AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಆಟೋದ ಮೇಲೆ ಬಿದ್ದ ಹೈ ಟೆನ್ಷನ್ ತಂತಿ : 8 ಮಂದಿ ಸಾವು

ಇಂದು ಬೆಳಗ್ಗೆ ಗುಡಂಪಲ್ಲಿಯಿಂದ ಹಲವು ಕಾರ್ಮಿಕರು ಆಟೋದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದರು. ಈ ವೇಳೆ ಆಟೋ ಮೇಲೆ ತಂತಿ ಬಿದ್ದಿದೆ. ಘಟನೆಯಲ್ಲಿ ಐವರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ.

ಚಲಿಸುತ್ತಿದ್ದ ಆಟೋದ ಮೇಲೆ ಬಿದ್ದ ಹೈ ಟೆನ್ಷನ್ ತಂತಿ : 8 ಮಂದಿ ಸಾವು
TV9 Web
| Edited By: |

Updated on:Jun 30, 2022 | 4:20 PM

Share

ಹೈದರಾಬಾದ್: ಹೈ ಟೆನ್ಷನ್ ತಂತಿ(High Tension Wire) ತಗುಲಿ ಆಟೋ ಹೊತ್ತಿ ಉರಿದಿದ್ದು 8 ಮಂದಿ‌ ಸಜೀವ ದಹನ ಆಗಿರುವ ದುರ್ಘಟನೆ ಆಂಧ್ರದ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. ಧರ್ಮಾವರಂ ಕಡೆ ಕೂಲಿಗೆ ತೆರಳುತಿದ್ದ 8 ಮಂದಿ‌ ಕೂಲಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಗುಡಂಪಲ್ಲಿ ಗ್ರಾಮದ ಮೇಲೆ ಹಾದು ಹೋಗಿದ್ದ ಹೈಟೆನ್ಷನ್ ವಿದ್ಯುತ್ ತಂತಿ, ಕಾರ್ಮಿಕರು ಪ್ರಯಾಣಿಸುತ್ತಿದ್ದ ಆಟೋಗೆ ತಗುಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಈ ಪರಿಣಾಮ ಸ್ಥಳದಲ್ಲಿಯೇ ಎಂಟು ಮಂದಿ ಸಜೀವ ದಹನಗೊಂಡಿದ್ದಾರೆ. ತಾಡಿಮುರ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇಂದು ಬೆಳಗ್ಗೆ ಗುಡಂಪಲ್ಲಿಯಿಂದ ಹಲವು ಕಾರ್ಮಿಕರು ಆಟೋದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದರು. ಈ ವೇಳೆ ಆಟೋ ಮೇಲೆ ತಂತಿ ಬಿದ್ದಿದೆ. ಘಟನೆಯಲ್ಲಿ ಐವರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು ಕೆಲ ಗಾಯಾಳುಗಳನ್ನು ಆಸ್ಪತ್ರೆ ರವಾನಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದೆ. ಇನ್ನು ಮೃತರಿಗೆ ಆಂಧ್ರ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಸಂತಾಪ ಸೂಚಿಸಿದ್ದು, ಮೃತ ಕುಟುಂಬಕ್ಕೆ 10 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಇದರ ಜೊತೆಗೆ ಆಂಧ್ರಪ್ರದೇಶದ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರು ಮೃತರ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಸದಾ ಹಸಿವಿನ ಅನುಭವವಾಗುತ್ತದೆಯೇ? ನಿಮಗೆ ಈ ಕಾಯಿಲೆ ಇರಬಹುದು

ಹಲವು ಕಾರ್ಮಿಕರು ಪ್ರಯಾಣಿಸುತ್ತಿದ್ದ ಆಟೋಗೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಈ ಅವಘಡ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಶ್ರೀ ಹರಿಚಂದನ್ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ರಾಜ್ಯಪಾಲರು ಜಿಲ್ಲಾಡಳಿತಕ್ಕೆ ಸೂಚಿಸಿದ್ರು.

Published On - 4:10 pm, Thu, 30 June 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!