AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತುಗಳನ್ನು ನಿಷೇಧಿಸಿದ ಚುನಾವಣಾ ಆಯೋಗ

ಕರ್ನಾಟಕ ಸರ್ಕಾರವು ಕಳೆದ ಕೆಲವು ದಿನಗಳಿಂದ ತೆಲಂಗಾಣದ ಇಂಗ್ಲಿಷ್ ಮತ್ತು ಸ್ಥಳೀಯ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸುತ್ತಿದೆ ಎಂದು ಕೇಂದ್ರ ಸಚಿವ ಭೂಪೇಂದರ್ ಯಾದವ್, ಮಾಜಿ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಪಕ್ಷದ ಮುಖಂಡರಾದ ಸುಧಾಂಶು ತ್ರಿವೇದಿ ಮತ್ತು ಓಂ ಪಾಠಕ್ ಸೇರಿದಂತೆ ಬಿಜೆಪಿ ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದೀಗ ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ.

ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತುಗಳನ್ನು ನಿಷೇಧಿಸಿದ ಚುನಾವಣಾ ಆಯೋಗ
ಸಿಎಂ ಸಿದ್ದರಾಮಯ್ಯ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Nov 27, 2023 | 9:17 PM

Share

ಹೈದರಾಬಾದ್​ ನ.27: ತೆಲಂಗಾಣದಲ್ಲಿ (Telangana) ಕರ್ನಾಟಕ ಸರ್ಕಾರದ (Karnataka Government) ಜಾಹೀರಾತುಗಳನ್ನು ಕೇಂದ್ರ ಚುನಾವಣಾ ಆಯೋಗ (Election Commission) ನಿಷೇಧಿಸಿದೆ. ಕರ್ನಾಟಕ ಸರ್ಕಾರವು ಕಳೆದ ಕೆಲವು ದಿನಗಳಿಂದ ತೆಲಂಗಾಣದಲ್ಲಿ ಇಂಗ್ಲಿಷ್ ಮತ್ತು ಸ್ಥಳೀಯ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸುತ್ತಿದೆ. ಈ ಮೂಲಕ ಕಾಂಗ್ರೆಸ್​ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಕೇಂದ್ರ ಸಚಿವ ಭೂಪೇಂದರ್ ಯಾದವ್, ಮಾಜಿ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಪಕ್ಷದ ಮುಖಂಡರಾದ ಸುಧಾಂಶು ತ್ರಿವೇದಿ ಮತ್ತು ಓಂ ಪಾಠಕ್ ಸೇರಿದಂತೆ ಬಿಜೆಪಿ (BJP) ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಬಿಜೆಪಿ ದೂರಿನ ಬಳಿಕ ಚುನಾವಣಾ ಆಯೋಗ ಇದೀಗ ಕರ್ನಾಟಕ ಸರ್ಕಾರದ ಜಾಹಿರಾತುಗಳನ್ನು ತೆಲಂಗಾಣದಲ್ಲಿ ನಿಷೇಧಿಸಿದೆ.

ಕರ್ನಾಟಕ ಸರ್ಕಾರವು ಕಳೆದ ಕೆಲವು ದಿನಗಳಿಂದ ತೆಲಂಗಾಣದ ಇಂಗ್ಲಿಷ್ ಮತ್ತು ಸ್ಥಳೀಯ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸುತ್ತಿದೆ. ಚುನಾವಣೆಯ ಮೇಲೆ ಪ್ರಭಾವ ಬೀರಲು ಕಾಂಗ್ರೆಸ್ ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಭೂಪೇಂದರ್ ಯಾದವ್ ಆರೋಪಿಸಿದ್ದರು.

ಇದನ್ನೂ ಓದಿ: ಕೆಸಿಆರ್ ಬಿಜೆಪಿ ಜೊತೆ ಸ್ನೇಹ ಬೆಳೆಸಲು ಪ್ರಯತ್ನ ನಡೆಸುತ್ತಿದ್ದರು: ತೆಲಂಗಾಣದಲ್ಲಿ ಪ್ರಧಾನಿ ಮೋದಿ

ಕಾಂಗ್ರೆಸ್​ ಚುನಾವಣಾ ನಿಯಮಗಳು ಮತ್ತು ನಿಬಂಧನೆಗಳನ್ನು ಗಾಳಿಗೆ ತೂರಿದೆ.  ಇದು ಚುನಾವಣೆಗಳ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ “ಭ್ರಷ್ಟ ಅಭ್ಯಾಸ” ವನ್ನು ರೂಢಿಸಿಕೊಳ್ಳುತ್ತಿದೆ.  ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮತ್ತು ಕಾಂಗ್ರೆಸ್‌ನ ಇತರ ಸಂಬಂಧಿತ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:58 pm, Mon, 27 November 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ