AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eid-ul-Adha 2023: ಸಮಾಜದಲ್ಲಿ ಪರಸ್ಪರ ಸೌಹಾರ್ದತೆ ಹೆಚ್ಚಿಸಲು ಪ್ರತಿಜ್ಞೆ ಮಾಡೋಣ, ಬಕ್ರೀದ್​​ಗೆ​ ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ

ಇಸ್ಲಾಮಿಕ್ ಸಮುದಾಯವು ಆಚರಿಸುವ ಎರಡನೇ ಪ್ರಮುಖ ಹಬ್ಬ ಬಕ್ರೀದ್​​, ಇಂದು ಪ್ರಧಾನಿ ನರೇಂದ್ರ ಮೋದಿ, ಮತ್ತು ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯಗಳನ್ನು ತಿಳಿಸಿದ್ದಾರೆ.

Eid-ul-Adha 2023: ಸಮಾಜದಲ್ಲಿ ಪರಸ್ಪರ ಸೌಹಾರ್ದತೆ ಹೆಚ್ಚಿಸಲು ಪ್ರತಿಜ್ಞೆ ಮಾಡೋಣ, ಬಕ್ರೀದ್​​ಗೆ​ ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ
ರಾಷ್ಟ್ರಪತಿ ಮತ್ತು ಪ್ರಧಾನಿ
ಅಕ್ಷಯ್​ ಪಲ್ಲಮಜಲು​​
|

Updated on: Jun 29, 2023 | 9:47 AM

Share

ದೆಹಲಿ: ಇಂದು (ಜೂನ್​​​29) ಭಾರತದಲ್ಲಿ ಈದ್ ಉಲ್ ಅಧಾ (Eid-ul-Adha) ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಬಕ್ರೀದ್ ತ್ಯಾಗದ ಹಬ್ಬ. ಇದು ಇಸ್ಲಾಮಿಕ್ ಸಮುದಾಯವು ಆಚರಿಸುವ ಎರಡನೇ ಪ್ರಮುಖ ಹಬ್ಬವಾಗಿದೆ. ಈ ದಿನವನ್ನು ಪ್ರವಾದಿ ಇಬ್ರಾಹಿಂ ಅವರು ತಮ್ಮ ಮಗನ ತ್ಯಾಗವನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಈದ್ ಉಲ್ ಅಧಾವನ್ನು ಆಚರಿಸಲಾಗುತ್ತದೆ. ಈ ಹಬ್ಬದಂದು ದೇಶದ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವಿಟರ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಇಂದು ರಾಜ್ಯಾದ್ಯಂತ ಬಕ್ರೀದ್ ಹಬ್ಬವನ್ನು ಅದ್ಧೂರಿಯಿಂದ ಆಚರಣೆ ಮಾಡುತ್ತಾರೆ. ಇಂದು ಇಸ್ಲಾಂ ಧರ್ಮದ ಪವಿತ್ರ ಹಬ್ಬ, ಇಂದು ಪ್ರತಿ ಮನೆಯಲ್ಲೂ ಹಬ್ಬದ ವಾತಾವರಣ, ಬಂಧು-ಬಳಗದವರು ಈ ಹಬ್ಬಕ್ಕೆ ಒಂದೇ ಕಡೆ ಸೇರುತ್ತಾರೆ. ಹೊಸ ಬಟ್ಟೆಗಳನ್ನು ಧರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ. ಸ್ನೇಹಿತರು ಮತ್ತು ಕುಟುಂಬಗಳೊಂದಿಗೆ ಈ ಸಂತೋಷದ ದಿನದಂದು ಉಡುಗೊರೆಗಳು ಮತ್ತು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ: Eid-ul-Adha 2023: ಈದ್-ಉಲ್-ಅಧಾ ಹಬ್ಬದ ದಿನಾಂಕ ಮತ್ತು ವಿಶೇಷತೆಗಳ ಕುರಿತು ಮಾಹಿತಿ ಇಲ್ಲಿದೆ

ಇದೀಗ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಇಸ್ಲಾಂ ಸಮುದಾಯದ ಜನತೆಗೆ ಈದ್ ಉಲ್ ಅಧಾನ ಶುಭಾಶಯಗಳನ್ನು ತಿಳಿಸಿದ್ದಾರೆ. ಈದ್-ಉಲ್-ಅಧಾದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ ಈದ್ ಮುಬಾರಕ್ ಎಂದು ಟ್ವಿಟರ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಇನ್ನು ದೇಶದ ರಾಷ್ಟ್ರಪತಿ ಕೂಡ ದೇಶದ ಇಸ್ಲಾಂ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಈದ್-ಉಜ್-ಜುಹಾ ಈ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.

ಈದ್-ಉಜ್-ಜುಹಾ ಪ್ರೀತಿ, ತ್ಯಾಗದ ಪವಿತ್ರ ಹಬ್ಬವಾಗಿದೆ. ಈ ಹಬ್ಬವು ಪರಿತ್ಯಾಗದ ಮಾರ್ಗವನ್ನು ಅನುಸರಿಸಲು ಮತ್ತು ಮಾನವೀಯತೆಯ ಸೇವೆಯನ್ನು ನಿಸ್ವಾರ್ಥವಾಗಿ ಮಾಡಲು ಪ್ರೇರೇಪಿಸುತ್ತದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಪರಸ್ಪರ ಸೌಹಾರ್ದತೆಯನ್ನು ಹೆಚ್ಚಿಸಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು ಟ್ವಿಟರ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು