತಾಗಿ ಸ್ವತಂತ್ರ ತನಿಖೆ ನಡೆಸಬೇಕು’ ಎಂದು ಎಡಿಟರ್ಸ್​ ಗಿಲ್ಡ್​ ಪತ್ರಿಕಾ ಹೇಳಿಕೆ ಒತ್ತಾಯಿಸಿದೆ.

ಸ್ಪೈವೇರ್ ಬಳಸಿ ಹಲವರ ಬದುಕಿನಲ್ಲಿ ಇಣುಕಿರುವುದು ವಾಕ್​ ಸ್ವಾತಂತ್ರ್ಯ ಮತ್ತು ಮಾಧ್ಯಮ ಸ್ವಾತಂತ್ರ್ಯಗಳ ಮೇಲೆ ನಡೆದ ಹಲ್ಲೆ ಎಂದು ಹೇಳಿರುವ ಎಡಿಟರ್ಸ್​ ಗಿಲ್ಡ್​, ಪತ್ರಿಕೋದ್ಯಮ ಮತ್ತು ರಾಜಕೀಯ ಭಿನ್ನಮತವನ್ನು ಈಗ ಭಯೋತ್ಪಾದನೆಗೆ ಸಮನಾಗಿ ಪರಿಗಣಿಸಲಾಗುತ್ತಿದೆ. ವಾಕ್​ ಸ್ವಾತಂತ್ರ್ಯವನ್ನು ಸರ್ಕಾರ ಖಾತ್ರಿಪಡಿಸದಿದ್ದರೆ ಪ್ರಜಾಪ್ರಭುತ್ವ ಹೇಗೆ ಉಳಿಯಲು ಸಾಧ್ಯ ಎಂದು ಗಿಲ್ಡ್​ ಪ್ರಶ್ನಿಸಿದೆ.

ಸುಪ್ರೀಂಕೋರ್ಟ್​​ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ದೌರ್ಜನ್ಯದ ಅರೋಪ ಮಾಡಿದ್ದ ಮಹಿಳೆ ಮತ್ತು 40 ಪತ್ರಕರ್ತರು, ರಾಜಕೀಯ ನಾಯಕರಾದ ರಾಹುಲ್ ಗಾಂಧಿ, ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್ ಕಿಶೋರ್ ಸೇರಿ ಹಲವರ ಮೇಲೆ ಪೆಗಾಸಸ್ ಮೂಲಕ ನಿಗಾ ಇರಿಸಲಾಗಿತ್ತು ಎಂದು ದಿ ವೈರ್ ಜಾಲತಾಣ ವರದಿ ಮಾಡಿತ್ತು.

(Editors Guild Seeks Supreme Court Monitored Probe Into Pegasus Snooping Allegations)

ಇದನ್ನೂ ಓದಿ: ಭಾರತದ ವಿರುದ್ಧ ಅಮ್ನೆಸ್ಟಿ, ಪೆಗಾಸಸ್​ ಹುನ್ನಾರ: ಅಶ್ವತ್ಥ ನಾರಾಯಣ ಆರೋಪ

ಇದನ್ನೂ ಓದಿ: ಕರ್ನಾಟಕ ರಾಜಕಾರಣದಲ್ಲೂ ಪೆಗಾಸಸ್ ನೆರಳು; ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಸಿದ್ದರಾಮಯ್ಯ, ಡಾ ಪರಮೇಶ್ವರ್ ಫೋನ್ ಕದ್ದಾಲಿಕೆ ಆರೋಪ

Published On - 10:03 pm, Wed, 21 July 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ