AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಮಾಚಾರದ ಶಂಕೆ: ಒಡಿಶಾದಲ್ಲಿ ವೃದ್ಧ ದಂಪತಿಯ ಹತ್ಯೆ

ವಾಮಾಚಾರದ ಶಂಕೆಯಲ್ಲಿ ವ್ಯಕ್ತಿಯೊಬ್ಬ ವೃದ್ಧ ದಂಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಒಡಿಶಾದ ಮಯೂರ್​ಭಂಜ್ ಜಿಲ್ಲೆಯಲ್ಲಿ ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಮಾಹಿತಿ ಪ್ರಕಾರ, ಕಿತಾಬೆಡಾದ ಕಿತಾಪದ ಗ್ರಾಮದಲ್ಲಿ ರಾತ್ರಿ 9-10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ದೇವೇಂದ್ರ ನಾಯಕ್ ಹಾಗೂ ಚಂಪಾ ನಾಯಕ್ ದಂಪತಿಯನ್ನು ಹತ್ಯೆ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ಮುಂದುವರೆದಿದೆ.

ವಾಮಾಚಾರದ ಶಂಕೆ: ಒಡಿಶಾದಲ್ಲಿ ವೃದ್ಧ ದಂಪತಿಯ ಹತ್ಯೆ
ಕ್ರೈಂ
ನಯನಾ ರಾಜೀವ್
|

Updated on: Feb 19, 2025 | 8:08 AM

Share

ವಾಮಾಚಾರದ ಶಂಕೆಯಲ್ಲಿ ವ್ಯಕ್ತಿಯೊಬ್ಬ ವೃದ್ಧ ದಂಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಒಡಿಶಾದ ಮಯೂರ್​ಭಂಜ್ ಜಿಲ್ಲೆಯಲ್ಲಿ ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಮಾಹಿತಿ ಪ್ರಕಾರ, ಕಿತಾಬೆಡಾದ ಕಿತಾಪದ ಗ್ರಾಮದಲ್ಲಿ ರಾತ್ರಿ 9-10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ದೇವೇಂದ್ರ ನಾಯಕ್ ಹಾಗೂ ಚಂಪಾ ನಾಯಕ್ ದಂಪತಿಯನ್ನು ಹತ್ಯೆ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ಮುಂದುವರೆದಿದೆ.

ಆರೋಪಿಯನ್ನು 23 ವರ್ಷದ ಅಜಯ್ ನಾಯಕ್ ಎಂದು ಗುರುತಿಸಲಾಗಿದೆ. ಇದು ಮಾಟಮಂತ್ರ ಅಥವಾ ಹಳೆಯ ದ್ವೇಷದ ಪ್ರಕರಣವಾಗಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಪ್ರಕರಣದಲ್ಲಿ ಒಬ್ಬ ವ್ಯಕ್ತಿ ಭಾಗಿಯಾಗಿರುವುದು ಕಂಡುಬಂದಿದೆ. ಈ ವೃದ್ಧ ದಂಪತಿ ಮಾಟ-ಮಂತ್ರ ಮಾಡಿದ್ದರಿಂದಲೇ ತನ್ನ ತಂದೆ ಹಗೂ ಮಗ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಆತ ಆರೋಪಿಸಿದ್ದಾನೆ. ಹೀಗಾಗಿ ಅವರ ಕೊಲೆಗೆ ಯೋಜನೆ ರೂಪಿಸಿದ್ದ.

ದೇವೇಂದ್ರ ಗಿಡಗಳಿಗೆ ನೀರು ಹಾಕುತ್ತಿದ್ದಾಗ ಅಜಯ್ ಅವರ ಬಳಿ ಹೋಗಿ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ, ಇದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದಾದ ಬಳಿಕ ಅವರ ಮನೆಗೆ ನುಗ್ಗಿ ಮಲಗಿದ್ದ ಚಂಪಾ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ದಂಪತಿಯ ಸೊಸೆ ಸುಮಿತ್ರಾ ಅವರು ತಮ್ಮ ನವಜಾತ ಮಗಳೊಂದಿಗೆ ವಿಶ್ರಾಂತಿ ಪಡೆಯುತ್ತಿದ್ದರು. ವೃದ್ಧ ದಂಪತಿಗಳ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಲಾಗಿದೆ. ಆದರೆ, ಆಕೆ ತನ್ನ ಮಗಳೊಂದಿಗೆ ಸ್ಥಳದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದಳು ಮತ್ತು ಮಂಗಳವಾರ ಬೆಳಗ್ಗೆ ತನ್ನ ಸಂಬಂಧಿ ರವೀಂದ್ರ ನಾಯಕ್ ಅವರಿಗೆ ಘಟನೆಯ ಬಗ್ಗೆ ತಿಳಿಸಿದಳು.

ಮತ್ತಷ್ಟು ಓದಿ:ಮಗನ ಸಾವಿಗೆ ಮಾಟ ಮಂತ್ರ ಆರೋಪ: ಒಡ ಹುಟ್ಟಿದ ಅಕ್ಕನಿಗೆ ವಿಷ ಹಾಕಿದ ತಮ್ಮ

ಇದಾದ ನಂತರ ರವೀಂದ್ರ ತಕ್ಷಣವೇ ಬಿಸೋಯಿ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕೆ ಧಾವಿಸಿ ಕೊಲೆಗೆ ಬಳಸಿದ ಆಯುಧವನ್ನು ವಶಪಡಿಸಿಕೊಂಡು ಅಜಯ್‌ನನ್ನು ಬಂಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ