AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೀನ್ ಪಟ್ನಾಯಕ್​​​ನ್ನು ವೇದಿಕೆಗೆ ಕರೆದೊಯ್ದ ಧರ್ಮೇಂದ್ರ ಪ್ರಧಾನ್; ಪ್ರಜಾಪ್ರಭುತ್ವದ ಸೊಬಗು ಅಂದ್ರೆ ಇದೇ

ಮಾಜಿ ಸಿಎಂ ನವೀನ್ ಪಟ್ನಾಯಕ್ ಅವರು ರಾಷ್ಟ್ರಪತಿಗಳನ್ನು ಕಂಡ ಕೂಡಲೇ ವೇದಿಕೆ ಬಳಿ ತೆರಳಿ ನಮಸ್ಕರಿಸಿದ್ದಾರೆ. ಆಗ ವೇದಿಕೆಯಲ್ಲಿ ಕುಳಿತಿದ್ದ ಕ್ಯಾಬಿನೆಟ್ ಸಚಿವ ಧರ್ಮೇಂದ್ರ ಪ್ರಧಾನ್, ತಕ್ಷಣವೇ ಕೆಳಗಿಳಿದು, ಪಟ್ನಾಯಕ್ ಅವರ ಕೈ ಹಿಡಿದು, ವೇದಿಕೆಯ ಮೇಲೆ ಕರೆದುಕೊಂಡು ಬಂದು ತಮ್ಮ ಕುರ್ಚಿ ಬಳಿ ಕೂರಿಸಿ ಗೌರವ ತೋರಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ನವೀನ್ ಪಟ್ನಾಯಕ್​​​ನ್ನು ವೇದಿಕೆಗೆ ಕರೆದೊಯ್ದ ಧರ್ಮೇಂದ್ರ ಪ್ರಧಾನ್; ಪ್ರಜಾಪ್ರಭುತ್ವದ ಸೊಬಗು ಅಂದ್ರೆ ಇದೇ
ಧರ್ಮೇಂದ್ರ ಪ್ರಧಾನ್- ನವೀನ್ ಪಟ್ನಾಯಕ್
ರಶ್ಮಿ ಕಲ್ಲಕಟ್ಟ
|

Updated on: Jul 08, 2024 | 9:34 PM

Share

ದೆಹಲಿ ಜುಲೈ08:ಅಧಿಕಾರ ಮತ್ತು ಸೈದ್ಧಾಂತಿಕ  ರಾಜಕೀಯದಲ್ಲಿ ಇದ್ದದ್ದೇ. ಆದರೆ ವಿವಿಧ ಪಕ್ಷಗಳ ರಾಜಕಾರಣಿಗಳು ಪರಸ್ಪರ ಗೌರವಿಸುವುದು ಇದೆಯಲ್ಲಾ ಪ್ರಜಾಪ್ರಭುತ್ವದ ಸೊಬಗು ಅಂದರೆ ಅದೇ. ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಜಗನ್ನಾಥ ರಥಯಾತ್ರೆಗಾಗಿ ಭಾನುವಾರ ಪುರಿ ತಲುಪಿದ್ದು, ಈ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧಪಡಿಸಲಾಗಿತ್ತು. ರಾಜಕೀಯ ನಾಯಕರು, ಅತಿಥಿಗಳು ವೇದಿಕೆ ಮೇಲೆ ಇದ್ದರು. ಇದೇ ವೇಳೆ ಒಡಿಶಾದ (Odisha) ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ (Naveen Patnaik) ವೇದಿಕೆಯ ಬಳಿ ಆಗಮಿಸಿ ವೇದಿಕೆ ಮೇಲಿದ್ದವರಿಗೆ ಶುಭಾಶಯ ಕೋರಿದ್ದಾರೆ. ಇದನ್ನು ಕಂಡ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ವೇದಿಕೆಯಿಂದ ಕೆಳಗಿಳಿದು ನವೀನ್ ಪಟ್ನಾಯಕ್ ಅವರನ್ನು ವೇದಿಕೆಗೆ ಕರೆದೊಯ್ಯುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಮಾಜಿ ಸಿಎಂ ನವೀನ್ ಪಟ್ನಾಯಕ್ ಅವರು ರಾಷ್ಟ್ರಪತಿಗಳನ್ನು ಕಂಡ ಕೂಡಲೇ ವೇದಿಕೆ ಬಳಿ ತೆರಳಿ ನಮಸ್ಕರಿಸಿದ್ದಾರೆ. ಆಗ ವೇದಿಕೆಯಲ್ಲಿ ಕುಳಿತಿದ್ದ ಕ್ಯಾಬಿನೆಟ್ ಸಚಿವ ಧರ್ಮೇಂದ್ರ ಪ್ರಧಾನ್, ತಕ್ಷಣವೇ ಕೆಳಗಿಳಿದು, ಪಟ್ನಾಯಕ್ ಅವರ ಕೈ ಹಿಡಿದು, ವೇದಿಕೆಯ ಮೇಲೆ ಕರೆದುಕೊಂಡು ಬಂದು ತಮ್ಮ ಕುರ್ಚಿ ಬಳಿ ಕೂರಿಸಿ ಗೌರವ ತೋರಿದ್ದಾರೆ.  ಇಂತಹ ಕ್ಷಣಗಳು ರಾಜಕೀಯ ಧುರೀಣರು ಯಾವ ರೀತಿ ಪರಸ್ಪರ ಗೌರವ ಕೊಡುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ.

ವೈರಲ್ ವಿಡಿಯೊ

ನವೀನ್ ಪಟ್ನಾಯಕ್ ಅವರು ಹಮ್ಮು ಬಿಮ್ಮು ಇಲ್ಲದೆ ವೇದಿಕೆಯ ಬಳಿ ಬಂದು ರಾಷ್ಟ್ರಪತಿಯವರಿಗೆ ನಮಸ್ಕರಿಸುತ್ತಿರುವುದು ಒಂದೆಡೆಯಾದರೆ ವೇದಿಕೆಯಿಂದ ಕೆಳಗಿಳಿದು ಬಂದು ಅವರನ್ನು ವೇದಿಕೆಗೆ ಕರೆದೊಯ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ನಡೆ ಅಭಿನಂದನಾರ್ಹವಾಗಿದೆ.

ರಾಜಕೀಯದಲ್ಲಿ ಅಧಿಕಾರ ಬದಲಾದಂತೆ ನಡವಳಿಕೆಯೂ ಬದಲಾಗುತ್ತದೆ. ಆದರೆ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವಿರೋಧ ಪಕ್ಷದ ನಾಯಕ ಎಂದು ಲೆಕ್ಕಿಸದೆ ಒಡಿಶಾದ ಮಾಜಿ ಮುಖ್ಯಮಂತ್ರಿ ಬಳಿಗೆ ಬಂದು ಆತ್ಮೀಯವಾಗಿ ಸ್ವಾಗತಿಸಿದ್ದಲ್ಲದೆ, ವೇದಿಕೆ ಮೇಲೆ ಕರೆತಂದು ಕೂರಿಸಿದರು. ರಾಜಕೀಯದಲ್ಲಿ ಇಂತಹ ಅಪರೂಪದ ದೃಶ್ಯಗಳು ಕಾಣಸಿಗುವುದು ಅಪರೂಪ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ವೇದಿಕೆಯಲ್ಲಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು

ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳವನ್ನು ಕೆಳಗಿಳಿಸಿ ಅಧಿಕಾರಕ್ಕೇರಿಕ್ಕು. 147 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ 78 ಸ್ಥಾನಗಳನ್ನು ಗೆದ್ದರೆ, ಬಿಜೆಡಿ 51 ಸ್ಥಾನಗಳನ್ನು ಗೆದ್ದಿದೆ. ನವೀನ್ ಪಟ್ನಾಯಕ್ ಅವರು ತಮ್ಮ ಸ್ವಂತ ಸ್ಥಾನದಲ್ಲೇ ಸೋತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ