AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರತ್​ನ ಫ್ಲ್ಯಾಟ್​ನಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಫ್ಲ್ಯಾಟ್​ವೊಂದರಲ್ಲಿ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ.ಮೇಲ್ನೋಟಕ್ಕೆ ಗೀಸರ್​ನ ಗ್ಯಾಸ್​ ಸೋರಿಕೆಯಾಗಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಈ ಗ್ಯಾಸ್​ನಿಂದ ಉಸಿರುಗಟ್ಟಿ ಸಾವನ್ನಪ್ಪಿರಬಹುದು ಎಂದು ಹೇಳಲಾಗಿದೆ. ಅವರು ಮಲಗುವ ಮುನ್ನ ಒಟ್ಟಿಗೆ ಊಟ ಮಾಡಿದ್ದರಿಂದ ಆಹಾರ ವಿಷಪೂರಿತವಾಗಿರಬಹುದು ಎಂದು ಪೊಲೀಸರು ಶಂಕಿಸಲಾಗಿದೆ. ಆದರೆ, ಒಂಬತ್ತು ಮಂದಿ ಒಟ್ಟಿಗೆ ಊಟ ಮಾಡಿದ್ದು, ಉಳಿದವರು ಸುರಕ್ಷಿತವಾಗಿದ್ದಾರೆ. ಫ್ಲಾಟ್ ಮಾಲೀಕ ಜಸುಬೆನ್ ವಧೇಲ್, ಆಕೆಯ ಸಹೋದರಿಯರಾದ ಶಾಂತಬೆನ್ ವಧೇಲ್ (53) ಮತ್ತು ಗೌರಿಬೆನ್ ಮೇವಾಡ್ (55) ಮತ್ತು ಗೌರಿಬೆನ್ ಅವರ ಪತಿ ಹೀರಾಭಾಯಿ (60) ಅವರ ಶವಗಳು ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾಗಿವೆ.

ಸೂರತ್​ನ ಫ್ಲ್ಯಾಟ್​ನಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ
ನಯನಾ ರಾಜೀವ್
|

Updated on: Jun 16, 2024 | 9:45 AM

Share

ಸೂರತ್‌ನ ಜಹಾಂಗೀರ್‌ಪುರ ಪ್ರದೇಶದ ಫ್ಲ್ಯಾಟ್​ನಲ್ಲಿ ವೃದ್ಧ ಮತ್ತು ಮೂವರು ಮಹಿಳೆಯರು ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಗೀಸರ್​ನ ಗ್ಯಾಸ್​ ಸೋರಿಕೆಯಾಗಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಈ ಗ್ಯಾಸ್​ನಿಂದ ಉಸಿರುಗಟ್ಟಿ ಸಾವನ್ನಪ್ಪಿರಬಹುದು ಎಂದು ಹೇಳಲಾಗಿದೆ.

ಅವರು ಮಲಗುವ ಮುನ್ನ ಒಟ್ಟಿಗೆ ಊಟ ಮಾಡಿದ್ದರಿಂದ ಆಹಾರ ವಿಷಪೂರಿತವಾಗಿರಬಹುದು ಎಂದು ಪೊಲೀಸರು ಶಂಕಿಸಲಾಗಿದೆ. ಆದರೆ, ಒಂಬತ್ತು ಮಂದಿ ಒಟ್ಟಿಗೆ ಊಟ ಮಾಡಿದ್ದು, ಉಳಿದವರು ಸುರಕ್ಷಿತವಾಗಿದ್ದಾರೆ.

ಫ್ಲ್ಯಾಟ್​ ಮಾಲೀಕ ಜಸುಬೆನ್ ವಧೇಲ್, ಆಕೆಯ ಸಹೋದರಿಯರಾದ ಶಾಂತಬೆನ್ ವಧೇಲ್ (53) ಮತ್ತು ಗೌರಿಬೆನ್ ಮೇವಾಡ್ (55) ಮತ್ತು ಗೌರಿಬೆನ್ ಅವರ ಪತಿ ಹೀರಾಭಾಯಿ (60) ಅವರ ಶವಗಳು ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇವರು ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಮಲಗಿದ್ದರು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಅಲ್ಲಿ ಸೆಲೆಬ್ರೆಟಿಯ ಪೈಶಾಚಿಕತೆ ದರ್ಶನ, ಇಲ್ಲೊಬ್ಬ ತನ್ನ ಸ್ನೇಹಿತನನ್ನೇ ಪರಲೋಕಕ್ಕೆ ಕಳಿಸಿದ: ಕಾರಣ ಮಾತ್ರ ಅದೇ!

ಜಶು ಬೆನ್ ಅವರ ಪುತ್ರ ಮುಖೇಶ್ ಅವರು ಬೆಳಗ್ಗೆ ಚಹಾ ನೀಡಲು ಹೋದಾಗ ಯಾವುದೇ ಪ್ರತಿಕ್ರಿಯೆ ಬರದಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡುಹಿಡಿದರು. ವಾಂತಿ ಮಾಡಿಕೊಂಡಿದ್ದರು. ಅವರ ದೇಹದಲ್ಲಿ ಯಾವುದೇ ಗಾಯಗಳು ಅಥವಾ ಗುರುತುಗಳಿಲ್ಲ.

ಪೊಲೀಸರು ಮತ್ತು ತುರ್ತು ಸೇವೆಗಳನ್ನು ಘಟನಾ ಸ್ಥಳಕ್ಕೆ ಕರೆಸಲಾಯಿತು ಮತ್ತು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಯಿತು. ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ