AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಾಗ್ ಪಾಸ್ವಾನ್​​ಗೆ ಹೆಲಿಕಾಪ್ಟರ್, ಪರಾಸ್​​ಗೆ ಹೊಲಿಗೆ ಯಂತ್ರ ಚಿಹ್ನೆ ನೀಡಿದ ಚುನಾವಣಾ ಆಯೋಗ

LJP: ಬಿಹಾರದ ತಾರಾಪುರ ಮತ್ತು ಕುಶೇಶ್ವರ ಆಸ್ಥಾನ್​​ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗಳ ಮುನ್ನ ಪಾಸ್ವಾನ್ ನೇತೃತ್ವದ ಬಣವನ್ನು ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಎಂದು ಗುರುತಿಸಲಾಗುತ್ತದೆ.

ಚಿರಾಗ್ ಪಾಸ್ವಾನ್​​ಗೆ ಹೆಲಿಕಾಪ್ಟರ್, ಪರಾಸ್​​ಗೆ ಹೊಲಿಗೆ ಯಂತ್ರ ಚಿಹ್ನೆ ನೀಡಿದ ಚುನಾವಣಾ ಆಯೋಗ
ಚಿರಾಗ್ ಪಾಸ್ವಾನ್- ಪಶುಪತಿ ಪಾರಸ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 05, 2021 | 4:00 PM

Share

ದೆಹಲಿ: ಚುನಾವಣಾ ಆಯೋಗವು ಮಂಗಳವಾರ ಲೋಕ ಜನಶಕ್ತಿ ಪಕ್ಷದ (LJP) ಬಣಗಳಿಗೆ ಹೊಸ ಚಿಹ್ನೆಗಳನ್ನು ನೀಡಿದೆ. ದಿವಂಗತ ರಾಮ್ ವಿಲಾಸ್ ಪಾಸ್ವಾನ್ (Ram Vilas Paswan) ಅವರ ಮಗ ಚಿರಾಗ್ ಪಾಸ್ವಾನ್ (Chirag Paswan) ಮತ್ತು ಪಾಸ್ವಾನ್ ಅವರ ಸಹೋದರ ಪಶುಪತಿ ಕುಮಾರ್ ಪರಾಸ್ (Pashupati Kumar Paras) ಅವರಿಗೆ ಚುನಾವಣಾ ಆಯೋಗ ಪಕ್ಷದ ಚಿಹ್ನೆ ನೀಡಿದೆ. ಬಿಹಾರದ ತಾರಾಪುರ ಮತ್ತು ಕುಶೇಶ್ವರ ಆಸ್ಥಾನ್​​ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗಳ ಮುನ್ನ ಪಾಸ್ವಾನ್ ನೇತೃತ್ವದ ಬಣವನ್ನು ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಎಂದು ಗುರುತಿಸಲಾಗುತ್ತದೆ. ಈ ಪಕ್ಷಕ್ಕೆ  ‘ಹೆಲಿಕಾಪ್ಟರ್’ ಚಿಹ್ನೆ ನೀಡಲಾಗಿದೆ. ಅದೇ ವೇಳೆ ಪರಾಸ್ ಬಣಕ್ಕೆ ‘ಹೊಲಿಗೆ ಯಂತ್ರ’ ಚಿಹ್ನೆ ನೀಡಿದ್ದು ಇದು ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ ಎಂದು ಗುರುತಿಸಲ್ಪಡುತ್ತದೆ.

ಎಲ್‌ಜೆಪಿಗೆ ‘ಬಂಗಲೆ’ ಚಿಹ್ನೆಯನ್ನು ಸ್ಥಗಿತಗೊಳಿಸಿದ ಮೂರು ದಿನಗಳ ನಂತರ ಚುನಾವಣಾ ಆಯೋಗದ ಈ ನಿರ್ಧಾರವು ಬಂದಿದ್ದು, ಮುಂಬರುವ ಉಪಚುನಾವಣೆಯಲ್ಲಿ ಪಾಸ್ವಾನ್ ಅಥವಾ ಪಾರಸ್ ಅವರಿಗೆ ಇದನ್ನು ಬಳಸಲು ಅವಕಾಶ ನೀಡುವುದಿಲ್ಲ.

ಈ ವರ್ಷದ ಆರಂಭದಲ್ಲಿ ಪಾಸ್ವಾನ್ ಮತ್ತು ಅವರ ಚಿಕ್ಕಪ್ಪ ಇಬ್ಬರೂ ಎಲ್‌ಜೆಪಿ ಮೇಲೆ ಹಕ್ಕು ಚಲಾಯಿಸಿದರು ಮತ್ತು ಪರಸ್ಪರ ‘ಹೊರಹಾಕುವ’ ಆದೇಶಗಳನ್ನು ಜಾರಿಗೊಳಿಸಿದ್ದರು. ಪರಾಸ್ (ಹಾಜಿಪುರ), ಚೌಧರಿ ಮೆಹಬೂಬ್ ಅಲಿ ಕೈಸರ್ (ಖಗರಿಯಾ), ವೀಣಾ ದೇವಿ (ವೈಶಾಲಿ), ರಾಜಕುಮಾರ ರಾಜ್ (ಸಮಸ್ತಿಪುರ) ಮತ್ತು ಚಂದನ್ ಸಿಂಗ್ (ನಾವಡಾ) – ಪಕ್ಷದ ಆರು ಸಂಸದರ ಪೈಕಿ ಐವರು ಎಂಪಿಗಳ ಉಚ್ಚಾಟನೆ ನಂತರ ಜೂನ್ ನಲ್ಲಿ ಪಕ್ಷವು ವಿಭಜನೆಯಾಯಿತು. ಚಿರಾಗ್ ಅವರ ಬದಲಿಗೆ ಪರಾಸ್‌ ಅವರನ್ನು ನಾಯಕರನ್ನಾಗಿ ಮಾಡಲಾಯಿತು.

ಮತ್ತೊಂದೆಡೆ, ಪಾಸ್ವಾನ್ ಜೂಮ್‌ನಲ್ಲಿ ಎಲ್‌ಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ನಡೆಸಿದರು ಮತ್ತು ಐದು ‘ಬಂಡಾಯ’ ಸಂಸದರನ್ನು ಪಕ್ಷದಿಂದ ಹೊರಹಾಕುವುದಾಗಿ ಘೋಷಿಸಿದರು.

ಇದನ್ನೂ ಓದಿ: ಎಲ್​ಜೆಪಿ ಸಂಸದ ಪ್ರಿನ್ಸ್​ ರಾಜ್​ ಪಾಸ್ವಾನ್​ ವಿರುದ್ಧ ಅತ್ಯಾಚಾರ ಆರೋಪ; ಎಫ್​ಐಆರ್​ ದಾಖಲು

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ