AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚರಾಜ್ಯಗಳಲ್ಲಿ ಚುನಾವಣಾ ರೋಡ್​ ಶೋ, ಮೆರವಣಿಗೆಗೆ ಫೆ.11ರವರೆಗೂ ಇಲ್ಲ ಅವಕಾಶ; ಸ್ವಲ್ಪ ಮಟ್ಟಿಗೆ ಸಡಿಲಿಕೆ ನೀಡಿದ ಚುನಾವಣಾ ಆಯೋಗ

ಹಾಗಿದ್ದಾಗ್ಯೂ ಕೆಲವು ನಿಗದಿ ಪಡಿಸಿದ ತೆರೆದ ಪ್ರದೇಶಗಳಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಸ್ಪರ್ಧಿಸಲಿರುವ ಅಭ್ಯರ್ಥಿಗಳು ಸಾರ್ವಜನಿಕ ಪ್ರಚಾರ ಸಭೆ ನಡೆಸಬಹುದು. ಆದರೆ ಅದರಲ್ಲಿ1000 ಜನರು ಸೇರಬಹುದಾಗಿದೆ.

ಪಂಚರಾಜ್ಯಗಳಲ್ಲಿ ಚುನಾವಣಾ ರೋಡ್​ ಶೋ, ಮೆರವಣಿಗೆಗೆ ಫೆ.11ರವರೆಗೂ ಇಲ್ಲ ಅವಕಾಶ; ಸ್ವಲ್ಪ ಮಟ್ಟಿಗೆ ಸಡಿಲಿಕೆ ನೀಡಿದ ಚುನಾವಣಾ ಆಯೋಗ
ಚುನಾವಣಾ ಆಯೋಗ
TV9 Web
| Edited By: |

Updated on:Jan 31, 2022 | 6:26 PM

Share

ದೆಹಲಿ: ಚುನಾವಣೆ ನಡೆಯಲಿರುವ ಪಂಚರಾಜ್ಯಗಳಲ್ಲಿ (Assembly Election Of Five States) ರೋಡ್​ಶೋ, ವಾಹನ ರ್ಯಾಲಿಗಳು ಮತ್ತು ಪ್ರಚಾರ ಮೆರವಣಿಗೆಗಳನ್ನು ನಡೆಸಲು ಹೇರಿದ್ದ ನಿರ್ಬಂಧವನ್ನು ಚುನಾವಣಾ ಆಯೋಗ ಫೆ.11ರವರೆಗೆ ಮುಂದೂಡಿದೆ.  ಇಂದು ಬೆಳಗ್ಗೆ ಸಭೆ ನಡೆಸಿದ ಬಳಿಕ, ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ, 2022ರ ಫೆ.11ರವರೆಗೂ  ಯಾವುದೇ ರೀತಿಯ ರೋಡ್​ ಶೋ, ಪಾದಯಾತ್ರೆಗಳು, ಸೈಕಲ್​/ಬೈಕ್​/ ಇನ್ನಿತರ ವಾಹನಗಳ ರ್ಯಾಲಿಗಳಿಗೆ  ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದೆ. 

ಮೊದಲಬಾರಿಗೆ ಜನವರಿ 8ರಂದು ಸುದ್ದಿಗೋಷ್ಠಿ ನಡೆಸಿ ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದ ಚುನಾವಣಾ ಆಯೋಗ, ಜನವರಿ 15ರವರೆಗೆ ರೋಡ್​ ಶೋ, ರ್ಯಾಲಿಗಳಿಗೆ ಅವಕಾಶ ಇಲ್ಲ ಎಂದಿತ್ತು.  ನಂತರ ಜನವರಿ 31ರವರೆಗೆ ಅದನ್ನು ವಿಸ್ತರಿಸಿತು. ಇಂದು ಮತ್ತೆ ದೇಶದ ಕೊವಿಡ್​ 19 ಪರಿಸ್ಥಿತಿಯ ಬಗ್ಗೆ ಪರಿಶೀಲನಾ ಸಭೆ ನಡೆಸಿದ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುಶೀಲ್​ ಚಂದ್ರ ಮತ್ತು ಆಯುಕ್ತರಾದ ರಾಜೀವ್​ ಕುಮಾರ್​, ಅನೂಪ್​ ಚಂದ್ರ ಪಾಂಡೆ, ನಿರ್ಬಂಧ ಅವಧಿಯನ್ನು ಫೆ.11ರವರೆಗೆ ವಿಸ್ತರಿಸಿದ್ದಾರೆ.

ಹಾಗಿದ್ದಾಗ್ಯೂ ಕೆಲವು ನಿಗದಿ ಪಡಿಸಿದ ತೆರೆದ ಪ್ರದೇಶಗಳಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಸ್ಪರ್ಧಿಸಲಿರುವ ಅಭ್ಯರ್ಥಿಗಳು ಸಾರ್ವಜನಿಕ ಪ್ರಚಾರ ಸಭೆ ನಡೆಸಬಹುದು. ಆದರೆ ಅದರಲ್ಲಿ1000 ಜನರು ಸೇರಬಹುದಾಗಿದೆ. ಈ ಹಿಂದೆ 500ರಷ್ಟು ಜನ ಅಂದರೆ ಮಾತ್ರ ಶೇ.50 ಸಾಮರ್ಥ್ಯದಲ್ಲಿ ಜನಮಿತಿ ಹೇರಿ ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. ಹಾಗೇ ಮನೆ-ಮನೆ ಪ್ರಚಾರದಲ್ಲಿ 10 ಜನರ ಬದಲು 20 ಜನ ಸೇರಬಹುದು ಎಂದೂ ಚುನಾವಣಾ ಆಯೋಗ ಅನುಮತಿ ನೀಡಿದೆ. ಅಂದರೆ ಭದ್ರತಾ ಸಿಬ್ಬಂದಿ ಹೊರತುಪಡಿಸಿ 20 ಜನರು ಸೇರಬಹುದಾಗಿದೆ.ಇನ್ನುಳಿದಂತೆ ಕೊವಿಡ್ 19 ನಿಯಮ ಪಾಲನೆ ಮಾಡಬೇಕಾಗಿದೆ. ರಾಜಕೀಯ ಮುಖಂಡರು ಒಳಾಂಗಣ ಸಭೆ ನಡೆಸಿದರೆ 500 ಮಂದಿ ಸೇರಬಹುದು ಎಂದು ಎಲೆಕ್ಷನ್​ ಕಮಿಷನ್ ಹೇಳಿದೆ. ಈ ಹಿಂದೆ 300 ಮಂದಿಗೆ ಮಾತ್ರ ಅನುಮತಿ ಇತ್ತು.

ಇದನ್ನೂ ಓದಿ: ಶೀಘ್ರವೇ ಚಿತ್ರಮಂದಿರದಲ್ಲಿ ಹೌಸ್​ಫುಲ್​ಗೆ ಅವಕಾಶ?; ಸಭೆಯಲ್ಲಿ ಸಿಎಂ ಕಡೆಯಿಂದ ಸಕಾರಾತ್ಮಕ ಸ್ಪಂದನೆ

Published On - 6:25 pm, Mon, 31 January 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ