AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಪದಚ್ಯುತಗೊಳಿಸಿದ ಭಾರತೀಯ ಚುನಾವಣಾ ಆಯೋಗ

ಭಾರತೀಯ ಚುನಾವಣಾ ಆಯೋಗವು ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಆರು ರಾಜ್ಯಗಳಲ್ಲಿ ಗೃಹ ಕಾರ್ಯದರ್ಶಿಗಳನ್ನು ಪದಚ್ಯುತಗೊಳಿಸಿದೆ. ಇದರ ಜತೆಗೆ ಮಿಜೋರಾಂ ಮತ್ತು ಹಿಮಾಚಲ ಪ್ರದೇಶದ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿ ಹಾಗೂ ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರನ್ನು ವಜಾಗೊಳಿಸಿದೆ.

6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಪದಚ್ಯುತಗೊಳಿಸಿದ ಭಾರತೀಯ ಚುನಾವಣಾ ಆಯೋಗ
ಅಕ್ಷಯ್​ ಪಲ್ಲಮಜಲು​​
|

Updated on:Mar 18, 2024 | 3:05 PM

Share

ದೆಹಲಿ. ಮಾ.18: ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಆರು ರಾಜ್ಯಗಳಲ್ಲಿ ಗೃಹ ಕಾರ್ಯದರ್ಶಿಗಳನ್ನು ಪದಚ್ಯುತಗೊಳಿಸಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಆದೇಶ ಹೊರಡಿಸಿದೆ. ಮಿಜೋರಾಂ ಮತ್ತು ಹಿಮಾಚಲ ಪ್ರದೇಶದ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿಯನ್ನೂ ತೆಗೆದು ಹಾಕಲಾಗಿದೆ. ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರನ್ನು ಕೂಡ (ಡಿಜಿಪಿ) ಚುನಾವಣಾ ಆಯೋಗ ವಜಾಗೊಳಿಸಿದೆ.

ಸಿಇಸಿ ರಾಜೀವ್ ಕುಮಾರ್ ನೇತೃತ್ವದ ಚುನಾವಣಾ ಸಮಿತಿಯು ಬೃಹನ್ಮುಂಬೈ ಮುನ್ಸಿಪಲ್ ಕಮಿಷನರ್ ಇಕ್ಬಾಲ್ ಸಿಂಗ್ ಚಾಹಲ್ ಮತ್ತು ಹೆಚ್ಚುವರಿ ಆಯುಕ್ತರು ಮತ್ತು ಡೆಪ್ಯುಟಿ ಕಮಿಷನರ್‌ಗಳನ್ನು ವಜಾಗೊಳಿಸುವಂತೆ ಆದೇಶಿಸಿತು. ಈ ಹಿಂದೆ ಮೂರು ವರ್ಷ ಪೂರೈಸಿರುವ ಅಥವಾ ಅವರ ತವರು ಜಿಲ್ಲೆಯಲ್ಲಿರುವ ಚುನಾವಣಾ ಸಂಬಂಧಿತ ಕೆಲಸಗಳಿಗೆ ಸಂಬಂಧಿಸಿದ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಆಯೋಗವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು. ಆದರೆ ಕೆಲವು ಮುನ್ಸಿಪಲ್ ಕಮಿಷನರ್‌ಗಳು ಮತ್ತು ಕೆಲವು ಹೆಚ್ಚುವರಿ ಮತ್ತು ಉಪ ಮುನ್ಸಿಪಲ್ ಕಮಿಷನರ್‌ಗಳು ಈ ಆದೇಶವನ್ನು ಪಾಲಿಸಿಲ್ಲ. ಅದಕ್ಕಾಗಿ ಈ ಕ್ರಮವನ್ನು ತೆಗೆದುಕೊಂಡಿದೆ.

ಎಲ್ಲ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಈ ಬಗ್ಗೆ ತಿಳಿಸಲಾಗಿತ್ತು. ಆಯೋಗವು ಸೋಮವಾರ ಸಂಜೆ 6 ಗಂಟೆಯೊಳಗೆ ವರದಿ ನೀಡುವಂತೆ BMC ಮತ್ತು ಹೆಚ್ಚುವರಿ ಮತ್ತು ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಸೂಚಿಸಿತು. ಮಹಾರಾಷ್ಟ್ರದ ಇತರ ಕಾರ್ಪೊರೇಷನ್‌ಗಳ ಇದೇ ರೀತಿಯ ಎಲ್ಲಾ ಮುನ್ಸಿಪಲ್ ಕಮಿಷನರ್‌ಗಳು ಮತ್ತು ಹೆಚ್ಚುವರಿ ಅಥವಾ ಉಪ ಮುನ್ಸಿಪಲ್ ಕಮಿಷನರ್‌ಗಳನ್ನು ವರ್ಗಾಯಿಸಲು ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ. ಮಹಾರಾಷ್ಟ್ರದಲ್ಲೂ ಇತರ ಕಾರ್ಪೊರೇಷನ್‌ಗಳ ಇದೇ ರೀತಿಯ ಎಲ್ಲಾ ಮುನ್ಸಿಪಲ್ ಕಮಿಷನರ್‌ಗಳು ಮತ್ತು ಉಪ ಮುನ್ಸಿಪಲ್ ಕಮಿಷನರ್‌ಗಳನ್ನು ವರ್ಗಾಯಿಸಲು ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಲಾಲೂ ಪ್ರಸಾದ್​ ಯಾದವ್ ಪುತ್ರಿ ರೋಹಿಣಿ ಸ್ಪರ್ಧೆ

ಚುನಾವಣೆ ದಿನಾಂಕ ಘೋಷಣೆಯಾದಂತೆ ಚುನಾವಣಾ ಆಯೋಗ ತುಂಬಾ ಅಲರ್ಟ್​​​​ ಆಗಿ ಕೆಲಸ ಮಾಡುತ್ತಿದೆ. 3 ವರ್ಷಕ್ಕಿಂತ ಹೆಚ್ಚು ಅಥವಾ ಅವರ ತವರು ಜಿಲ್ಲೆಯಾಗಿದ್ದಾರೆ. ಚುನಾವಣೆ ಸಮಯದಲ್ಲಿ ಆಯ್ಕೆ ಆಗಿದ್ದಾರೆ ಅಂತಹ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ, ಹಿಂದೆಯೇ ಹೇಳಿತ್ತು. ಸಿಇಸಿ ಕುಮಾರ್ ಮತ್ತು ಸಹ ಇಸಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರನ್ನು ಒಳಗೊಂಡ ಆಯೋಗ ಸೋಮವಾರ ಇಲ್ಲಿ ಸಭೆ ನಡೆಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:45 pm, Mon, 18 March 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ