AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ, ಮಧ್ಯಪ್ರದೇಶ, ಗುಜರಾತ್‌ನ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ

ಬಿಹಾರ, ಮಧ್ಯಪ್ರದೇಶ ಮತ್ತು ಗುಜರಾತ್‌ನ 3 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯನ್ನು ಭಾರತೀಯ ಚುನಾವಣಾ ಆಯೋಗ ಘೋಷಿಸಿದೆ. ಆಯೋಗದ ಪ್ರಕಾರ, ಈ ಮೂರು ಸ್ಥಾನಗಳಿಗೆ ಜುಲೈ 30ರಂದು ಮತದಾನ ನಡೆಯಲಿದ್ದು, ಆಗಸ್ಟ್ 3ರಂದು ಮತ ಎಣಿಕೆ ನಡೆಯಲಿದೆ. ಬಿಹಾರದ ಬಂಕಿಪುರ ಸ್ಥಾನ, ಮಧ್ಯಪ್ರದೇಶದ ದಾಟಿಯಾ ಸ್ಥಾನ ಮತ್ತು ಗುಜರಾತ್‌ನ ಮಂಜಲ್‌ಪುರ ಸ್ಥಾನಗಳಿಗೆ ಈ ಉಪಚುನಾವಣೆಗಳು ನಡೆಯಲಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬಿಹಾರ, ಮಧ್ಯಪ್ರದೇಶ, ಗುಜರಾತ್‌ನ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ
Election Commission Of IndiaImage Credit source: TV9
ಸುಷ್ಮಾ ಚಕ್ರೆ
|

Updated on: Jul 02, 2026 | 8:46 PM

Share

ನವದೆಹಲಿ, ಜುಲೈ 2: ಬಿಹಾರ, ಮಧ್ಯಪ್ರದೇಶ ಮತ್ತು ಗುಜರಾತ್‌ನ ತಲಾ ಒಂದು ವಿಧಾನಸಭಾ ಕ್ಷೇತ್ರ ಸೇರಿದಂತೆ ಒಟ್ಟು 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (Election Commission Of India) ಇಂದು ಪ್ರಕಟಿಸಿದೆ. ಈ ಕ್ಷೇತ್ರಗಳಿಗೆ ಜುಲೈ 30ರಂದು ಮತದಾನ ನಡೆಯಲಿದೆ. ಬಿಹಾರದ ಬಂಕಿಪುರ, ಮಧ್ಯಪ್ರದೇಶದ ದಾತಿಯಾ ಮತ್ತು ಗುಜರಾತ್‌ನ ಮಂಜಲ್‌ಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ಬಿಹಾರದಲ್ಲಿ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರ್ತಿ ಅವರು ವಂಚನೆ ಪ್ರಕರಣವೊಂದರಲ್ಲಿ ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಅನರ್ಹಗೊಂಡಿದ್ದರಿಂದ ಮತ್ತು ಗುಜರಾತ್‌ನಲ್ಲಿ ಬಿಜೆಪಿ ಶಾಸಕ ಯೋಗೇಶ್‌ಭಾಯ್ ನಾರಾಯಣದಾಸ್ ಪಟೇಲ್ ಅವರ ನಿಧನದಿಂದಾಗಿ ಈ ಸ್ಥಾನಗಳು ತೆರವಾಗಿದ್ದವು.

ಇದನ್ನೂ ಓದಿ: ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ: ಅಡ್ಡಮತದಾನ ಮಾಡಿದವರಿಗೆ ಶಾಸ್ತಿ ಫಿಕ್ಸ್ ಎಂದ ಅಶೋಕ್

ಚುನಾವಣಾ ವೇಳಾಪಟ್ಟಿ:

ಜುಲೈ 13- ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ.

ಜುಲೈ 14- ನಾಮಪತ್ರಗಳ ಪರಿಶೀಲನೆ

ಜುಲೈ 16- ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ.

ಜುಲೈ 30- ಮತದಾನ.

ಆಗಸ್ಟ್ 3- ಮತ ಎಣಿಕೆ, ಫಲಿತಾಂಶ

ಇದನ್ನೂ ಓದಿ: ಪರಿಷತ್​ ಚುನಾವಣೆಯಲ್ಲಿ ಅಡ್ಡ ಮತದಾನ: ರಾಜ್ಯ ನಾಯಕರಿಗೆ ಮಹತ್ವದ​​ ಸೂಚನೆ ನೀಡಿದ ಬಿಜೆಪಿ ಹೈಕಮಾಂಡ್​​

ಚುನಾವಣೆ ನಡೆಯಲಿರುವ ವಿಧಾನಸಭಾ ಕ್ಷೇತ್ರಗಳು ಒಳಪಡುವ ಜಿಲ್ಲೆಗಳಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಮಾದರಿ ನೀತಿಸಂಹಿತೆ ಜಾರಿಯಾಗಿದೆ ಎಂದು ಆಯೋಗ ತಿಳಿಸಿದೆ. ಎಲ್ಲಾ ಮತಗಟ್ಟೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳು (EVM) ಮತ್ತು ವಿವಿಪ್ಯಾಟ್‌ಗಳನ್ನು (VVPAT) ಬಳಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ. ಇದರೊಂದಿಗೆ, ಅಪರಾಧ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳು ಮತ್ತು ಅವರಿಗೆ ಟಿಕೆಟ್ ನೀಡಿರುವ ರಾಜಕೀಯ ಪಕ್ಷಗಳು, ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ತಮ್ಮ ಅಪರಾಧದ ವಿವರಗಳನ್ನು ಪತ್ರಿಕೆಗಳು, ದೂರದರ್ಶನ ಚಾನೆಲ್‌ಗಳು ಮತ್ತು ಅವರ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us