AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾಕೆ ಚುನಾವಣೆ ನಡೆದಿಲ್ಲ? ಕಾರಣ ವಿವರಿಸಿದ ಚುನಾವಣಾ ಆಯೋಗ

ಐದು ವರ್ಷಗಳ ಹಿಂದೆ, ಆಗಿನ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರು ಏಪ್ರಿಲ್ ಮತ್ತು ಮೇ 2019 ರಲ್ಲಿ ಸಂಸತ್ತಿನ ಚುನಾವಣೆಗಳೊಂದಿಗೆ ವಿಧಾನಸಭೆ ಚುನಾವಣೆಗಳನ್ನು ನಡೆಸದಿರಲು ಇದೇ ಕಾರಣಗಳನ್ನು ಉಲ್ಲೇಖಿಸಿದ್ದರು. ಇದೇ ಕಾರಣವನ್ನು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪುನರಾವರ್ತಿಸಿದ್ದಾರೆ.

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾಕೆ ಚುನಾವಣೆ ನಡೆದಿಲ್ಲ? ಕಾರಣ ವಿವರಿಸಿದ ಚುನಾವಣಾ ಆಯೋಗ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 16, 2024 | 9:01 PM

Share

ಶ್ರೀನಗರ ಮಾರ್ಚ್ 16: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಲೋಕಸಭೆ ಚುನಾವಣೆಯೊಂದಿಗೆ (Lok Sabha Election) ವಿಧಾನಸಭೆ ಚುನಾವಣೆ ನಡೆಸಲು ಸಾಧ್ಯವಾಗದೇ ಇರುವುದಕ್ಕೆ ಭದ್ರತಾ ಕಳವಳವೇ ಕಾರಣ ಎಂದು ಚುನಾವಣಾ ಆಯೋಗ (poll panel) ಹೇಳಿದೆ. 2019 ರಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾದಾಗ ಚುನಾವಣಾ ಸಮಿತಿ ಏನು ಹೇಳಿತ್ತೋ ಅದನ್ನೇ ಇವತ್ತು (ಶನಿವಾರ) ಪುನರಾವರ್ತಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ಬಾರಿಗೆ 2014 ರಲ್ಲಿ ವಿದಾನಸಭಾ ಚುನಾವಣೆ ನಡೆದಿತ್ತು. ಸುಮಾರು ಆರು ವರ್ಷಗಳಿಂದ ಈ ಪ್ರದೇಶವು ಚುನಾಯಿತ ಸರ್ಕಾರವಿಲ್ಲದೆ ಇದೆ.

ಲೋಕಸಭಾ ಚುನಾವಣೆ ಜತೆ ಆಂಧ್ರ ಪ್ರದೇಷ, ಒಡಿಶಾ, ಅರುಣಾಚಲ ಮತ್ತು ಸಿಕ್ಕಿಂ ಈ ನಾಲ್ಕು ರಾಜ್ಯಗಳಲ್ಲಿ  ವಿಧಾನಸಭಾ ಚುನಾವಣೆಗಳ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳು ಬಾಕಿ ಇವೆ. ಆದರೆ ಲೋಕಸಭಾ ಚುನಾವಣೆಯೊಂದಿಗೆ ಅವುಗಳನ್ನು ನಡೆಸದಿರಲು ಭದ್ರತಾ ಕಾರಣಗಳನ್ನು ಉಲ್ಲೇಖಿಸಿದ್ದಾರೆ.

ಭದ್ರತಾ ಕಾರಣದಿಂದಾಗಿ ಇಡೀ ಜಮ್ಮು ಮತ್ತು ಕಾಶ್ಮೀರ ಆಡಳಿತವು ಏಕಕಾಲದಲ್ಲಿ ಚುನಾವಣೆ ನಡೆಸಲು ನಿರಾಕರಿಸಿದೆ ಎಂದು ಉನ್ನತ ಚುನಾವಣಾ ಅಧಿಕಾರಿ ಹೇಳಿದ್ದಾರೆ. ಆದಾಗ್ಯೂ, ಲೋಕಸಭಾ ಚುನಾವಣೆಗಳು ಮುಗಿದ ಕೂಡಲೇ ವಿಧಾನಸಭಾ ಚುನಾವಣೆಗಳನ್ನು ನಡೆಸುವುದು ನಮ್ಮ ಬದ್ಧತೆಯಾಗಿದೆ. ಸಾಕಷ್ಟು ಭದ್ರತಾ ಪಡೆಗಳ ಲಭ್ಯತೆ ಇದೆ ಎಂದು ಅವರು ಹೇಳಿದರು.

ಐದು ವರ್ಷಗಳ ಹಿಂದೆ, ಆಗಿನ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರು ಏಪ್ರಿಲ್ ಮತ್ತು ಮೇ 2019 ರಲ್ಲಿ ಸಂಸತ್ತಿನ ಚುನಾವಣೆಗಳೊಂದಿಗೆ ವಿಧಾನಸಭೆ ಚುನಾವಣೆಗಳನ್ನು ನಡೆಸದಿರಲು ಇದೇ ಕಾರಣಗಳನ್ನು ಉಲ್ಲೇಖಿಸಿದ್ದರು.

ತಿಂಗಳುಗಳ ನಂತರ, ಚುನಾವಣೆಯ ಬದಲಿಗೆ, ಕೇಂದ್ರವು ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡಿದ್ದು ಆಗಸ್ಟ್ 2019 ರಲ್ಲಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿತು.

ಅಂದಿನಿಂದ ಜಮ್ಮು ಮತ್ತು ಕಾಶ್ಮೀರವು ವಿವಾದಾತ್ಮಕ ಡಿಲಿಮಿಟೇಶನ್ ಪ್ರಕ್ರಿಯೆಗೊಳಗಾಗಿ 90 ವಿಧಾನಸಭಾ ಸ್ಥಾನಗಳ ಗಡಿಗಳನ್ನು ಮರುಹೊಂದಿಸಿದೆ. ಇದರ ನಂತರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆಯಲ್ಲಿ ತಿದ್ದುಪಡಿ ಮಾಡಲಾಗಿದ್ದು, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್‌ಗೆ ಜಮ್ಮು ಮತ್ತು ಕಾಶ್ಮೀರ ಅಸೆಂಬ್ಲಿಗೆ ಐದು ಸದಸ್ಯರನ್ನು ನಾಮನಿರ್ದೇಶನ ಮಾಡಲು ಅಧಿಕಾರವನ್ನು ನೀಡಲಾಯಿತು, ಇದು ನಾಮನಿರ್ದೇಶಿತ ಸದಸ್ಯರು ಮತದಾನದ ಹಕ್ಕನ್ನು ಹೊಂದಿರುವುದರಿಂದ ಅಸೆಂಬ್ಲಿಯಲ್ಲಿ ಮತ್ತಷ್ಟು ಆದೇಶವನ್ನು ಬದಲಾಯಿಸಬಹುದು.

ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ 544 ಸ್ಥಾನಗಳಿಗೆ ಮತದಾನ? ಏನಿದು ಲೆಕ್ಕಾಚಾರ?

ಡಿಸೆಂಬರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆಯಲ್ಲಿ ತಿದ್ದುಪಡಿಯನ್ನು ಉಲ್ಲೇಖಿಸಿದ ಶ ಕುಮಾರ್, ಮೂರು ತಿಂಗಳ ಹಿಂದೆ ಮರುಸಂಘಟನೆ ಕಾಯಿದೆಗೆ ತಿದ್ದುಪಡಿ ಮಾಡಿದಾಗ ಚುನಾವಣೆಗಳನ್ನು ನಡೆಸುವ ಕೆಲಸ ಪ್ರಾರಂಭವಾಯಿತು ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:00 pm, Sat, 16 March 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ