AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶವ್ಯಾಪಿ ಕೊರೊನಾ 2ನೇ ಅಲೆ, ಸತ್ತವರಲ್ಲಿ ವೃದ್ಧರೇ ಹೆಚ್ಚು: ಐಸಿಎಂಆರ್

ಕೊವ್ಯಾಕ್ಸಿನ್ ಪಡೆದವರ ಪೈಕಿ ಶೇ 0.04ರಷ್ಟು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೊವಿಶೀಲ್ಡ್ 2ನೇ ಡೋಸ್ ಪಡೆದ ಕೆಲವರಲ್ಲಿಯೂ ಕೊರೊನಾ ದೃಢಪಟ್ಟಿದೆ. ಕೊವಿಶೀಲ್ಡ್ ಪಡೆದ ಶೇ 0.03ರಷ್ಟು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶವ್ಯಾಪಿ ಕೊರೊನಾ 2ನೇ ಅಲೆ, ಸತ್ತವರಲ್ಲಿ ವೃದ್ಧರೇ ಹೆಚ್ಚು: ಐಸಿಎಂಆರ್
ಸಂಗ್ರಹ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 21, 2021 | 8:34 PM

Share

ದೆಹಲಿ: ದೇಶದಾದ್ಯಂತ ಕಂಡುಬರುತ್ತಿರುವ ಕೊರೊನಾ 2ನೇ ಅಲೆಯಲ್ಲಿ ಈವರೆಗೆ ಸತ್ತವರ ಪೈಕಿ 70 ವರ್ಷ ದಾಟಿದವರೇ ಹೆಚ್ಚು ಎಂದು ಕೇಂದ್ರ ಅರೋಗ್ಯ ಇಲಾಖೆ ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (Indian Council of Medical Research – ICMR) ಅಧಿಕಾರಿಗಳು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 2ನೇ ಅಲೆಯಲ್ಲಿ ಮೃತಪಟ್ಟವರ ಒಟ್ಟು ಸಂಖ್ಯೆಯಲ್ಲಿ 70 ವರ್ಷ ಮೇಲ್ಪಟ್ಟವರು ಶೇ.22.17ರಷ್ಟು ಇದ್ದಾರೆ. ಮೊದಲ ಅಲೆಯಲ್ಲಿ ಈ ವಯೋಮಾನದವರ ಸಾವಿನ ಸರಾಸರಿ ಶೇ 19.99ರಷ್ಟು ಇತ್ತು. 2ನೇ ಅಲೆಯಲ್ಲಿ ಮೃತಪಟ್ಟವರ ಒಟ್ಟು ಸಂಖ್ಯೆಯಲ್ಲಿ 80 ವರ್ಷ ಮೇಲ್ಪಟ್ಟವರು ಶೇ 9.81ರಷ್ಟು ಇದ್ದಾರೆ. ಮೊದಲ ಅಲೆಯಲ್ಲಿ ಈ ವಯೋಮಾನದವರ ಸಾವಿನ ಸರಾಸರಿ ಶೇ 7.82ರಷ್ಟು ಇತ್ತು ಎಂದು ಐಸಿಎಂಆರ್​ನ ಬಲರಾಮ್ ಭಾರ್ಗವ ಹೇಳಿದರು.

ದೇಶದಲ್ಲಿ ಈವರೆಗೆ ಶೇ 87ರಷ್ಟು ಆರೋಗ್ಯ ಕಾರ್ಯಕರ್ತರಿಗೆ ಕೊವಿಡ್ ಲಸಿಕೆ ನೀಡಲಾಗಿದೆ. ಈ ಪೈಕಿ ಶೇ 80ರಷ್ಟು ಆರೋಗ್ಯ ಕಾರ್ಯಕರ್ತರು 2ನೇ ಡೋಸ್ ಪಡೆದುಕೊಂಡಿದ್ದಾರೆ. ಕೊವ್ಯಾಕ್ಸಿನ್ ಪಡೆದವರ ಪೈಕಿ ಶೇ 0.04ರಷ್ಟು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೊವಿಶೀಲ್ಡ್ 2ನೇ ಡೋಸ್ ಪಡೆದ ಕೆಲವರಲ್ಲಿಯೂ ಕೊರೊನಾ ದೃಢಪಟ್ಟಿದೆ. ಕೊವಿಶೀಲ್ಡ್ ಪಡೆದ ಶೇ 0.03ರಷ್ಟು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಲಸಿಕ ಪಡೆದ ಬಳಿಕ 5,709 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಅವರು ತಿಳಿಸಿದರು.

Vaccination-Details

ವ್ಯಾಕ್ಸಿನ್ ಪಡೆದವರಲ್ಲಿ ಕೊರೊನಾ ದೃಢಪಟ್ಟ ವಿವರ

ಭಾರತದಲ್ಲಿ 3ನೇ ಅಲೆ ಭಾರತದಲ್ಲಿ ಕೊರೊನಾ 2ನೇ ಅಲೆ ವ್ಯಾಪಿಸಿಕೊಳ್ಳುತ್ತಿರುವ ಈ ಹೊತ್ತಿನಲ್ಲಿಯೇ ಕೆಲ ರಾಜ್ಯಗಳಲ್ಲಿ ಕೊರೊನಾ ಸೋಂಕಿನ 3ನೇ ಅಲೆ ಪತ್ತೆಯಾಗಿದೆ. ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳಗಳಲ್ಲಿ 3ನೇ ಅಲೆ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಸಕ್ರಿಯ ಪ್ರಕರಣ ದ್ವಿಗುಣ ಈ ವರ್ಷ ಕೊರೊನಾ ಸಕ್ರಿಯ ಪ್ರಕರಣಗಳು ದ್ವಿಗುಣಗೊಂಡಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ. ಪ್ರಸ್ತುತ ದೇಶದಲ್ಲಿ 21,57,000 (21 ಲಕ್ಷ) ಸಕ್ರಿಯ ಪ್ರಕರಣಗಳಿವೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ದುಪ್ಪಟ್ಟು ಸಂಖ್ಯೆಯಾಗುತ್ತೆ. ಈವರೆಗೆ ದೇಶದಲ್ಲಿ 13 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 30 ಲಕ್ಷ ಡೋಸ್​ಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.

(Elder people died in more number in 2nd wave of coronavirus says ICMR)

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಇಂದು 23,558 ಮಂದಿಗೆ ಸೋಂಕು, ಕೊರೊನಾದಿಂದ 116 ಜನರ ಸಾವು

ಇದನ್ನೂ ಓದಿ: Chiranjeevi Free Vaccine : ಸಿನಿರಂಗದಲ್ಲಿ ಕೆಲಸ ಮಾಡುವವರಿಗೆ, ಸಿನಿ ಪತ್ರಕರ್ತರಿಗೆ ಮೆಗಾಸ್ಟಾರ್‌ ಚಿರಂಜೀವಿಯಿಂದ ಉಚಿತ ಕೊರೊನಾ ಲಸಿಕೆ.!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!