AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ: ವೃದ್ಧೆಯನ್ನು ಕೊಂದು, ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುರುಳರು

ವೃದ್ಧೆಯೊಬ್ಬರನ್ನು ಹತ್ಯೆ ಮಾಡಿ, ತುಂಡು, ತುಂಡಾಗಿ ಕತ್ತರಿಸಿ ನದಿಗೆ ಎಸೆದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ವೃದ್ಧೆ ಕಳೆದ 10 ದಿನಗಳಿಂದ ನಾಪತ್ತೆಯಾಗಿದ್ದರು. ಕೊಲೆಗೆ ಸಂಬಂಧಿಸಿದಂತೆ ವಿರುದುನಗರದಲ್ಲಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚೆನ್ನೈ: ವೃದ್ಧೆಯನ್ನು ಕೊಂದು, ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುರುಳರು
ಕೊಲೆImage Credit source: India Today
ನಯನಾ ರಾಜೀವ್
|

Updated on: Jul 29, 2024 | 8:09 AM

Share

ವೃದ್ಧೆಯೊಬ್ಬರನ್ನು ಹತ್ಯೆ ಮಾಡಿ, ತುಂಡು, ತುಂಡಾಗಿ ಕತ್ತರಿಸಿ ನದಿಗೆ ಎಸೆದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ವೃದ್ಧೆ ಕಳೆದ 10 ದಿನಗಳಿಂದ ನಾಪತ್ತೆಯಾಗಿದ್ದರು. ಕೊಲೆಗೆ ಸಂಬಂಧಿಸಿದಂತೆ ವಿರುದುನಗರದಲ್ಲಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಮಹಿಳೆಯನ್ನು ವಿಜಯಾ ಎಂದು ಗುರುತಿಸಲಾಗಿದ್ದು, ಅವರು ಮೈಲಾಪುರದ ಎಂಜಿಆರ್ ನಗರದಲ್ಲಿ ವಾಸಿಸುತ್ತಿದ್ದರು. ದಿನಗೂಲಿ ಕೆಲಸ ಮಾಡುತ್ತಿದ್ದರು. ಜುಲೈ 17 ರಂದು ವಿಜಯಾ ಕೆಲಸ ಮುಗಿಸಿ ಮನೆಗೆ ಬಾರದೆ ಇದ್ದುದನ್ನು ಕಂಡು ಮಗಳು ಲೋಕನಾಯಕಿ ಆತಂಕಗೊಂಡಿದ್ದರು. ಹುಡುಕಾಟ ನಡೆಸಿದರೂ ಫಲಕಾರಿಯಾಗದೆ ಲೋಕನಾಯಕಿ ಜುಲೈ 19ರಂದು ಎಂಜಿಆರ್ ನಗರ ಪೊಲೀಸರಿಗೆ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ.

ವಿಜಯಾ ನಾಪತ್ತೆಯಾದ ನಂತರ ಎಂಜಿಆರ್ ನಗರ ಪೊಲೀಸರು ತನಿಖೆ ಆರಂಭಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅವರು ಆಕೆಯ ನೆರೆಹೊರೆಯವರಾದ ಪಾರ್ತಿಬನ್ ಮೇಲೆ ಅನುಮಾನಗೊಂಡರು. ಜುಲೈ 23 ರಂದು ಅವರನ್ನು ವಿಚಾರಣೆಗೆ ಕರೆಸಲಾಯಿತು ಆದರೆ ಅವರು ಹಾಜರಾಗಲಿಲ್ಲ.

ಮತ್ತಷ್ಟು ಓದಿ: ನಿಂಬೆಹಣ್ಣು ಇಟ್ಟು ಪೂಜೆ ಮಾಡಿ ಬಳಿಕ ಮನೆ ಬಾಗಿಲು ಮುರಿದು ಕಳ್ಳತನ

ಪಾರ್ಥಿಬನ್‌ನ ಸೆಲ್‌ಫೋನ್ ಟ್ರ್ಯಾಕ್ ಮಾಡಿದ ಪೊಲೀಸರು ವಿರುದುನಗರ ಜಿಲ್ಲೆಯಲ್ಲಿ ಪತ್ನಿಯೊಂದಿಗೆ ತಲೆಮರೆಸಿಕೊಂಡಿದ್ದ ಜಾಗವನ್ನು ಪತ್ತೆ ಮಾಡಿದರು. ಕಳ್ಳತನ ಮಾಡುತ್ತಿದ್ದಾಗ ತಾವು ಸಿಕ್ಕಿಬಿದ್ದ ಬಳಿಕ ಆಕೆಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಆಕೆಯ ಕತ್ತು ಹಿಸುಕಿ, ಆಕೆಯ ದೇಹವನ್ನು ಕತ್ತರಿಸಿ, ಭಾಗಗಳನ್ನು ಅಡ್ಯಾರ್ ನದಿಗೆ ಎಸೆದಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ. ಚಿನ್ನಾಭರಣ ಕದಿಯುವುದೇ ಅವರ ಉದ್ದೇಶವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಹೆಚ್ಚಿನ ತನಿಖೆಗಾಗಿ ದಂಪತಿಯನ್ನು ಚೆನ್ನೈಗೆ ಕರೆತರುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ