AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ: ವೃದ್ಧೆಯನ್ನು ಕೊಂದು, ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುರುಳರು

ವೃದ್ಧೆಯೊಬ್ಬರನ್ನು ಹತ್ಯೆ ಮಾಡಿ, ತುಂಡು, ತುಂಡಾಗಿ ಕತ್ತರಿಸಿ ನದಿಗೆ ಎಸೆದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ವೃದ್ಧೆ ಕಳೆದ 10 ದಿನಗಳಿಂದ ನಾಪತ್ತೆಯಾಗಿದ್ದರು. ಕೊಲೆಗೆ ಸಂಬಂಧಿಸಿದಂತೆ ವಿರುದುನಗರದಲ್ಲಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚೆನ್ನೈ: ವೃದ್ಧೆಯನ್ನು ಕೊಂದು, ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುರುಳರು
ಕೊಲೆImage Credit source: India Today
ನಯನಾ ರಾಜೀವ್
|

Updated on: Jul 29, 2024 | 8:09 AM

Share

ವೃದ್ಧೆಯೊಬ್ಬರನ್ನು ಹತ್ಯೆ ಮಾಡಿ, ತುಂಡು, ತುಂಡಾಗಿ ಕತ್ತರಿಸಿ ನದಿಗೆ ಎಸೆದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ವೃದ್ಧೆ ಕಳೆದ 10 ದಿನಗಳಿಂದ ನಾಪತ್ತೆಯಾಗಿದ್ದರು. ಕೊಲೆಗೆ ಸಂಬಂಧಿಸಿದಂತೆ ವಿರುದುನಗರದಲ್ಲಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಮಹಿಳೆಯನ್ನು ವಿಜಯಾ ಎಂದು ಗುರುತಿಸಲಾಗಿದ್ದು, ಅವರು ಮೈಲಾಪುರದ ಎಂಜಿಆರ್ ನಗರದಲ್ಲಿ ವಾಸಿಸುತ್ತಿದ್ದರು. ದಿನಗೂಲಿ ಕೆಲಸ ಮಾಡುತ್ತಿದ್ದರು. ಜುಲೈ 17 ರಂದು ವಿಜಯಾ ಕೆಲಸ ಮುಗಿಸಿ ಮನೆಗೆ ಬಾರದೆ ಇದ್ದುದನ್ನು ಕಂಡು ಮಗಳು ಲೋಕನಾಯಕಿ ಆತಂಕಗೊಂಡಿದ್ದರು. ಹುಡುಕಾಟ ನಡೆಸಿದರೂ ಫಲಕಾರಿಯಾಗದೆ ಲೋಕನಾಯಕಿ ಜುಲೈ 19ರಂದು ಎಂಜಿಆರ್ ನಗರ ಪೊಲೀಸರಿಗೆ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ.

ವಿಜಯಾ ನಾಪತ್ತೆಯಾದ ನಂತರ ಎಂಜಿಆರ್ ನಗರ ಪೊಲೀಸರು ತನಿಖೆ ಆರಂಭಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅವರು ಆಕೆಯ ನೆರೆಹೊರೆಯವರಾದ ಪಾರ್ತಿಬನ್ ಮೇಲೆ ಅನುಮಾನಗೊಂಡರು. ಜುಲೈ 23 ರಂದು ಅವರನ್ನು ವಿಚಾರಣೆಗೆ ಕರೆಸಲಾಯಿತು ಆದರೆ ಅವರು ಹಾಜರಾಗಲಿಲ್ಲ.

ಮತ್ತಷ್ಟು ಓದಿ: ನಿಂಬೆಹಣ್ಣು ಇಟ್ಟು ಪೂಜೆ ಮಾಡಿ ಬಳಿಕ ಮನೆ ಬಾಗಿಲು ಮುರಿದು ಕಳ್ಳತನ

ಪಾರ್ಥಿಬನ್‌ನ ಸೆಲ್‌ಫೋನ್ ಟ್ರ್ಯಾಕ್ ಮಾಡಿದ ಪೊಲೀಸರು ವಿರುದುನಗರ ಜಿಲ್ಲೆಯಲ್ಲಿ ಪತ್ನಿಯೊಂದಿಗೆ ತಲೆಮರೆಸಿಕೊಂಡಿದ್ದ ಜಾಗವನ್ನು ಪತ್ತೆ ಮಾಡಿದರು. ಕಳ್ಳತನ ಮಾಡುತ್ತಿದ್ದಾಗ ತಾವು ಸಿಕ್ಕಿಬಿದ್ದ ಬಳಿಕ ಆಕೆಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಆಕೆಯ ಕತ್ತು ಹಿಸುಕಿ, ಆಕೆಯ ದೇಹವನ್ನು ಕತ್ತರಿಸಿ, ಭಾಗಗಳನ್ನು ಅಡ್ಯಾರ್ ನದಿಗೆ ಎಸೆದಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ. ಚಿನ್ನಾಭರಣ ಕದಿಯುವುದೇ ಅವರ ಉದ್ದೇಶವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಹೆಚ್ಚಿನ ತನಿಖೆಗಾಗಿ ದಂಪತಿಯನ್ನು ಚೆನ್ನೈಗೆ ಕರೆತರುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ
ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ
‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ
‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ