AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಡಾಬಾ ಬಳಿ ನಿಂತಿದ್ದ ಬಸ್‌ಗೆ ಟ್ರಕ್ ಡಿಕ್ಕಿ, 18 ಜನರ ಸಾವು

ಪಲ್‌ವಲ್‌ನಿಂದ ಬಿಹಾರಕ್ಕೆ ಬಸ್‌ನಲ್ಲಿ ತೆರಳುತ್ತಿದ್ದ ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

Accident: ಡಾಬಾ ಬಳಿ ನಿಂತಿದ್ದ ಬಸ್‌ಗೆ ಟ್ರಕ್ ಡಿಕ್ಕಿ, 18 ಜನರ ಸಾವು
ಡಾಬಾ ಬಳಿ ನಿಂತಿದ್ದ ಬಸ್‌ಗೆ ಟ್ರಕ್ ಡಿಕ್ಕಿ, 18 ಜನರ ಸಾವು
TV9 Web
| Edited By: |

Updated on:Jul 28, 2021 | 9:35 AM

Share

ಲಕ್ನೋ: ಡಾಬಾ ಬಳಿ ನಿಂತಿದ್ದ ಬಸ್‌ಗೆ ಟ್ರಕ್ ಡಿಕ್ಕಿಯಾಗಿ 18 ಜನರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಪಲ್‌ವಲ್‌ನಿಂದ ಬಿಹಾರಕ್ಕೆ ಬಸ್‌ನಲ್ಲಿ ತೆರಳುತ್ತಿದ್ದ ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ರಾಮ್ ಸಾನೆಹಿಘಾಟ್ ಪೊಲೀಸ್ ವೃತ್ತದ ಬಳಿಯ ಲಕ್ನೋ-ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಬಲ್ ಡೆಕ್ಕರ್ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದು ಹದಿನೆಂಟು ಜನರು ಮೃತಪಟ್ಟಿದ್ದಾರೆ. ಹಾಗೂ 15 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಲಕ್ನೋದ ಆಘಾತ ಕೇಂದ್ರಕ್ಕೆ ಕಳುಹಿಸಲಾಗಿದೆ. ವರದಿಗಳ ಪ್ರಕಾರ, ಬುಧವಾರ ಮುಂಜಾನೆ ಅಪಘಾತ ಸಂಭವಿಸಿದೆ. ಬಸ್ ಹರಿಯಾಣದಿಂದ ಬಿಹಾರಕ್ಕೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ.

ಅಯೋಧ್ಯೆಯ ಗಡಿಯಲ್ಲಿರುವ ಕಲ್ಯಾಣಿ ನದಿ ಸೇತುವೆಯ ಬಳಿ ಆಕ್ಸಲ್ ಸ್ಥಗಿತಗೊಂಡ(Axle Breakdown) ಕಾರಣ ಡಬಲ್ ಡೆಕ್ಕರ್ ಬಸ್ ಅನ್ನು ನಿಲ್ಲಿಸಲಾಗಿತ್ತು. ಭಾರೀ ಮಳೆ ಮತ್ತು ಕತ್ತಲ ಕಾರಣದಿಂದಾಗಿ ಲಕ್ನೋದಿಂದ ಅತಿ ವೇಗದಲ್ಲಿ ಬರುತ್ತಿದ್ದ ಟ್ರಕ್ ಬಸ್‌ಗೆ ಡಿಕ್ಕಿ ಹೊಡೆದಿದೆ. ಘರ್ಷಣೆ ಎಷ್ಟು ಪ್ರಬಲವಾಗಿದೆಯೆಂದರೆ, ಅವರಲ್ಲಿದ್ದ ಹೆಚ್ಚಿನವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸಿದಾಗ ಕೆಲ ಪ್ರಯಾಣಿಕರು ಬಸ್‌ನಿಂದ ಇಳಿದು ರಸ್ತೆಬದಿ ಮಲಗಿದ್ದರು.

ಅಪಘಾತದ ನಂತರ, ರಾಷ್ಟ್ರೀಯ ಹೆದ್ದಾರಿಯ ಐದು ಕಿಲೋಮೀಟರ್ ಟ್ರಾಫಿಕ್ ಜಾಮ್ ಆಗಿದೆ. ಸದ್ಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಆಸ್ಪತ್ರೆ ದಾಖಲಿಸಿ ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ. ಮೃತರಲ್ಲಿ ಸುರೇಶ್ ಯಾದವ್, ಇಂದಲ್ ಮಹ್ತೋ, ಸಿಕಂದರ್ ಮುಖಿಯಾ, ಮೋನು ಸಾಹ್ನಿ, ಜಗದೀಶ್ ಸಾಹ್ನಿ, ಜೈ ಬಹದ್ದೂರ್ ಸಾಹ್ನಿ, ಬೈಜ್ನಾಥ್ ರಾಮ್ ಮತ್ತು ಬಲರಾಮ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇಗೌಡಗೆ ಅಪಘಾತ: ಆಸ್ಪತ್ರೆಗೆ ದಾಖಲು

Published On - 7:43 am, Wed, 28 July 21

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್