AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಹುದ್ದೆಗೆ ಎಂದೂ ಬೇಡಿಕೆಯಿಟ್ಟಿರಲಿಲ್ಲ: ಏಕನಾಥ್ ಶಿಂದೆ

ಮುಖ್ಯಮಂತ್ರಿ ಹುದ್ದೆಗೆ ಎಂದೂ ಬೇಡಿಕೆಯಿಟ್ಟಿರಲಿಲ್ಲ ಎಂದು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂದೆ ಹೇಳಿದ್ದಾರೆ. ಏಕನಾಥ್ ಶಿಂದೆ ಕಳೆದ ವಾರವಷ್ಟೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎನ್​ಡಿಟಿವಿ ಜತೆ ನಡೆದ ಸಂದರ್ಶನದಲ್ಲಿ ಮಾತನಾಡಿರುವ ಅವರು, ‘ನಾನು ಎಂದೂ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಯಿಟ್ಟಿರಲಿಲ್ಲ’ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಹುದ್ದೆಗೆ ಎಂದೂ ಬೇಡಿಕೆಯಿಟ್ಟಿರಲಿಲ್ಲ: ಏಕನಾಥ್ ಶಿಂದೆ
Eknath Shinde
TV9 Web
| Edited By: |

Updated on: Jul 04, 2022 | 10:23 AM

Share

ಮುಂಬೈ: ಮುಖ್ಯಮಂತ್ರಿ ಹುದ್ದೆಗೆ ಎಂದೂ ಬೇಡಿಕೆಯಿಟ್ಟಿರಲಿಲ್ಲ ಎಂದು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂದೆ ಹೇಳಿದ್ದಾರೆ. ಏಕನಾಥ್ ಶಿಂದೆ ಕಳೆದ ವಾರವಷ್ಟೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎನ್​ಡಿಟಿವಿ ಜತೆ ನಡೆದ ಸಂದರ್ಶನದಲ್ಲಿ ಮಾತನಾಡಿರುವ ಅವರು, ‘ನಾನು ಎಂದೂ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಯಿಟ್ಟಿರಲಿಲ್ಲ’ ಎಂದು ತಿಳಿಸಿದ್ದಾರೆ.

ಮಹಾ ವಿಕಾಸ್ ಅಘಾಡಿಯಿಂದ ಪಕ್ಷದ ಕಾರ್ಯಕರ್ತರು ತುಂಬಾ ಬೇಸರಗೊಂಡಿದ್ದಾರೆ, ಹಾಗೆಯೇ ಪಕ್ಷವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೂಡ ಮಾಡಿರಲಿಲ್ಲ. ಆದರೆ ಬಿಜೆಪಿಯು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ತನ್ನ ಹೃದಯ ವೈಶಾಲ್ಯತೆಯನ್ನು ಮೆರೆದಿದೆ.

ನಾವು ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಸಹಾಯವೇ ಕಾರಣ ಎಂದು ನಂಬಿದ್ದಾರೆ ಆದರೆ ಬಿಜೆಪಿಯಷ್ಟೇ ಜನರು ಕೂಡ ಕಾರಣ, ಜತೆಗೆ 115 ಶಾಸಕರೂ ಕೂಡ ಕಾರಣ.

ಸ್ಪೀಕರ್ ಚುನಾವಣೆಯಲ್ಲಿ ಕೂಡ ಒಳ್ಳೆಯ ಮತದೊಂದಿಗೆ ಗೆಲುವು ಸಾಧಿಸಿದ್ದೇವೆ, 116 ಮತಗಳು ದೊರೆತಿವೆ. ಬಂಡಾಯವೆದ್ದು ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಏಕನಾಥ್ ಶಿಂದೆ ಅವರು ಮೊದಲ ಅಗ್ನಿ ಪರೀಕ್ಷೆ ಜಯಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇಂದಿನಿಂದ ಆರಂಭವಾದ ಎರಡು ದಿನಗಳ ವಿಶೇಷ ಅಧಿವೇಶನದಲ್ಲಿ ಸ್ಪೀಕರ್ ಚುನಾವಣೆ ನಡೆದಿದ್ದು, ಶಿಂದೆ ಬಣದ ಬಿಜೆಪಿ ಅಭ್ಯರ್ಥಿ ರಾಹುಲ್ ನಾರ್ವೇಕರ್ ಅವರು ಆಯ್ಕೆಯಾಗಿದ್ದಾರೆ.

ಸೋಮವಾರ ವಿಶ್ವಾಸಮತ ಸಾಬೀತು ಪಡಿಸಬೇಕಾದ ಕಾರಣ ಹೊಸ ಸ್ಪೀಕರ್ ಆಯ್ಕೆ ನಡೆಯಿತು. ಬಿಜೆಪಿಯಿಂದ ರಾಹುಲ್ ನಾರ್ವೇಕರ್ ಮತ್ತು ಶಿವಸೇನೆಯಿಂದ ರಾಜನ್ ಸಾಲ್ವಿ ಅವರು ಕಣದಲ್ಲಿದ್ದರು.

ರಾಜನ್ ಸಾಲ್ವಿಗೆ ಮತ ಹಾಕಬೇಕು ಎಂದು ಶಿವಸೇನೆಯು ಬಂಡಾಯ ಶಾಸಕರು ಸೇರಿದಂತೆ ತನ್ನ ಎಲ್ಲಾ ಶಾಸಕರಿಗೆ ವಿಪ್ ನೀಡಿತ್ತು. ಆದರೆ ಬಂಡಾಯ ಸೇನಾ ಶಾಸಕರು ವಿಪ್ ಮೀರಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಹುಲ್ ನಾರ್ವೇಕರ್ ಅವರು 164 ಮತ ಪಡೆದು ಜಯಿಸಿದ್ದಾರೆ.

ವಿಶೇಷವೆಂದರೆ ರಾಹುಲ್ ನಾರ್ವೇಕರ್ ವಿರುದ್ಧ ಮತ ಹಾಕುವಾಗ ಸಮಾಜವಾದಿ ಪಾರ್ಟಿ ಮತ್ತು ಎಐಎಂಐಎಂ ಶಾಸಕರು ಮತದಾನದಿಂದ ದೂರ ಉಳಿದರು. ಹೀಗಾಗಿ ನಾರ್ವೇಕರ್ ವಿರುದ್ಧ 107 ಮತಗಳಷ್ಟೇ ಬಿತ್ತು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ