AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಆಟೋದ ಮೇಲೆ ಬಿದ್ದ ಹೈ ಟೆನ್ಷನ್ ತಂತಿ : 8 ಮಂದಿ ಸಾವು

ಇಂದು ಬೆಳಗ್ಗೆ ಗುಡಂಪಲ್ಲಿಯಿಂದ ಹಲವು ಕಾರ್ಮಿಕರು ಆಟೋದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದರು. ಈ ವೇಳೆ ಆಟೋ ಮೇಲೆ ತಂತಿ ಬಿದ್ದಿದೆ. ಘಟನೆಯಲ್ಲಿ ಐವರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ.

ಚಲಿಸುತ್ತಿದ್ದ ಆಟೋದ ಮೇಲೆ ಬಿದ್ದ ಹೈ ಟೆನ್ಷನ್ ತಂತಿ : 8 ಮಂದಿ ಸಾವು
TV9 Web
| Edited By: |

Updated on:Jun 30, 2022 | 4:20 PM

Share

ಹೈದರಾಬಾದ್: ಹೈ ಟೆನ್ಷನ್ ತಂತಿ(High Tension Wire) ತಗುಲಿ ಆಟೋ ಹೊತ್ತಿ ಉರಿದಿದ್ದು 8 ಮಂದಿ‌ ಸಜೀವ ದಹನ ಆಗಿರುವ ದುರ್ಘಟನೆ ಆಂಧ್ರದ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. ಧರ್ಮಾವರಂ ಕಡೆ ಕೂಲಿಗೆ ತೆರಳುತಿದ್ದ 8 ಮಂದಿ‌ ಕೂಲಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಗುಡಂಪಲ್ಲಿ ಗ್ರಾಮದ ಮೇಲೆ ಹಾದು ಹೋಗಿದ್ದ ಹೈಟೆನ್ಷನ್ ವಿದ್ಯುತ್ ತಂತಿ, ಕಾರ್ಮಿಕರು ಪ್ರಯಾಣಿಸುತ್ತಿದ್ದ ಆಟೋಗೆ ತಗುಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಈ ಪರಿಣಾಮ ಸ್ಥಳದಲ್ಲಿಯೇ ಎಂಟು ಮಂದಿ ಸಜೀವ ದಹನಗೊಂಡಿದ್ದಾರೆ. ತಾಡಿಮುರ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇಂದು ಬೆಳಗ್ಗೆ ಗುಡಂಪಲ್ಲಿಯಿಂದ ಹಲವು ಕಾರ್ಮಿಕರು ಆಟೋದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದರು. ಈ ವೇಳೆ ಆಟೋ ಮೇಲೆ ತಂತಿ ಬಿದ್ದಿದೆ. ಘಟನೆಯಲ್ಲಿ ಐವರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು ಕೆಲ ಗಾಯಾಳುಗಳನ್ನು ಆಸ್ಪತ್ರೆ ರವಾನಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದೆ. ಇನ್ನು ಮೃತರಿಗೆ ಆಂಧ್ರ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಸಂತಾಪ ಸೂಚಿಸಿದ್ದು, ಮೃತ ಕುಟುಂಬಕ್ಕೆ 10 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಇದರ ಜೊತೆಗೆ ಆಂಧ್ರಪ್ರದೇಶದ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರು ಮೃತರ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಸದಾ ಹಸಿವಿನ ಅನುಭವವಾಗುತ್ತದೆಯೇ? ನಿಮಗೆ ಈ ಕಾಯಿಲೆ ಇರಬಹುದು

ಹಲವು ಕಾರ್ಮಿಕರು ಪ್ರಯಾಣಿಸುತ್ತಿದ್ದ ಆಟೋಗೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಈ ಅವಘಡ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಶ್ರೀ ಹರಿಚಂದನ್ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ರಾಜ್ಯಪಾಲರು ಜಿಲ್ಲಾಡಳಿತಕ್ಕೆ ಸೂಚಿಸಿದ್ರು.

Published On - 4:10 pm, Thu, 30 June 22

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!