AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eid-ul-Adha 2023: ಸಮಾಜದಲ್ಲಿ ಪರಸ್ಪರ ಸೌಹಾರ್ದತೆ ಹೆಚ್ಚಿಸಲು ಪ್ರತಿಜ್ಞೆ ಮಾಡೋಣ, ಬಕ್ರೀದ್​​ಗೆ​ ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ

ಇಸ್ಲಾಮಿಕ್ ಸಮುದಾಯವು ಆಚರಿಸುವ ಎರಡನೇ ಪ್ರಮುಖ ಹಬ್ಬ ಬಕ್ರೀದ್​​, ಇಂದು ಪ್ರಧಾನಿ ನರೇಂದ್ರ ಮೋದಿ, ಮತ್ತು ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯಗಳನ್ನು ತಿಳಿಸಿದ್ದಾರೆ.

Eid-ul-Adha 2023: ಸಮಾಜದಲ್ಲಿ ಪರಸ್ಪರ ಸೌಹಾರ್ದತೆ ಹೆಚ್ಚಿಸಲು ಪ್ರತಿಜ್ಞೆ ಮಾಡೋಣ, ಬಕ್ರೀದ್​​ಗೆ​ ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ
ರಾಷ್ಟ್ರಪತಿ ಮತ್ತು ಪ್ರಧಾನಿ
ಅಕ್ಷಯ್​ ಪಲ್ಲಮಜಲು​​
|

Updated on: Jun 29, 2023 | 9:47 AM

Share

ದೆಹಲಿ: ಇಂದು (ಜೂನ್​​​29) ಭಾರತದಲ್ಲಿ ಈದ್ ಉಲ್ ಅಧಾ (Eid-ul-Adha) ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಬಕ್ರೀದ್ ತ್ಯಾಗದ ಹಬ್ಬ. ಇದು ಇಸ್ಲಾಮಿಕ್ ಸಮುದಾಯವು ಆಚರಿಸುವ ಎರಡನೇ ಪ್ರಮುಖ ಹಬ್ಬವಾಗಿದೆ. ಈ ದಿನವನ್ನು ಪ್ರವಾದಿ ಇಬ್ರಾಹಿಂ ಅವರು ತಮ್ಮ ಮಗನ ತ್ಯಾಗವನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಈದ್ ಉಲ್ ಅಧಾವನ್ನು ಆಚರಿಸಲಾಗುತ್ತದೆ. ಈ ಹಬ್ಬದಂದು ದೇಶದ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವಿಟರ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಇಂದು ರಾಜ್ಯಾದ್ಯಂತ ಬಕ್ರೀದ್ ಹಬ್ಬವನ್ನು ಅದ್ಧೂರಿಯಿಂದ ಆಚರಣೆ ಮಾಡುತ್ತಾರೆ. ಇಂದು ಇಸ್ಲಾಂ ಧರ್ಮದ ಪವಿತ್ರ ಹಬ್ಬ, ಇಂದು ಪ್ರತಿ ಮನೆಯಲ್ಲೂ ಹಬ್ಬದ ವಾತಾವರಣ, ಬಂಧು-ಬಳಗದವರು ಈ ಹಬ್ಬಕ್ಕೆ ಒಂದೇ ಕಡೆ ಸೇರುತ್ತಾರೆ. ಹೊಸ ಬಟ್ಟೆಗಳನ್ನು ಧರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ. ಸ್ನೇಹಿತರು ಮತ್ತು ಕುಟುಂಬಗಳೊಂದಿಗೆ ಈ ಸಂತೋಷದ ದಿನದಂದು ಉಡುಗೊರೆಗಳು ಮತ್ತು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ: Eid-ul-Adha 2023: ಈದ್-ಉಲ್-ಅಧಾ ಹಬ್ಬದ ದಿನಾಂಕ ಮತ್ತು ವಿಶೇಷತೆಗಳ ಕುರಿತು ಮಾಹಿತಿ ಇಲ್ಲಿದೆ

ಇದೀಗ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಇಸ್ಲಾಂ ಸಮುದಾಯದ ಜನತೆಗೆ ಈದ್ ಉಲ್ ಅಧಾನ ಶುಭಾಶಯಗಳನ್ನು ತಿಳಿಸಿದ್ದಾರೆ. ಈದ್-ಉಲ್-ಅಧಾದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ ಈದ್ ಮುಬಾರಕ್ ಎಂದು ಟ್ವಿಟರ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಇನ್ನು ದೇಶದ ರಾಷ್ಟ್ರಪತಿ ಕೂಡ ದೇಶದ ಇಸ್ಲಾಂ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಈದ್-ಉಜ್-ಜುಹಾ ಈ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.

ಈದ್-ಉಜ್-ಜುಹಾ ಪ್ರೀತಿ, ತ್ಯಾಗದ ಪವಿತ್ರ ಹಬ್ಬವಾಗಿದೆ. ಈ ಹಬ್ಬವು ಪರಿತ್ಯಾಗದ ಮಾರ್ಗವನ್ನು ಅನುಸರಿಸಲು ಮತ್ತು ಮಾನವೀಯತೆಯ ಸೇವೆಯನ್ನು ನಿಸ್ವಾರ್ಥವಾಗಿ ಮಾಡಲು ಪ್ರೇರೇಪಿಸುತ್ತದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಪರಸ್ಪರ ಸೌಹಾರ್ದತೆಯನ್ನು ಹೆಚ್ಚಿಸಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು ಟ್ವಿಟರ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್