AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯಸ್ಕ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ; ಗಡ್ಡ ಕತ್ತರಿಸಿ, ಫೊನ್ ಕಸಿದುಕೊಂಡು ಬೆದರಿಕೆ

ಲೋನಿಯ ಹಿರಿಯ ಪೊಲೀಸ್ ಅಧಿಕಾರಿ ಅತುಲ್ ಕುಮಾರ್ ಸೋಂಕರ್, ತನಿಖೆಗೆ ಬೇಕಾದ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. ಈಗ ಠಾಣೆಯಲ್ಲಿ ಇರುವ ಆರೋಪಿ ತನ್ನ ಹೇಳಿಕೆಗಳನ್ನು ದಾಖಲಿಸಬೇಕಿದೆ.

ವಯಸ್ಕ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ; ಗಡ್ಡ ಕತ್ತರಿಸಿ, ಫೊನ್ ಕಸಿದುಕೊಂಡು ಬೆದರಿಕೆ
ಹಲ್ಲೆಗೊಳಗಾದ ಮುಸ್ಲಿಂ ವ್ಯಕ್ತಿ
TV9 Web
| Edited By: |

Updated on: Jun 14, 2021 | 11:15 PM

Share

ದೆಹಲಿ: ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ತೆರಳುತ್ತಿದ್ದ ವೇಳೆ ಹಿರಿಯ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಘಟನೆ ಉತ್ತರ ಪ್ರದೇಶದ, ಘಾಜಿಯಾಬಾದ್ ಜಿಲ್ಲೆಯ ಲೋನಿ ಎಂಬಲ್ಲಿ ಜೂನ್ 5ರಂದು ನಡೆದಿದೆ. ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದ ಅಬ್ದುಲ್ ಸಮದ್ ಎಂಬವರನ್ನು ಹೊರಗೆ ಎಳೆದು ಸಮೀಪದ ಕಾಡಿನಂಥ ಪ್ರದೇಶಕ್ಕೆ ಕರೆದೊಯ್ಯಲಾಗಿದೆ. ಅಲ್ಲಿ ಅವರ ಮೇಲೆ ಹಲ್ಲೆ ಮಾಡಲಾಗಿದೆ.

ವಯಸ್ಕ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸುವಾಗ ದುಷ್ಕರ್ಮಿಗಳು ಜೈ ಶ್ರೀರಾಮ್ ಹಾಗೂ ವಂದೇ ಮಾತರಂ ಎಂದು ಘೋಷಣೆ ಕೂಗಿದ್ದಾರೆ ಎಂದೂ ವರದಿಯಾಗಿದೆ. ಮುಸ್ಲಿಂ ವ್ಯಕ್ತಿಗೂ ಹಾಗೇ ಘೋಷಣೆ ಕೂಗಲು ಒತ್ತಾಯಿಸಿದ್ದಾರೆ. ಬಳಿಕ, ಮರದ ಕೋಲಿನಲ್ಲಿ ಹೊಡೆದು, ಗುದ್ದಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆ ನಡೆಸಿದವರು ಅಬ್ದುಲ್ ಸಮದ್​ರನ್ನು ಪಾಕಿಸ್ತಾನದ ಗೂಢಚಾರಿ ಎಂಬ ನೆಲೆಯಲ್ಲಿಯೂ ಅನುಮಾನಿಸಿದ್ದಾರೆ ಎಂದು ಮಾಹಿತಿ ದೊರಕಿದೆ.

ಹಲ್ಲೆ ನಡೆಸಿದವರಲ್ಲಿ ಒಬ್ಬಾತ ಬಿಳಿ ಬಣ್ಣದ, ಉದ್ದ ಕೈಯ ಟೀಶರ್ಟ್ ಹಾಗೂ ನೀಲಿ ಪ್ಯಾಂಟ್ ಧರಿಸಿದ್ದ. ಅಷ್ಟೇ ಅಲ್ಲದೆ, ಆತ ಚಾಕುವಿನಿಂದ ಮುಸ್ಲಿಂ ವ್ಯಕ್ತಿಯ ಗಡ್ಡ ಕೀಳುವುದಾಗಿ ಬೆದರಿಕೆಯನ್ನೂ ಹಾಕಿ, ದುಷ್ಕೃತ್ಯ ಎಸಗಿದ್ದಾನೆ. ಹಲ್ಲೆ ನಡೆದ ವೇಳೆಯ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಅದರಲ್ಲಿ ಅಬ್ದುಲ್ ಸಮದ್ ಹಲ್ಲೆ ಮಾಡದಂತೆ ಕೇಳಿಕೊಳ್ಳುತ್ತಿರುವುದು ಕಂಡುಬಂದಿದೆ.

ವಿಡಿಯೋದಲ್ಲಿ ಇಬ್ಬರು ಇತರೆ ಯುವಕರು ಸಮದ್ ಮೇಲೆ ಹಲ್ಲೆ ಮಾಡುವುದು ಕಂಡುಬಂದಿದೆ. ಒಬ್ಬಾತ ಕಪ್ಪು ಟೀಶರ್ಟ್ ಹಾಗೂ ಕೆಂಪು ಮೇಲಂಗಿ, ಮತ್ತೊಬ್ಬ ತಿಳಿನೀಲಿ ಟೀಶರ್ಟ್ ಹಾಗೂ ಬೂದು ಬಣ್ಣದ ಪ್ಯಾಂಟ್ ಹಾಕಿರುವುದು ಕಂಡುಬಂದಿದೆ.

ನಾನು ರಿಕ್ಷಾದಲ್ಲಿ ಹೋಗುತ್ತಿರುವಾಗ ಲಿಫ್ಟ್ ಕೇಳಿದ್ದಾರೆ. ಬಳಿಕ, ಮತ್ತಿಬಬ್ರು ವ್ಯಕ್ತಿಗಳು ಜೊತೆಯಾಗಿದ್ದಾರೆ. ಬಳಿಕ, ಸಮೀಪದ ಕಡಿಮೆ ಜನವಸತಿ ಇರುವಂಥಾ ಪ್ರದೇಶದ ಕೋಣೆಯೊಂದಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಹಲ್ಲೆ ಮಾಡಿದ್ದಾರೆ. ಕೆಲವು ಘೋಷಣೆಗಳನ್ನು ಕೂಗಲು ಒತ್ತಾಯಿಸಿದ್ದಾರೆ. ನನ್ನ ಮೊಬೈಲ್ ಫೋನ್ ಕಸಿದುಕೊಂಡಿದ್ದಾರೆ. ಗಡ್ಡ ಕತ್ತರಿಸಿದ್ದಾರೆ ಎಂದು ಸಮದ್ ಘಟನೆಯನ್ನು ವಿವರಿಸಿದ್ದಾರೆ.

ದುಷ್ಕರ್ಮಿಗಳು ಮತ್ತೊಬ್ಬ ಮುಸ್ಲಿಂನ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋವನ್ನು ನನಗೆ ತೋರಿಸಿದ್ದಾರೆ. ಅಲ್ಲದೆ, ತುಂಬಾ ಜನ ಮುಸ್ಲಿಂರಿಗೆ ಹೀಗೇ ಮಾಡಿರುವುದಾಗಿ ಅವರು ಹೇಳಿದ್ದಾರೆ ಎಂದೂ ಸಮದ್ ತಿಳಿಸಿದ್ದಾರೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿ, ಘಟನೆಯ ಮುಖ್ಯ ಆರೋಪಿ ಎಂದು ಕಂಡಿರುವ ಪ್ರವೇಶ್ ಗುಜ್ಜರ್​ನನ್ನು ಬಂಧಿಸಿದ್ದಾರೆ.

ಲೋನಿಯ ಹಿರಿಯ ಪೊಲೀಸ್ ಅಧಿಕಾರಿ ಅತುಲ್ ಕುಮಾರ್ ಸೋಂಕರ್, ತನಿಖೆಗೆ ಬೇಕಾದ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. ಈಗ ಠಾಣೆಯಲ್ಲಿ ಇರುವ ಆರೋಪಿ ತನ್ನ ಹೇಳಿಕೆಗಳನ್ನು ದಾಖಲಿಸಬೇಕಿದೆ.

ಇದನ್ನೂ ಓದಿ: ದೇಶಕ್ಕೆ ಮಾದರಿ ಈ ಮುಸ್ಲಿಂ ವ್ಯಕ್ತಿಯ ಸೇವೆ!

ಮಹಿಳೆಯ ಅಂತ್ಯಕ್ರಿಯೆಗೆ ಬಾರದ ಕುಟುಂಬಸ್ಥರು; ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಂ ಯುವಕರು

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ