AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯಸ್ಕ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ; ಗಡ್ಡ ಕತ್ತರಿಸಿ, ಫೊನ್ ಕಸಿದುಕೊಂಡು ಬೆದರಿಕೆ

ಲೋನಿಯ ಹಿರಿಯ ಪೊಲೀಸ್ ಅಧಿಕಾರಿ ಅತುಲ್ ಕುಮಾರ್ ಸೋಂಕರ್, ತನಿಖೆಗೆ ಬೇಕಾದ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. ಈಗ ಠಾಣೆಯಲ್ಲಿ ಇರುವ ಆರೋಪಿ ತನ್ನ ಹೇಳಿಕೆಗಳನ್ನು ದಾಖಲಿಸಬೇಕಿದೆ.

ವಯಸ್ಕ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ; ಗಡ್ಡ ಕತ್ತರಿಸಿ, ಫೊನ್ ಕಸಿದುಕೊಂಡು ಬೆದರಿಕೆ
ಹಲ್ಲೆಗೊಳಗಾದ ಮುಸ್ಲಿಂ ವ್ಯಕ್ತಿ
TV9 Web
| Edited By: |

Updated on: Jun 14, 2021 | 11:15 PM

Share

ದೆಹಲಿ: ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ತೆರಳುತ್ತಿದ್ದ ವೇಳೆ ಹಿರಿಯ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಘಟನೆ ಉತ್ತರ ಪ್ರದೇಶದ, ಘಾಜಿಯಾಬಾದ್ ಜಿಲ್ಲೆಯ ಲೋನಿ ಎಂಬಲ್ಲಿ ಜೂನ್ 5ರಂದು ನಡೆದಿದೆ. ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದ ಅಬ್ದುಲ್ ಸಮದ್ ಎಂಬವರನ್ನು ಹೊರಗೆ ಎಳೆದು ಸಮೀಪದ ಕಾಡಿನಂಥ ಪ್ರದೇಶಕ್ಕೆ ಕರೆದೊಯ್ಯಲಾಗಿದೆ. ಅಲ್ಲಿ ಅವರ ಮೇಲೆ ಹಲ್ಲೆ ಮಾಡಲಾಗಿದೆ.

ವಯಸ್ಕ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸುವಾಗ ದುಷ್ಕರ್ಮಿಗಳು ಜೈ ಶ್ರೀರಾಮ್ ಹಾಗೂ ವಂದೇ ಮಾತರಂ ಎಂದು ಘೋಷಣೆ ಕೂಗಿದ್ದಾರೆ ಎಂದೂ ವರದಿಯಾಗಿದೆ. ಮುಸ್ಲಿಂ ವ್ಯಕ್ತಿಗೂ ಹಾಗೇ ಘೋಷಣೆ ಕೂಗಲು ಒತ್ತಾಯಿಸಿದ್ದಾರೆ. ಬಳಿಕ, ಮರದ ಕೋಲಿನಲ್ಲಿ ಹೊಡೆದು, ಗುದ್ದಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆ ನಡೆಸಿದವರು ಅಬ್ದುಲ್ ಸಮದ್​ರನ್ನು ಪಾಕಿಸ್ತಾನದ ಗೂಢಚಾರಿ ಎಂಬ ನೆಲೆಯಲ್ಲಿಯೂ ಅನುಮಾನಿಸಿದ್ದಾರೆ ಎಂದು ಮಾಹಿತಿ ದೊರಕಿದೆ.

ಹಲ್ಲೆ ನಡೆಸಿದವರಲ್ಲಿ ಒಬ್ಬಾತ ಬಿಳಿ ಬಣ್ಣದ, ಉದ್ದ ಕೈಯ ಟೀಶರ್ಟ್ ಹಾಗೂ ನೀಲಿ ಪ್ಯಾಂಟ್ ಧರಿಸಿದ್ದ. ಅಷ್ಟೇ ಅಲ್ಲದೆ, ಆತ ಚಾಕುವಿನಿಂದ ಮುಸ್ಲಿಂ ವ್ಯಕ್ತಿಯ ಗಡ್ಡ ಕೀಳುವುದಾಗಿ ಬೆದರಿಕೆಯನ್ನೂ ಹಾಕಿ, ದುಷ್ಕೃತ್ಯ ಎಸಗಿದ್ದಾನೆ. ಹಲ್ಲೆ ನಡೆದ ವೇಳೆಯ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಅದರಲ್ಲಿ ಅಬ್ದುಲ್ ಸಮದ್ ಹಲ್ಲೆ ಮಾಡದಂತೆ ಕೇಳಿಕೊಳ್ಳುತ್ತಿರುವುದು ಕಂಡುಬಂದಿದೆ.

ವಿಡಿಯೋದಲ್ಲಿ ಇಬ್ಬರು ಇತರೆ ಯುವಕರು ಸಮದ್ ಮೇಲೆ ಹಲ್ಲೆ ಮಾಡುವುದು ಕಂಡುಬಂದಿದೆ. ಒಬ್ಬಾತ ಕಪ್ಪು ಟೀಶರ್ಟ್ ಹಾಗೂ ಕೆಂಪು ಮೇಲಂಗಿ, ಮತ್ತೊಬ್ಬ ತಿಳಿನೀಲಿ ಟೀಶರ್ಟ್ ಹಾಗೂ ಬೂದು ಬಣ್ಣದ ಪ್ಯಾಂಟ್ ಹಾಕಿರುವುದು ಕಂಡುಬಂದಿದೆ.

ನಾನು ರಿಕ್ಷಾದಲ್ಲಿ ಹೋಗುತ್ತಿರುವಾಗ ಲಿಫ್ಟ್ ಕೇಳಿದ್ದಾರೆ. ಬಳಿಕ, ಮತ್ತಿಬಬ್ರು ವ್ಯಕ್ತಿಗಳು ಜೊತೆಯಾಗಿದ್ದಾರೆ. ಬಳಿಕ, ಸಮೀಪದ ಕಡಿಮೆ ಜನವಸತಿ ಇರುವಂಥಾ ಪ್ರದೇಶದ ಕೋಣೆಯೊಂದಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಹಲ್ಲೆ ಮಾಡಿದ್ದಾರೆ. ಕೆಲವು ಘೋಷಣೆಗಳನ್ನು ಕೂಗಲು ಒತ್ತಾಯಿಸಿದ್ದಾರೆ. ನನ್ನ ಮೊಬೈಲ್ ಫೋನ್ ಕಸಿದುಕೊಂಡಿದ್ದಾರೆ. ಗಡ್ಡ ಕತ್ತರಿಸಿದ್ದಾರೆ ಎಂದು ಸಮದ್ ಘಟನೆಯನ್ನು ವಿವರಿಸಿದ್ದಾರೆ.

ದುಷ್ಕರ್ಮಿಗಳು ಮತ್ತೊಬ್ಬ ಮುಸ್ಲಿಂನ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋವನ್ನು ನನಗೆ ತೋರಿಸಿದ್ದಾರೆ. ಅಲ್ಲದೆ, ತುಂಬಾ ಜನ ಮುಸ್ಲಿಂರಿಗೆ ಹೀಗೇ ಮಾಡಿರುವುದಾಗಿ ಅವರು ಹೇಳಿದ್ದಾರೆ ಎಂದೂ ಸಮದ್ ತಿಳಿಸಿದ್ದಾರೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿ, ಘಟನೆಯ ಮುಖ್ಯ ಆರೋಪಿ ಎಂದು ಕಂಡಿರುವ ಪ್ರವೇಶ್ ಗುಜ್ಜರ್​ನನ್ನು ಬಂಧಿಸಿದ್ದಾರೆ.

ಲೋನಿಯ ಹಿರಿಯ ಪೊಲೀಸ್ ಅಧಿಕಾರಿ ಅತುಲ್ ಕುಮಾರ್ ಸೋಂಕರ್, ತನಿಖೆಗೆ ಬೇಕಾದ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. ಈಗ ಠಾಣೆಯಲ್ಲಿ ಇರುವ ಆರೋಪಿ ತನ್ನ ಹೇಳಿಕೆಗಳನ್ನು ದಾಖಲಿಸಬೇಕಿದೆ.

ಇದನ್ನೂ ಓದಿ: ದೇಶಕ್ಕೆ ಮಾದರಿ ಈ ಮುಸ್ಲಿಂ ವ್ಯಕ್ತಿಯ ಸೇವೆ!

ಮಹಿಳೆಯ ಅಂತ್ಯಕ್ರಿಯೆಗೆ ಬಾರದ ಕುಟುಂಬಸ್ಥರು; ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಂ ಯುವಕರು

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ