ಆತನ ವಯಸ್ಸಿಗೆ ತಕ್ಕಂತೆ ಮಾತನಾಡಲಿ; ಆದಿತ್ಯ ಠಾಕ್ರೆ ವಿರುದ್ಧ ಸಿಎಂ ಏಕನಾಥ್ ಶಿಂಧೆ ವಾಗ್ದಾಳಿ

ಆದಿತ್ಯ ಠಾಕ್ರೆ ತಮ್ಮ ವಯಸ್ಸನ್ನು ಅರಿತು ಮಾತನಾಡಬೇಕು. ಅವರು ಮತ್ತು ಇತರರು ಅಧಿಕಾರಕ್ಕಾಗಿ ಬಾಳಾಸಾಹೇಬರ ಚಿಂತನೆಯಿಂದ ದೂರ ಸರಿದರು. ಅದೇ ನಮ್ಮನ್ನು ಬಂಡಾಯವೆದ್ದು, ಈ ದಿಟ್ಟ ನಿರ್ಧಾರ ತೆಗೆದುಕೊಳ್ಳುವಂತೆ ಮಾಡಿತು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.

ಆತನ ವಯಸ್ಸಿಗೆ ತಕ್ಕಂತೆ ಮಾತನಾಡಲಿ; ಆದಿತ್ಯ ಠಾಕ್ರೆ ವಿರುದ್ಧ ಸಿಎಂ ಏಕನಾಥ್ ಶಿಂಧೆ ವಾಗ್ದಾಳಿ
ಆದಿತ್ಯ ಠಾಕ್ರೆ - ಏಕನಾಥ್ ಶಿಂಧೆ
Follow us
| Updated By: ಸುಷ್ಮಾ ಚಕ್ರೆ

Updated on: Sep 07, 2022 | 12:00 PM

ನವದೆಹಲಿ: ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ (Uddhav Thackeray) ಅವರ ಪುತ್ರ ಆದಿತ್ಯ ಠಾಕ್ರೆ (Adithya Thackeray) ವಿರುದ್ಧ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಾಗ್ದಾಳಿ ನಡೆಸಿದ್ದು, ಆದಿತ್ಯ ಠಾಕ್ರೆ ತನ್ನ ವಯಸ್ಸನ್ನು ಅರಿತುಕೊಂಡು, ಅದಕ್ಕೆ ತಕ್ಕಂತೆ ಮಾತನಾಡಬೇಕು ಎಂದು ಹೇಳಿದ್ದಾರೆ. ಜೂನ್‌ನಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರದ ಪತನಕ್ಕೆ ಕಾರಣವಾದ ಶಿವಸೇನೆಯ 39 ಶಾಸಕರೊಂದಿಗಿನ ಬಂಡಾಯದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆದಿತ್ಯ ಠಾಕ್ರೆ ಸಿಎಂ ಏಕನಾಥ್ ಶಿಂಧೆ (Eknath Shinde) ಅವರ ವಿರುದ್ಧ ಹಲವಾರು ಸಂದರ್ಭಗಳಲ್ಲಿ ದಾಳಿ ಮಾಡಿದ್ದರು. ಉದ್ಧವ್ ಮತ್ತು ಆದಿತ್ಯ ಠಾಕ್ರೆ ಶಿವಸೇನೆ ಬಂಡುಕೋರರನ್ನು ದೇಶದ್ರೋಹಿಗಳು ಎಂದು ಕರೆದಿದ್ದರು.

ಆದಿತ್ಯ ಠಾಕ್ರೆ ತಮ್ಮ ವಯಸ್ಸನ್ನು ಅರಿತು ಮಾತನಾಡಬೇಕು. ಅವರು ಮತ್ತು ಇತರರು ಅಧಿಕಾರಕ್ಕಾಗಿ ಬಾಳಾಸಾಹೇಬರ ಚಿಂತನೆಯಿಂದ ದೂರ ಸರಿದರು. ಅದೇ ನಮ್ಮನ್ನು ಬಂಡಾಯವೆದ್ದು, ಈ ದಿಟ್ಟ ನಿರ್ಧಾರ ತೆಗೆದುಕೊಳ್ಳುವಂತೆ ಮಾಡಿತು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಬಂಡಾಯ ಶಾಸಕರ ವಿರುದ್ಧ ಆದಿತ್ಯ ಠಾಕ್ರೆ ದೇಶದ್ರೋಹಿ ಎಂದು ವಾಗ್ದಾಳಿ ನಡೆಸಿದ ಹಿನ್ನೆಲೆಯಲ್ಲಿ ಏಕನಾಥ್ ಶಿಂಧೆ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Maharashtra Crisis: ಏಕನಾಥ್ ಶಿಂಧೆ ಸರ್ಕಾರಕ್ಕೆ ರಿಲೀಫ್; ಶಾಸಕರ ಅನರ್ಹತೆ ತೀರ್ಮಾನ ಮುಂದೂಡಲು ಸ್ಪೀಕರ್​ಗೆ ಸುಪ್ರೀಂಕೋರ್ಟ್​ ಸೂಚನೆ​

“ಆದಿತ್ಯ ಅವರು ಜಿದ್ದಾಜಿದ್ದಿಯಲ್ಲಿದ್ದಾಗ ನಾನು ಶಿವಸೇನೆಯಲ್ಲಿ ಸಕ್ರಿಯನಾಗಿದ್ದೆ. ಅವರಿಗೆ ಈಗ ಕೇವಲ 32 ವರ್ಷ. ನಮ್ಮನ್ನು ಟೀಕಿಸಲು ಅವರಿಗೆ ಏನು ಹಕ್ಕಿದೆ? ಅವರು ಯಾರು? ಅವರು ದಿವಂಗತ ಬಾಳಾಸಾಹೇಬ್ ಅಥವಾ ಉದ್ಧವ್ ಠಾಕ್ರೆಯವರ ಆಸ್ತಿಗೆ ವಾರಸುದಾರರಾಗಬಹುದು. ಆದರೆ ಅವರು ಶಿವಸೇನೆ ಪಕ್ಷದ ಪರಂಪರೆಯನ್ನು ಪಡೆಯಲು ಸಾಧ್ಯವಿಲ್ಲ. ನಾವು 35 ವರ್ಷಗಳಿಂದ ಕೇಸರಿ ಬಾವುಟವನ್ನು ಹೆಗಲ ಮೇಲೆ ಹೊತ್ತುಕೊಂಡಿದ್ದೇವೆ. ಆದರೆ ಈಗ ಅವರು ನಮ್ಮನ್ನು ಟೀಕಿಸುತ್ತಿದ್ದಾರೆ ಎಂದು ಏಕನಾಥ್ ಶಿಂಧೆ ಬಣದ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ