AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರತ್​ನ ಫ್ಲ್ಯಾಟ್​ನಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಫ್ಲ್ಯಾಟ್​ವೊಂದರಲ್ಲಿ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ.ಮೇಲ್ನೋಟಕ್ಕೆ ಗೀಸರ್​ನ ಗ್ಯಾಸ್​ ಸೋರಿಕೆಯಾಗಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಈ ಗ್ಯಾಸ್​ನಿಂದ ಉಸಿರುಗಟ್ಟಿ ಸಾವನ್ನಪ್ಪಿರಬಹುದು ಎಂದು ಹೇಳಲಾಗಿದೆ. ಅವರು ಮಲಗುವ ಮುನ್ನ ಒಟ್ಟಿಗೆ ಊಟ ಮಾಡಿದ್ದರಿಂದ ಆಹಾರ ವಿಷಪೂರಿತವಾಗಿರಬಹುದು ಎಂದು ಪೊಲೀಸರು ಶಂಕಿಸಲಾಗಿದೆ. ಆದರೆ, ಒಂಬತ್ತು ಮಂದಿ ಒಟ್ಟಿಗೆ ಊಟ ಮಾಡಿದ್ದು, ಉಳಿದವರು ಸುರಕ್ಷಿತವಾಗಿದ್ದಾರೆ. ಫ್ಲಾಟ್ ಮಾಲೀಕ ಜಸುಬೆನ್ ವಧೇಲ್, ಆಕೆಯ ಸಹೋದರಿಯರಾದ ಶಾಂತಬೆನ್ ವಧೇಲ್ (53) ಮತ್ತು ಗೌರಿಬೆನ್ ಮೇವಾಡ್ (55) ಮತ್ತು ಗೌರಿಬೆನ್ ಅವರ ಪತಿ ಹೀರಾಭಾಯಿ (60) ಅವರ ಶವಗಳು ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾಗಿವೆ.

ಸೂರತ್​ನ ಫ್ಲ್ಯಾಟ್​ನಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ
ನಯನಾ ರಾಜೀವ್
|

Updated on: Jun 16, 2024 | 9:45 AM

Share

ಸೂರತ್‌ನ ಜಹಾಂಗೀರ್‌ಪುರ ಪ್ರದೇಶದ ಫ್ಲ್ಯಾಟ್​ನಲ್ಲಿ ವೃದ್ಧ ಮತ್ತು ಮೂವರು ಮಹಿಳೆಯರು ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಗೀಸರ್​ನ ಗ್ಯಾಸ್​ ಸೋರಿಕೆಯಾಗಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಈ ಗ್ಯಾಸ್​ನಿಂದ ಉಸಿರುಗಟ್ಟಿ ಸಾವನ್ನಪ್ಪಿರಬಹುದು ಎಂದು ಹೇಳಲಾಗಿದೆ.

ಅವರು ಮಲಗುವ ಮುನ್ನ ಒಟ್ಟಿಗೆ ಊಟ ಮಾಡಿದ್ದರಿಂದ ಆಹಾರ ವಿಷಪೂರಿತವಾಗಿರಬಹುದು ಎಂದು ಪೊಲೀಸರು ಶಂಕಿಸಲಾಗಿದೆ. ಆದರೆ, ಒಂಬತ್ತು ಮಂದಿ ಒಟ್ಟಿಗೆ ಊಟ ಮಾಡಿದ್ದು, ಉಳಿದವರು ಸುರಕ್ಷಿತವಾಗಿದ್ದಾರೆ.

ಫ್ಲ್ಯಾಟ್​ ಮಾಲೀಕ ಜಸುಬೆನ್ ವಧೇಲ್, ಆಕೆಯ ಸಹೋದರಿಯರಾದ ಶಾಂತಬೆನ್ ವಧೇಲ್ (53) ಮತ್ತು ಗೌರಿಬೆನ್ ಮೇವಾಡ್ (55) ಮತ್ತು ಗೌರಿಬೆನ್ ಅವರ ಪತಿ ಹೀರಾಭಾಯಿ (60) ಅವರ ಶವಗಳು ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇವರು ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಮಲಗಿದ್ದರು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಅಲ್ಲಿ ಸೆಲೆಬ್ರೆಟಿಯ ಪೈಶಾಚಿಕತೆ ದರ್ಶನ, ಇಲ್ಲೊಬ್ಬ ತನ್ನ ಸ್ನೇಹಿತನನ್ನೇ ಪರಲೋಕಕ್ಕೆ ಕಳಿಸಿದ: ಕಾರಣ ಮಾತ್ರ ಅದೇ!

ಜಶು ಬೆನ್ ಅವರ ಪುತ್ರ ಮುಖೇಶ್ ಅವರು ಬೆಳಗ್ಗೆ ಚಹಾ ನೀಡಲು ಹೋದಾಗ ಯಾವುದೇ ಪ್ರತಿಕ್ರಿಯೆ ಬರದಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡುಹಿಡಿದರು. ವಾಂತಿ ಮಾಡಿಕೊಂಡಿದ್ದರು. ಅವರ ದೇಹದಲ್ಲಿ ಯಾವುದೇ ಗಾಯಗಳು ಅಥವಾ ಗುರುತುಗಳಿಲ್ಲ.

ಪೊಲೀಸರು ಮತ್ತು ತುರ್ತು ಸೇವೆಗಳನ್ನು ಘಟನಾ ಸ್ಥಳಕ್ಕೆ ಕರೆಸಲಾಯಿತು ಮತ್ತು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಯಿತು. ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ