AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಗಟ್ಟೆಗಳ ವಿಡಿಯೋ ನೀಡುವುದರಿಂದ ಮತದಾರರ ಖಾಸಗಿತನಕ್ಕೆ ಧಕ್ಕೆ; ಕಾಂಗ್ರೆಸ್ ಆರೋಪಕ್ಕೆ ಚುನಾವಣಾ ಆಯೋಗ ಸಮರ್ಥನೆ

45 ದಿನಗಳನ್ನು ಮೀರಿ ಮತಗಟ್ಟೆಗಳ ಸಿಸಿಟಿವಿ ದೃಶ್ಯಗಳನ್ನು ಸಂರಕ್ಷಿಸಲು ಹೊಸ ಒತ್ತಡವನ್ನು ಎದುರಿಸುತ್ತಿರುವ ಚುನಾವಣಾ ಆಯೋಗ ತನ್ನ ಪ್ರಸ್ತುತ ನೀತಿಗೆ ಬದ್ಧವಾಗಿದೆ. ಮತಗಟ್ಟೆಯ ವಿಡಿಯೋವನ್ನು ಸಾರ್ವಜನಿಕಗೊಳಿಸುವುದರಿಂದ ಮತದಾರರ ಗೌಪ್ಯತೆಗೆ ಅಪಾಯ ಉಂಟಾಗಬಹುದು. ಇದು ಕಾನೂನು ರಕ್ಷಣೆಗಳನ್ನು ಉಲ್ಲಂಘಿಸಬಹುದು ಎಂದು ಚುನಾವಣಾ ಆಯೋಗ ಎಚ್ಚರಿಸಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತಗಟ್ಟೆಗಳ ವಿಡಿಯೋ ದೃಶ್ಯವಳಿಯನ್ನು ಕೋರಿದ್ದರು.

ಮತಗಟ್ಟೆಗಳ ವಿಡಿಯೋ ನೀಡುವುದರಿಂದ ಮತದಾರರ ಖಾಸಗಿತನಕ್ಕೆ ಧಕ್ಕೆ; ಕಾಂಗ್ರೆಸ್ ಆರೋಪಕ್ಕೆ ಚುನಾವಣಾ ಆಯೋಗ ಸಮರ್ಥನೆ
Election Commission
ಸುಷ್ಮಾ ಚಕ್ರೆ
|

Updated on: Jun 21, 2025 | 5:40 PM

Share

ನವದೆಹಲಿ: 45 ದಿನಗಳಿಗಿಂತ ಹೆಚ್ಚು ಕಾಲ ಮತಗಟ್ಟೆ ಸಿಸಿಟಿವಿ ದೃಶ್ಯಗಳನ್ನು ಉಳಿಸಿಕೊಳ್ಳಲು ಹೆಚ್ಚಿದ ಕಾಂಗ್ರೆಸ್ ನಾಯಕರ ಬೇಡಿಕೆಗಳ ನಡುವೆ, ಚುನಾವಣಾ ಆಯೋಗ (Election Commission) ಮತದಾರರ ಗೌಪ್ಯತೆ ಮತ್ತು ಸುರಕ್ಷತೆಗೆ ಸಂಭಾವ್ಯ ಅಪಾಯಗಳನ್ನು ಉಲ್ಲೇಖಿಸಿ ತನ್ನ ಅಸ್ತಿತ್ವದಲ್ಲಿರುವ ನಿಯಮವನ್ನು ಸಮರ್ಥಿಸಿಕೊಂಡಿದೆ. ಕಾಂಗ್ರೆಸ್​​ನ ಬೇಡಿಕೆಯು ತರ್ಕಬದ್ಧವಾಗಿ ಕಂಡುಬಂದರೂ, ಅದು ಕಾನೂನು ರಕ್ಷಣೆಗೆ ವಿರುದ್ಧವಾಗಿದೆ. ಇದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಚುನಾವಣಾ ಸಮಿತಿಯೊಳಗಿನ ಮೂಲಗಳು ಒಪ್ಪಿಕೊಂಡಿವೆ.

ರಾಹುಲ್ ಗಾಂಧಿ ಅವರು ಮಹಾರಾಷ್ಟ್ರ ಸೇರಿದಂತೆ ಎಲ್ಲಾ ರಾಜ್ಯಗಳ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಿಗೆ ಕ್ರೋಢೀಕೃತ, ಡಿಜಿಟಲ್, ಮತದಾರರ ಪಟ್ಟಿಯನ್ನು ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಕರೆ ನೀಡಿದ್ದರು. ಚುನಾವಣಾ ದಿನದಂದು ಮತಗಟ್ಟೆಗಳಿಂದ ವೀಡಿಯೊಗಳು ಅಥವಾ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡುವ ಮನವಿಯು ಮತದಾರರ ಗೌಪ್ಯತೆ ಮತ್ತು ಭದ್ರತೆಯನ್ನು ದುರ್ಬಲಗೊಳಿಸುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ. ಇದು ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ, ರಾಹುಲ್ ಗಾಂಧಿಯ ಮ್ಯಾಚ್​ ಫಿಕ್ಸಿಂಗ್ ಆರೋಪ, ಚುನಾವಣಾ ಆಯೋಗ ಹೇಳಿದ್ದೇನು?

“ಯಾವುದೇ ಗುಂಪು ಅಥವಾ ವ್ಯಕ್ತಿಯಿಂದ ಮತದಾರರನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುವಂತೆ ದೃಶ್ಯಾವಳಿಗಳನ್ನು ಹಂಚಿಕೊಳ್ಳುವುದರಿಂದ, ಮತ ಚಲಾಯಿಸಿದ ಮತದಾರರು ಮತ್ತು ಮತ ಚಲಾಯಿಸದ ಮತದಾರರು ಇಬ್ಬರೂ ಸಮಾಜ ವಿರೋಧಿ ಅಂಶಗಳಿಂದ ಒತ್ತಡ, ತಾರತಮ್ಯ ಮತ್ತು ಬೆದರಿಕೆಗೆ ಗುರಿಯಾಗುತ್ತಾರೆ” ಎಂದು ಚುನಾವಣಾ ಆಯೋಗ ಹೇಳಿದೆ.

ಒಂದು ನಿರ್ದಿಷ್ಟ ರಾಜಕೀಯ ಪಕ್ಷವು ಒಂದು ನಿರ್ದಿಷ್ಟ ಮತಗಟ್ಟೆಯಲ್ಲಿ ಕಡಿಮೆ ಸಂಖ್ಯೆಯ ಮತಗಳನ್ನು ಪಡೆದರೆ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಯಾರು ಮತ ಚಲಾಯಿಸಿದ್ದಾರೆ ಮತ್ತು ಯಾರು ಮತ ಚಲಾಯಿಸಿಲ್ಲ ಎಂಬುದನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ. ಇದು ನಂತರ ಮತದಾರರ ಮೇಲಿನ ಕಿರುಕುಳ ಅಥವಾ ಬೆದರಿಕೆಗೆ ಕಾರಣವಾಗಬಹುದು ಎಂದು ಅದು ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

‘ಎಕ್ಕ’ ಸಿನಿಮಾಗೆ ಭರ್ಜರಿ ಓಪನಿಂಗ್; ಯುವ ರಾಜ್​ಕುಮಾರ್ ಹೇಳಿದ್ದೇನು?
‘ಎಕ್ಕ’ ಸಿನಿಮಾಗೆ ಭರ್ಜರಿ ಓಪನಿಂಗ್; ಯುವ ರಾಜ್​ಕುಮಾರ್ ಹೇಳಿದ್ದೇನು?
7000 ಕೋಟಿ ಒಡೆಯ KGF ಬಾಬು ಬಳಿ ಯಾವೆಲ್ಲಾ ಕಾರುಗಳಿವೆ ನೋಡಿ
7000 ಕೋಟಿ ಒಡೆಯ KGF ಬಾಬು ಬಳಿ ಯಾವೆಲ್ಲಾ ಕಾರುಗಳಿವೆ ನೋಡಿ
ಕೇವಲ 3000 ರೂ.ನಿಂದ 7000 ಕೋಟಿ ದುಡಿದ ಬಾಬು ಪ್ಯಾಲೇಸ್ ಹೇಗಿದೆ ನೋಡಿ
ಕೇವಲ 3000 ರೂ.ನಿಂದ 7000 ಕೋಟಿ ದುಡಿದ ಬಾಬು ಪ್ಯಾಲೇಸ್ ಹೇಗಿದೆ ನೋಡಿ
ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
‘ಎಕ್ಕ’ ಚಿತ್ರ ನೋಡಿದ ವಿನಯ್ ರಾಜ್​ಕುಮಾರ್​; ತಮ್ಮನ ಸಿನಿಮಾ ಇಷ್ಟ ಆಯ್ತಾ?
‘ಎಕ್ಕ’ ಚಿತ್ರ ನೋಡಿದ ವಿನಯ್ ರಾಜ್​ಕುಮಾರ್​; ತಮ್ಮನ ಸಿನಿಮಾ ಇಷ್ಟ ಆಯ್ತಾ?
‘ಜೂನಿಯರ್’ ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?
‘ಜೂನಿಯರ್’ ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಭಾರೀ ಮಳೆಯಲ್ಲೂ ಪ್ರಧಾನಿ ಮೋದಿಗೆ ಬಂಗಾಳದ ದುರ್ಗಾಪುರದಲ್ಲಿ ಭರ್ಜರಿ ಸ್ವಾಗತ
ಭಾರೀ ಮಳೆಯಲ್ಲೂ ಪ್ರಧಾನಿ ಮೋದಿಗೆ ಬಂಗಾಳದ ದುರ್ಗಾಪುರದಲ್ಲಿ ಭರ್ಜರಿ ಸ್ವಾಗತ
ಕಾವಿ-ಖಾದಿ ನಡುವಿನ ಸೂಕ್ಷ್ಮತೆ ಸೂಚ್ಯವಾಗಿ ತೋರಿಸಿದ ಸುತ್ತೂರು ಶ್ರೀಗಳು
ಕಾವಿ-ಖಾದಿ ನಡುವಿನ ಸೂಕ್ಷ್ಮತೆ ಸೂಚ್ಯವಾಗಿ ತೋರಿಸಿದ ಸುತ್ತೂರು ಶ್ರೀಗಳು