AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಆಟೋದ ಮೇಲೆ ಬಿದ್ದ ಹೈ ಟೆನ್ಷನ್ ತಂತಿ : 8 ಮಂದಿ ಸಾವು

ಇಂದು ಬೆಳಗ್ಗೆ ಗುಡಂಪಲ್ಲಿಯಿಂದ ಹಲವು ಕಾರ್ಮಿಕರು ಆಟೋದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದರು. ಈ ವೇಳೆ ಆಟೋ ಮೇಲೆ ತಂತಿ ಬಿದ್ದಿದೆ. ಘಟನೆಯಲ್ಲಿ ಐವರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ.

ಚಲಿಸುತ್ತಿದ್ದ ಆಟೋದ ಮೇಲೆ ಬಿದ್ದ ಹೈ ಟೆನ್ಷನ್ ತಂತಿ : 8 ಮಂದಿ ಸಾವು
TV9 Web
| Edited By: ಆಯೇಷಾ ಬಾನು|

Updated on:Jun 30, 2022 | 4:20 PM

Share

ಹೈದರಾಬಾದ್: ಹೈ ಟೆನ್ಷನ್ ತಂತಿ(High Tension Wire) ತಗುಲಿ ಆಟೋ ಹೊತ್ತಿ ಉರಿದಿದ್ದು 8 ಮಂದಿ‌ ಸಜೀವ ದಹನ ಆಗಿರುವ ದುರ್ಘಟನೆ ಆಂಧ್ರದ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. ಧರ್ಮಾವರಂ ಕಡೆ ಕೂಲಿಗೆ ತೆರಳುತಿದ್ದ 8 ಮಂದಿ‌ ಕೂಲಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಗುಡಂಪಲ್ಲಿ ಗ್ರಾಮದ ಮೇಲೆ ಹಾದು ಹೋಗಿದ್ದ ಹೈಟೆನ್ಷನ್ ವಿದ್ಯುತ್ ತಂತಿ, ಕಾರ್ಮಿಕರು ಪ್ರಯಾಣಿಸುತ್ತಿದ್ದ ಆಟೋಗೆ ತಗುಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಈ ಪರಿಣಾಮ ಸ್ಥಳದಲ್ಲಿಯೇ ಎಂಟು ಮಂದಿ ಸಜೀವ ದಹನಗೊಂಡಿದ್ದಾರೆ. ತಾಡಿಮುರ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇಂದು ಬೆಳಗ್ಗೆ ಗುಡಂಪಲ್ಲಿಯಿಂದ ಹಲವು ಕಾರ್ಮಿಕರು ಆಟೋದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದರು. ಈ ವೇಳೆ ಆಟೋ ಮೇಲೆ ತಂತಿ ಬಿದ್ದಿದೆ. ಘಟನೆಯಲ್ಲಿ ಐವರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು ಕೆಲ ಗಾಯಾಳುಗಳನ್ನು ಆಸ್ಪತ್ರೆ ರವಾನಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದೆ. ಇನ್ನು ಮೃತರಿಗೆ ಆಂಧ್ರ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಸಂತಾಪ ಸೂಚಿಸಿದ್ದು, ಮೃತ ಕುಟುಂಬಕ್ಕೆ 10 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಇದರ ಜೊತೆಗೆ ಆಂಧ್ರಪ್ರದೇಶದ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರು ಮೃತರ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಸದಾ ಹಸಿವಿನ ಅನುಭವವಾಗುತ್ತದೆಯೇ? ನಿಮಗೆ ಈ ಕಾಯಿಲೆ ಇರಬಹುದು

ಹಲವು ಕಾರ್ಮಿಕರು ಪ್ರಯಾಣಿಸುತ್ತಿದ್ದ ಆಟೋಗೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಈ ಅವಘಡ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಶ್ರೀ ಹರಿಚಂದನ್ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ರಾಜ್ಯಪಾಲರು ಜಿಲ್ಲಾಡಳಿತಕ್ಕೆ ಸೂಚಿಸಿದ್ರು.

Published On - 4:10 pm, Thu, 30 June 22

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು