AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ರಾಜ್ಯಗಳಲ್ಲಿ ಮತದಾರರಾಗಿ ನೋಂದಣಿ; ಪ್ರಶಾಂತ್ ಕಿಶೋರ್​ಗೆ ಚುನಾವಣಾ ಆಯೋಗದಿಂದ ನೋಟಿಸ್

ಬಿಹಾರ ಮತ್ತು ಪಶ್ಚಿಮ ಬಂಗಾಳ ಎರಡರಲ್ಲೂ ಮತದಾರರಾಗಿ ಸೇರ್ಪಡೆಗೊಂಡಿದ್ದಕ್ಕಾಗಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಎರಡು ಮತದಾರರ ನೋಂದಣಿಗೆ ಸಂಬಂಧಿಸಿದಂತೆ ಪ್ರಶಾಂತ್ ಕಿಶೋರ್ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದ್ದು, 3 ದಿನಗಳಲ್ಲಿ ಕಾರಣಗಳನ್ನು ವಿವರಿಸಲು ಸೂಚಿಸಲಾಗಿದೆ.

2 ರಾಜ್ಯಗಳಲ್ಲಿ ಮತದಾರರಾಗಿ ನೋಂದಣಿ; ಪ್ರಶಾಂತ್ ಕಿಶೋರ್​ಗೆ ಚುನಾವಣಾ ಆಯೋಗದಿಂದ ನೋಟಿಸ್
Prashant Kishor
ಸುಷ್ಮಾ ಚಕ್ರೆ
|

Updated on:Oct 28, 2025 | 5:09 PM

Share

ನವದೆಹಲಿ, ಅಕ್ಟೋಬರ್ 28: ಬಿಹಾರ (Bihar) ಮತ್ತು ಪಶ್ಚಿಮ ಬಂಗಾಳ (West Bengal) ಎರಡು ರಾಜ್ಯಗಳಲ್ಲೂ ಮತದಾರರ ಪಟ್ಟಿಯಲ್ಲಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಹೆಸರು ಕಾಣಿಸಿಕೊಂಡಿತ್ತು. ಈ ವಿಷಯ ಬೆಳಕಿಗೆ ಬಂದ ನಂತರ ಚುನಾವಣಾ ತಂತ್ರಜ್ಞ ಮತ್ತು ಜನ ಸುರಾಜ್ ಪಕ್ಷದ ನಾಯಕ ಪ್ರಶಾಂತ್ ಕಿಶೋರ್ (Prashant Kishor) ಅವರಿಗೆ ಚುನಾವಣಾ ಆಯೋಗವು ಶೋಕಾಸ್ ನೋಟಿಸ್ ನೀಡಿದೆ.

ಬಿಹಾರದ ರೋಹ್ಟಾಸ್ ಜಿಲ್ಲೆಯ ಸಸಾರಾಮ್‌ನಲ್ಲಿ ಕಾರ್ಗಹರ್ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹೊರಡಿಸಿದ ನೋಟಿಸ್ ಪ್ರಕಾರ, ಪ್ರಶಾಂತ್ ಕಿಶೋರ್ ಅವರ ಹೆಸರು ಕಾರ್ಗಹರ್‌ನ ಪಾರ್ಟ್ 367 (ಮಿಡಲ್ ಸ್ಕೂಲ್, ಕೋನಾರ್, ಉತ್ತರ ವಿಭಾಗ) ಮತಗಟ್ಟೆ ಸಂಖ್ಯೆ 621ರಲ್ಲಿ EPIC (ಮತದಾರರ ಗುರುತಿನ ಚೀಟಿ) ಸಂಖ್ಯೆ 1013123718ನೊಂದಿಗೆ ಮತದಾರರ ಪಟ್ಟಿಯಲ್ಲಿತ್ತು.

ಇದರ ಜೊತೆಗೆ ಅವರ ಹೆಸರು ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಸೇಂಟ್ ಹೆಲೆನ್ ಶಾಲೆ, ಬಿ ರಾಣಿಶಂಕರಿ ಲೇನ್‌ನಲ್ಲಿ ಮತದಾನ ಕೇಂದ್ರವಿದೆ.

ಅಧಿಕಾರಿಗಳ ಪ್ರಕಾರ, ಕಾರ್ಗಹರ್ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಪ್ರಶಾಂತ್ ಕಿಶೋರ್ ಅವರಿಗೆ ಮೂರು ದಿನಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚಿಸಿದ್ದಾರೆ. ಅವರ ಹೆಸರು ಏಕಕಾಲದಲ್ಲಿ ಎರಡು ವಿಭಿನ್ನ ರಾಜ್ಯಗಳಲ್ಲಿ ಹೇಗೆ ನೋಂದಾಯಿಸಲ್ಪಟ್ಟಿದೆ ಎಂಬುದನ್ನು ಪ್ರಶಾಂತ್ ಕಿಶೋರ್ ವಿವರಿಸಬೇಕಾಗಿದೆ.

ಇದನ್ನೂ ಓದಿ: Prashant Kishor Detained: ಬಿಪಿಎಸ್​ಸಿ ಅಭ್ಯರ್ಥಿಗಳಿಗಾಗಿ ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ

ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ 2021ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರಶಾಂತ್ ಕಿಶೋರ್ ಟಿಎಂಸಿಗೆ ರಾಜಕೀಯ ಸಲಹೆಗಾರರಾಗಿ ಕೆಲಸ ಮಾಡಿದ್ದರು. ಇದೀಗ ಬಿಹಾರ ಮತ್ತು ಬಂಗಾಳ ಎರಡೂ ಕಡೆ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.

“ಪ್ರಶಾಂತ್ ಕಿಶೋರ್ ಒಬ್ಬ ವಿದ್ಯಾವಂತ ವ್ಯಕ್ತಿ. ಅವರು ತಮ್ಮ ಜವಾಬ್ದಾರಿಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಅವರು ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಚುನಾವಣಾ ತಂತ್ರಜ್ಞರಾಗಿ ಕಾರ್ಯನಿರ್ವಹಿಸಿದ್ದರು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ನಮ್ಮ ಕಡೆಯಿಂದ ತಪ್ಪು ನಡೆದಿದೆ ಎಂದು ಚುನಾವಣಾ ಆಯೋಗ ಭಾವಿಸಿದರೆ ನಮ್ಮನ್ನು ಸಂಪರ್ಕಿಸಲಿ. ನಮ್ಮ ಕಾನೂನು ತಂಡ ಪ್ರತಿಕ್ರಿಯಿಸುತ್ತದೆ” ಎಂದು ಪ್ರಶಾಂತ್ ಕಿಶೋರ್ ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Tue, 28 October 25

ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​
ದರ್ಶನ್ ಗೈರು ಹಾಜರಿ: ಸಂಕ್ರಾಂತಿ ಆಚರಣೆಗೆ ವಿಜಯಲಕ್ಷ್ಮಿ ಮುಂದಾಳತ್ವ
ದರ್ಶನ್ ಗೈರು ಹಾಜರಿ: ಸಂಕ್ರಾಂತಿ ಆಚರಣೆಗೆ ವಿಜಯಲಕ್ಷ್ಮಿ ಮುಂದಾಳತ್ವ