AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಅಸಂವಿಧಾನಿಕ ಹಲ್ಲೆ: ಪೆಗಾಸಸ್ ಹಸ್ತಕ್ಷೇಪದ ಬಗ್ಗೆ ಸುಪ್ರೀಂಕೋರ್ಟ್​ ನಿಗಾ ತನಿಖೆಗೆ ಎಡಿಟರ್ಸ್​ ಗಿಲ್ಡ್​ ಆಗ್ರಹ

ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ವ್ಯಾಪಾರಸ್ಥರು ಮತ್ತು ರಾಜಕಾರಿಣಿಗಳ ಮೇಲೆ ಪೆಗಾಸಸ್ ಮೂಲಕ ಸರ್ಕಾರದ ಸಂಸ್ಥೆಗಳು ಕಣ್ಗಾವಲು ಇರಿಸಿರುವುದನ್ನು ಎಡಿಟರ್ಸ್​ ಗಿಲ್ಡ್​ ಖಂಡಿಸಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಅಸಂವಿಧಾನಿಕ ಹಲ್ಲೆ: ಪೆಗಾಸಸ್ ಹಸ್ತಕ್ಷೇಪದ ಬಗ್ಗೆ ಸುಪ್ರೀಂಕೋರ್ಟ್​ ನಿಗಾ ತನಿಖೆಗೆ ಎಡಿಟರ್ಸ್​ ಗಿಲ್ಡ್​ ಆಗ್ರಹ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 21, 2021 | 10:05 PM

Share

ದೆಹಲಿ: ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ವ್ಯಾಪಾರಸ್ಥರು ಮತ್ತು ರಾಜಕಾರಿಣಿಗಳ ಮೇಲೆ ಇಸ್ರೇಲಿ ಗೂಢಚರ್ಯೆ ಸಂಸ್ಥೆ ಅಭಿವೃದ್ಧಿಪಡಿಸಿರುವ ಪೆಗಾಸಸ್ ಮೂಲಕ ಸರ್ಕಾರದ ಸಂಸ್ಥೆಗಳು ಕಣ್ಗಾವಲು ಇರಿಸಿರುವುದನ್ನು ಖಂಡಿಸಿರುವ ಎಡಿಟರ್ಸ್​ ಗಿಲ್ಡ್​, ಈ ಬಗ್ಗೆ ಸುಪ್ರೀಂಕೋರ್ಟ್​ ಕಣ್ಗಾವಲಿನಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ.

‘ಈ ಪ್ರಕರಣದ ಸುಪ್ರೀಂಕೋರ್ಟ್​ ಕಣ್ಗಾವಲಿನಲ್ಲಿ ತುರ್ತಾಗಿ ಸ್ವತಂತ್ರ ತನಿಖೆ ನಡೆಸಬೇಕು’ ಎಂದು ಎಡಿಟರ್ಸ್​ ಗಿಲ್ಡ್​ ಪತ್ರಿಕಾ ಹೇಳಿಕೆ ಒತ್ತಾಯಿಸಿದೆ.

ಸ್ಪೈವೇರ್ ಬಳಸಿ ಹಲವರ ಬದುಕಿನಲ್ಲಿ ಇಣುಕಿರುವುದು ವಾಕ್​ ಸ್ವಾತಂತ್ರ್ಯ ಮತ್ತು ಮಾಧ್ಯಮ ಸ್ವಾತಂತ್ರ್ಯಗಳ ಮೇಲೆ ನಡೆದ ಹಲ್ಲೆ ಎಂದು ಹೇಳಿರುವ ಎಡಿಟರ್ಸ್​ ಗಿಲ್ಡ್​, ಪತ್ರಿಕೋದ್ಯಮ ಮತ್ತು ರಾಜಕೀಯ ಭಿನ್ನಮತವನ್ನು ಈಗ ಭಯೋತ್ಪಾದನೆಗೆ ಸಮನಾಗಿ ಪರಿಗಣಿಸಲಾಗುತ್ತಿದೆ. ವಾಕ್​ ಸ್ವಾತಂತ್ರ್ಯವನ್ನು ಸರ್ಕಾರ ಖಾತ್ರಿಪಡಿಸದಿದ್ದರೆ ಪ್ರಜಾಪ್ರಭುತ್ವ ಹೇಗೆ ಉಳಿಯಲು ಸಾಧ್ಯ ಎಂದು ಗಿಲ್ಡ್​ ಪ್ರಶ್ನಿಸಿದೆ.

ಸುಪ್ರೀಂಕೋರ್ಟ್​​ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ದೌರ್ಜನ್ಯದ ಅರೋಪ ಮಾಡಿದ್ದ ಮಹಿಳೆ ಮತ್ತು 40 ಪತ್ರಕರ್ತರು, ರಾಜಕೀಯ ನಾಯಕರಾದ ರಾಹುಲ್ ಗಾಂಧಿ, ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್ ಕಿಶೋರ್ ಸೇರಿ ಹಲವರ ಮೇಲೆ ಪೆಗಾಸಸ್ ಮೂಲಕ ನಿಗಾ ಇರಿಸಲಾಗಿತ್ತು ಎಂದು ದಿ ವೈರ್ ಜಾಲತಾಣ ವರದಿ ಮಾಡಿತ್ತು.

(Editors Guild Seeks Supreme Court Monitored Probe Into Pegasus Snooping Allegations)

ಇದನ್ನೂ ಓದಿ: ಭಾರತದ ವಿರುದ್ಧ ಅಮ್ನೆಸ್ಟಿ, ಪೆಗಾಸಸ್​ ಹುನ್ನಾರ: ಅಶ್ವತ್ಥ ನಾರಾಯಣ ಆರೋಪ

ಇದನ್ನೂ ಓದಿ: ಕರ್ನಾಟಕ ರಾಜಕಾರಣದಲ್ಲೂ ಪೆಗಾಸಸ್ ನೆರಳು; ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಸಿದ್ದರಾಮಯ್ಯ, ಡಾ ಪರಮೇಶ್ವರ್ ಫೋನ್ ಕದ್ದಾಲಿಕೆ ಆರೋಪ

Published On - 10:03 pm, Wed, 21 July 21

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ