AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಪಂಚರಾಜ್ಯಗಳ ಚುನಾವಣಾ ಫಲಿತಾಂಶ; ಇಂದು ಕೊವಿಡ್​ 19 ಟೆಸ್ಟ್​ಗಾಗಿ ಮುಗಿಬೀಳುತ್ತಿರುವ ಮತಗಟ್ಟೆ ಏಜೆಂಟ್​ಗಳು

ನಮಗೆ ಸದ್ಯದ ಪರಿಸ್ಥಿತಿಯಲ್ಲಿ ಎಲ್ಲರಿಗೂ RT-PCR ಟೆಸ್ಟ್ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರ್ಯಾಪಿಡ್ ಆ್ಯಂಟಿಜೆನ್​ ಟೆಸ್ಟ್ ಮಾಡಿಸಿಕೊಂಡು, ಅರ್ಧಗಂಟೆಯಲ್ಲಿ ರಿಪೋರ್ಟ್ ಪಡೆಯಬೇಕಾಗಿದೆ ಎನ್ನುತ್ತಾರೆ ಏಜೆಂಟ್​ಗಳು.

ನಾಳೆ ಪಂಚರಾಜ್ಯಗಳ ಚುನಾವಣಾ ಫಲಿತಾಂಶ; ಇಂದು ಕೊವಿಡ್​ 19 ಟೆಸ್ಟ್​ಗಾಗಿ ಮುಗಿಬೀಳುತ್ತಿರುವ ಮತಗಟ್ಟೆ ಏಜೆಂಟ್​ಗಳು
ಕೊವಿಡ್​ ಪರೀಕ್ಷೆ (ಪ್ರಾತಿನಿಧಿಕ ಚಿತ್ರ)
Lakshmi Hegde
|

Updated on: May 01, 2021 | 10:26 AM

Share

ಕೋಲ್ಕತ್ತ: ನಾಳೆ (ಮೇ 2) ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ. ದೇಶಾದ್ಯಂತ ಕೊರೊನಾ ಎರಡನೇ ಅಲೆ ಅಪ್ಪಳಿಸುತ್ತಿರುವ ಈ ಹೊತ್ತಲ್ಲಿ ಮತಎಣಿಕೆ ನಡೆಯಲಿದ್ದು, ಯಾವುದೇ ಪಕ್ಷಗಳು ಗೆದ್ದರೂ ವಿಜಯೋತ್ಸವಕ್ಕೆ ಅವಕಾಶ ಇಲ್ಲ ಎಂದು ಈಗಾಗಲೇ ಚುನಾವಣಾ ಆಯೋಗ ಹೇಳಿದೆ. ಅಲ್ಲದೆ, ಅಭ್ಯರ್ಥಿಯೊಂದಿಗೆ ಇಬ್ಬರು ಮಾತ್ರ ಮತ ಎಣಿಕೆ ಸ್ಥಳಕ್ಕೆ ಆಗಮಿಸಲು ಅವಕಾಶ ನೀಡಲಾಗಿದೆ. ಹಾಗೇ ಅದಕ್ಕೂ ಮೊದಲು ಮತಗಟ್ಟೆ ಏಜೆಂಟ್​ಗಳು ಸೇರಿ, ಅಲ್ಲಿಗೆ ಬರುವ ಪ್ರತಿಯೊಬ್ಬರೂ ಕೊವಿಡ್ 19 ಟೆಸ್ಟ್ ಮಾಡಿಸಿಕೊಂಡು, ನೆಗೆಟಿವ್​ ವರದಿ ತರುವುದು ಕಡ್ಡಾಯ ಎಂದೂ ಚುನಾವಣಾ ಆಯೋಗ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಇಂದು ಕೊರೊನಾ ತಪಾಸಣಾ ಕೇಂದ್ರದ ಬಳಿ ಹಲವು ಅಭ್ಯರ್ಥಿಗಳು, ಅವರ ಸಹಾಯಕರು ಕೊವಿಡ್​ ತಪಾಸಣೆಗಾಗಿ ಗುಂಪುಗೂಡಿದ್ದಾರೆ. ಅದರಲ್ಲೂ ಜಿಲ್ಲಾ ಚುನಾವಣಾ ಅಧಿಕಾರಿಗಳು, ಕೊವಿಡ್ ರ್ಯಾಪಿಡ್​ ಆ್ಯಂಟಿಜನ್ ತಪಾಸಣೆಗಾಗಿ ಪಶ್ಚಿಮಬಂಗಾಳದ ನೇತಾಜಿ ಒಳಾಂಗಣ ಕ್ರಿಡಾಂಗಣ ಮತ್ತು ಬ್ಯಾಲಿಗಂಜ್​ ಸರ್ಕಾರಿ ಶಾಲೆಗಳಲ್ಲಿ ವ್ಯವಸ್ಥೆ ಮಾಡಿದ್ದು, ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಗುಂಪುಗೂಡುತ್ತಿದ್ದಾರೆ. ನಾಳೆ ಮತ ಎಣಿಕೆಗೂ ಮುನ್ನ ಕೊವಿಡ್ ಟೆಸ್ಟ್ ಮಾಡಿಸಿ, ರಿಪೋರ್ಟ್ ಪಡೆಯುವ ಅವಸರದಲ್ಲಿ ಇರುವುದರಿಂದ ಇದೆರಡೂ ಸ್ಥಳಗಳಲ್ಲಿ ಜನಸಂದಣಿ ನಿರ್ಮಾಣ ಆಗಿದೆ.

ನಮಗೆ ಸದ್ಯದ ಪರಿಸ್ಥಿತಿಯಲ್ಲಿ ಎಲ್ಲರಿಗೂ RT-PCR ಟೆಸ್ಟ್ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರ್ಯಾಪಿಡ್ ಆ್ಯಂಟಿಜೆನ್​ ಟೆಸ್ಟ್ ಮಾಡಿಸಿಕೊಂಡು, ಅರ್ಧಗಂಟೆಯಲ್ಲಿ ರಿಪೋರ್ಟ್ ಪಡೆಯಬೇಕಾಗಿದೆ. ಆ ರಿಪೋರ್ಟ್​ನ್ನು ನಾಳೆ ಚುನಾವಣಾ ಅಧಿಕಾರಿಗಳಿಗೆ ನೀಡಿದರೆ ಮಾತ್ರ ಮತ ಎಣಿಕೆ ಕೇಂದ್ರಗಳಿಗೆ ಪ್ರವೇಶ ಸಿಗುತ್ತದೆ ಎಂದು ಜೋರಬಗನ್ ಕ್ಷೇತ್ರದ ತೃಣಮೂಲ ಕಾಂಗ್ರೆಸ್​ ಏಜೆಂಟ್ ಮಣಿಕ್ ಸಿಂಗ್ ತಿಳಿಸಿದ್ದಾರೆ.

ಈಗಾಗಲೇ ಸುಮಾರು ಜನ ಚುನಾವಣಾ ಏಜೆಂಟ್​ಗಳು, ಅವರ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿದೆ. ಹಾಗಾಗಿ ಏಜೆಂಟ್​ಗಳನ್ನು ಆಯಾ ಮತಎಣಿಕೆ ಕೇಂದ್ರಗಳಿಗೆ ಕಳಿಸುವುದಕ್ಕೂ ಮೊದಲು ಅವರ ಕೊವಿಡ್​ 19ತಪಾಸಣೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಜೋರಸಂಕೊದ ಸಂಜುಕ್ತ ಮೋರ್ಚಾ ಅಭ್ಯರ್ಥಿ ಅಜ್ಮಲ್ ಖಾನ್ ತಿಳಿಸಿದ್ದಾರೆ. ಯಾವುದೇ ಏಜೆಂಟ್​ಗೆ ಕೊರೊನಾ ಪಾಸಿಟಿವ್​ ಬಂದರೆ ಅವರ ಬದಲಿಗೆ ಇನ್ನೊಬ್ಬರನ್ನು ಕಳಿಸುತ್ತೇವೆ ಎಂದೂ ತಿಳಿಸಿದ್ದಾರೆ. ಇದೇ ನಿರ್ಧಾರವನ್ನು ಬಹುತೇಕ ಎಲ್ಲ ಪಕ್ಷಗಳೂ ಕೈಗೊಂಡಿವೆ. ಈ ಮಧ್ಯೆ ತೃಣಮೂಲ ಕಾಂಗ್ರೆಸ್​ನಿಂದ ಸಾಧ್ಯವಾದಷ್ಟು ಎರಡೂ ಡೋಸ್ ಲಸಿಕೆ ಪಡೆದವರನ್ನೇ ಏಜೆಂಟ್​ ಆಗಿ ಕಳಿಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಕೊವಿಡ್​ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ ನಟನಿಗೆ 2 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್​

Covid India Update: ದೇಶದಲ್ಲಿ ಕೊವಿಡ್ ಎರಡನೇಯ ಅಲೆ ಹೆಚ್ಚಳ; ಸೋಂಕಿತರ ಸಂಖ್ಯೆ ದ್ವಿಗುಣ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ