AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕುವ ಆಸೆ ಇಲ್ಲ, ದಯಾಮರಣ ಕೊಡಿ: ಅಪಘಾತದಲ್ಲಿ 9 ಜನರನ್ನು ಕಳೆದುಕೊಂಡು, ಅಧಿಕಾರಿಗಳ ಕಿರುಕುಳಕ್ಕೆ ಬೆಂದ ವೃದ್ಧ ದಂಪತಿಯ ಕಣ್ಣೀರು

ಗುಜರಾತ್‌ನ ಸೂರತ್‌ನಲ್ಲಿ, 2016ರ ಅಪಘಾತದಲ್ಲಿ 9 ಕುಟುಂಬ ಸದಸ್ಯರನ್ನು ಕಳೆದುಕೊಂಡ ಶ್ಯಾಮ್‌ಭಾಯಿ ಮತ್ತು ಮಧುಬೆನ್ ದಂಪತಿ, ಸ್ಥಳೀಯ ಅಧಿಕಾರಿಗಳಿಂದ ತೀವ್ರ ಕಿರುಕುಳಕ್ಕೆ ಒಳಗಾಗಿದ್ದಾರೆ. ನ್ಯಾಯಾಲಯದ ಆದೇಶದ ನಂತರವೂ ಅವರ ಅಂಗಡಿಗಳನ್ನು ಅಕ್ರಮವಾಗಿ ಮುಚ್ಚಲಾಗಿದೆ. ಆರ್ಥಿಕ ಮತ್ತು ಮಾನಸಿಕ ಸಂಕಷ್ಟದಿಂದ ನೊಂದಿರುವ ಈ ವೃದ್ಧ ದಂಪತಿ, ಬದುಕುವ ಆಸೆಯಿಲ್ಲದೆ ಜಿಲ್ಲಾಧಿಕಾರಿಗೆ ದಯಾಮರಣಕ್ಕೆ ಅನುಮತಿ ನೀಡುವಂತೆ ಕಣ್ಣೀರಿಟ್ಟಿದ್ದಾರೆ. ಈ ಘಟನೆ ಗುಜರಾತ್‌ನಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ.

ಬದುಕುವ ಆಸೆ ಇಲ್ಲ, ದಯಾಮರಣ ಕೊಡಿ: ಅಪಘಾತದಲ್ಲಿ 9 ಜನರನ್ನು ಕಳೆದುಕೊಂಡು, ಅಧಿಕಾರಿಗಳ ಕಿರುಕುಳಕ್ಕೆ ಬೆಂದ ವೃದ್ಧ ದಂಪತಿಯ ಕಣ್ಣೀರು
ದಂಪತಿ Image Credit source: India Today
ನಯನಾ ರಾಜೀವ್
|

Updated on: Jun 23, 2026 | 7:45 AM

Share

ಸೂರತ್, ಜೂನ್ 23:ನಮಗೆ ಇನ್ನು ಬದುಕುವ ಆಸೆ ಉಳಿದಿಲ್ಲ, ನ್ಯಾಯ ಸಿಗದಿದ್ದರೆ ಸಾವು ಮಾತ್ರ ನಮಗೆ ಏಕೈಕ ದಾರಿ, ನಮಗೆ ದಯಾಮರಣ(Euthanasia )ಕ್ಕೆ ಅನುಮತಿ ಕೊಡಿ ಎಂದು ಗುಜರಾತ್​ನ ಸೂರತ್ ನಗರದ ನಿವಾಸಿ ಶ್ಯಾಮ್​ಭಾಯಿ ಗೆಹ್ಲೋಟ್ ಮತ್ತು ಅವರ ಪತ್ನಿ ಮಧುಬೆನ್ ಜಿಲ್ಲಾಧಿಕಾರಿಗೆ ಪತ್ರ ಬರೆದು ಕಣ್ಣೀರು ಹಾಕಿದ್ದಾರೆ. ಸ್ಥಳೀಯ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರು ತಮಗೆ ಕಳೆದ ಐದು ವರ್ಷಗಳಿಂದ ತೀವ್ರ ಆರ್ಥಿಕ, ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವೃದ್ಧ ದಂಪತಿ ಆರೋಪಿಸಿದ್ದಾರೆ.

ಒಂದೇ ಕುಟುಂಬದ 9 ಜನರ ಸಾವು, ವೃದ್ಧ ದಂಪತಿ ಒಂಟಿ ಈ ದಂಪತಿ ಬದುಕು ಮೊದಲೇ ದುರಂತದಿಂದ ಕೂಡಿತ್ತು. ನವೆಂಬರ್ 7, 2016 ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇವರ ಏಕೈಕ ಮಗ, ಸೊಸೆ, ಮೊಮ್ಮಕ್ಕಳು, ಮಗಳು, ಅಳಿಯ ಸೇರಿದಂತೆ ಒಂದೇ ಕುಟುಂಬದ ಒಂಬತ್ತು ಸದಸ್ಯರು ಸಾವನ್ನಪ್ಪಿದ್ದರು. ಅಂದಿನಿಂದ ಈ ವೃದ್ಧ ದಂಪತಿಗೆ ಜಗತ್ತಿನಲ್ಲಿ ಯಾರು ಇಲ್ಲದೆ, ಒಬ್ಬರನ್ನೊಬ್ಬರು ಆಸರೆ ಮಾಡಿಕೊಂಡು ಬದುಕುತ್ತಿದ್ದಾರೆ. ಬದುಕಿನ ಆಧಾರಕ್ಕಾಗಿ ಸಣ್ಣ ಅಂಗಡಿಗಳನ್ನು ನಂಬಿಕೊಂಡಿದ್ದರು.

ಅಂಗಡಿಗಳಿಗೆ ಬೀಗ: ದಂಪತಿ 2006 ರಲ್ಲಿ ಖರೀದಿಸಿದ್ದ 11 ಸಣ್ಣ ಅಂಗಡಿಗಳಿಗೆ 2021 ರಲ್ಲಿ ಮುನ್ಸಿಪಲ್ ಅಧಿಕಾರಿಗಳು ಯಾವುದೇ ಮುನ್ಸೂಚನೆ ನೀಡದೆ ಬೀಗ (ಸೀಲ್) ಹಾಕಿದ್ದರು. ಇದರ ವಿರುದ್ಧ ವೃದ್ಧ ದಂಪತಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿ ಭೀಕರ ಕಾನೂನು ಹೋರಾಟ ನಡೆಸಿದರು. ಅಗ್ನಿಶಾಮಕ ಇಲಾಖೆಯ ಅನುಕೂಲಕರ ವರದಿಯ ನಂತರ, ಇದೇ ವರ್ಷ ಜನವರಿ 31 ರಂದು ಅವರ ಅಂಗಡಿಗಳನ್ನು ಮತ್ತೆ ತೆರೆಯಲಾಯಿತು.

ಮತ್ತಷ್ಟು ಓದಿ: ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ: ಕಾರಣ ಇಲ್ಲಿದೆ

ಆದರೆ ಕೋರ್ಟ್‌ನಲ್ಲಿ ದಂಪತಿ ಗೆದ್ದ ಕೆಲವೇ ದಿನಗಳಲ್ಲಿ, ಅಂದರೆ ಮೇ 30 ರಂದು ಮುನ್ಸಿಪಲ್ ಇಂಜಿನಿಯರ್ ಸೂಚನೆಯ ಮೇರೆಗೆ ಯಾವುದೇ ಲಿಖಿತ ನೋಟಿಸ್ ನೀಡದೆ ಅಂಗಡಿಗಳಿಗೆ ಮತ್ತೆ ಬೀಗ ಜಡಿಯಲಾಗಿದೆ. ಸ್ಥಳೀಯ ನಾಯಕರನ್ನು ಭೇಟಿಯಾಗುವಂತೆ ಅಧಿಕಾರಿಗಳು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ. ನಮ್ಮ ಅಂಗಡಿಗಳನ್ನು ಕಿತ್ತುಕೊಂಡು, ಆಸ್ತಿಯನ್ನು ತಮ್ಮ ವಶಕ್ಕೆ ಪಡೆಯಲು ಅಧಿಕಾರಿಗಳು ಮತ್ತು ರಾಜಕಾರಣಿಗಳು ಸೇರಿ ಸಂಚು ರೂಪಿಸಿದ್ದಾರೆ ಎಂದು ಶ್ಯಾಮ್‌ಭಾಯಿ ಗೆಹ್ಲೋಟ್ ಆರೋಪಿಸಿದ್ದಾರೆ. ಅಂಗಡಿಗೆ ಸೀಲ್ ಹಾಕಲು ಯಾವುದೇ ಅಧಿಕೃತ ಕಾರಣವನ್ನು ಮಹಾನಗರ ಪಾಲಿಕೆ ನೀಡುತ್ತಿಲ್ಲ ಎಂದು ಅವರು ದೂರಿದ್ದಾರೆ.

ದುಡಿಯುವ ಮಾರ್ಗವಿಲ್ಲದೆ, ಆರ್ಥಿಕವಾಗಿ ಸಂಪೂರ್ಣವಾಗಿ ಸಂಕಷ್ಟ ಎದುರಿಸುತ್ತಿರುವ ಈ ವೃದ್ಧ ದಂಪತಿ, ಅಧಿಕಾರಿಗಳ ದಬ್ಬಾಳಿಕೆಯನ್ನು ಸಹಿಸಲು ಸಾಧ್ಯವಾಗದೆ ಜಿಲ್ಲಾಧಿಕಾರಿಗೆ ಪತ್ರ ಬರೆದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಘಟನೆ ಸದ್ಯ ಇಡೀ ಗುಜರಾತ್‌ನಲ್ಲಿ ಭಾರಿ ಸಂಚಲನ ಮೂಡಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್