AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಗಾವಣೆ ನೀತಿ ಅನುಷ್ಠಾನಕ್ಕೆ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಆಯೋಗ ನಿರ್ದೇಶನ

ರಾಜ್ಯ ಸರ್ಕಾರಗಳು ಇದೇ ಸಂಸದೀಯ ಕ್ಷೇತ್ರದ ವ್ಯಾಪ್ತಿಯ ಪಕ್ಕದ ಜಿಲ್ಲೆಗಳಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವ/ ನಿಯೋಜನೆ ಮಾಡುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆಯೋಗವು ತನ್ನ ಅಸ್ತಿತ್ವದಲ್ಲಿರುವ ವರ್ಗಾವಣೆ ನೀತಿಯನ್ನು ಬಲಪಡಿಸಿದೆ ಎಂದು ಭಾರತದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ ತಿಳಿಸಿದೆ

ವರ್ಗಾವಣೆ ನೀತಿ ಅನುಷ್ಠಾನಕ್ಕೆ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಆಯೋಗ ನಿರ್ದೇಶನ
ಚುನಾವಣಾ ಆಯೋಗ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 24, 2024 | 12:58 PM

Share

ದೆಹಲಿ ಫೆಬ್ರವರಿ 24: ಲೋಕಸಭೆ ಚುನಾವಣೆಗೆ (Lok sabha Election) ಮುನ್ನ, 3 ವರ್ಷ ಪೂರೈಸಿದ ನಂತರ ಜಿಲ್ಲೆಯಿಂದ ಹೊರಗೆ ವರ್ಗಾವಣೆಗೊಂಡ ಅಧಿಕಾರಿಗಳನ್ನು ಅದೇ ಸಂಸದೀಯ ಕ್ಷೇತ್ರದೊಳಗೆ ಬೇರೆ ಜಿಲ್ಲೆಯಲ್ಲಿ ನಿಯೋಜಿಸದಂತೆ ನೋಡಿಕೊಳ್ಳಲು ಚುನಾವಣಾ ಆಯೋಗ (Election Commission of India)ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಲಾಗಿದೆ. “ರಾಜ್ಯ ಸರ್ಕಾರಗಳು ಇದೇ ಸಂಸದೀಯ ಕ್ಷೇತ್ರದ ವ್ಯಾಪ್ತಿಯ ಪಕ್ಕದ ಜಿಲ್ಲೆಗಳಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವ/ ನಿಯೋಜನೆ ಮಾಡುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆಯೋಗವು ತನ್ನ ಅಸ್ತಿತ್ವದಲ್ಲಿರುವ ವರ್ಗಾವಣೆ ನೀತಿಯನ್ನು (transfer policy) ಬಲಪಡಿಸಿದೆ ಎಂದು ಭಾರತದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ ಹೇಳಿದೆ. ಮುಂಬೈ ಮಹಾನಗರ ಪಾಲಿಕೆಯ ಆಯುಕ್ತರು ಅದೇ ಹುದ್ದೆಯಲ್ಲಿ ಮೂರು ವರ್ಷ ಪೂರೈಸಿರುವ ಪ್ರಕರಣದಲ್ಲಿ ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳು ಇಲ್ಲಿವೆ.

“ಅಸ್ತಿತ್ವದಲ್ಲಿರುವ ಸೂಚನೆಗಳಲ್ಲಿನ ಲೋಪದೋಷಗಳನ್ನು ಸರಿಪಡಿಸುವ ಮೂಲಕ, ಆಯೋಗವು ಎರಡು ಸಂಸದೀಯ ಕ್ಷೇತ್ರಗಳನ್ನು ಒಳಗೊಂಡಿರುವ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳನ್ನು ಹೊರತುಪಡಿಸಿ, ಎಲ್ಲಾ ರಾಜ್ಯಗಳು ಜಿಲ್ಲೆಯಿಂದ ಹೊರಗೆ ವರ್ಗಾವಣೆಗೊಂಡ ಅಧಿಕಾರಿಗಳನ್ನು ಅದೇ ಸಂಸದೀಯ ಕ್ಷೇತ್ರದೊಳಗೆ ನಿಯೋಜನೆ ಮಾಡದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶಿಸಿದೆ.” ಎಂದು ಪ್ರಕಟಣೆ ತಿಳಿಸಿದೆ.

ಆಯೋಗದ ವರ್ಗಾವಣೆ ನೀತಿಯನ್ನು ಅಕ್ಷರಶಃ ಪಾಲಿಸಬೇಕು ಎಂದು ಹೇಳಲಾಗಿದೆ. ಆಯೋಗದ ಪೂರ್ವ ಸೂಚನೆಗಳಿಗೆ ಅನುಸಾರವಾಗಿ ಈಗಾಗಲೇ ಜಾರಿಗೊಳಿಸಲಾದ ವರ್ಗಾವಣೆಗಳು ಮತ್ತು ನಿಯೋಜನೆಗಳಿಗೆ ಹಿಂದಿನ ನಿಯಮ ಅನ್ವಯಿಸುತ್ತದೆ.

“ಚುನಾವಣಾ ಆಯೋಗದ ನೀತಿಯ ಪ್ರಕಾರ, ತಮ್ಮ ತವರು ಜಿಲ್ಲೆಯಲ್ಲಿ ನಿಯೋಜನೆಗೊಂಡಿರುವ ಅಥವಾ ಮೂರು ವರ್ಷಗಳನ್ನು ಒಂದು ಸ್ಥಳದಲ್ಲಿ ಪೂರ್ಣಗೊಳಿಸಿದ ಎಲ್ಲಾ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ನಿರ್ದೇಶಿಸಲಾಗಿದೆ. ಇದರಲ್ಲಿ ನೇರವಾಗಿ ಅಥವಾ ಮೇಲ್ವಿಚಾರಣಾ ಕೆಲಸಕ್ಕೆ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿರುವ ಅಧಿಕಾರಿಗಳು ಸೇರಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ:  ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಾಯ್ದೆ ರದ್ದು: ಅಸ್ಸಾಂ ಸರ್ಕಾರದಿಂದ ಐತಿಹಾಸಿಕ ನಿರ್ಧಾರ

ಚುನಾವಣೆಯಲ್ಲಿ ಯಾವುದೇ ಕಾರ್ಯಕ್ಕೆ ಧಕ್ಕೆಯಾಗದಂತೆ ಆಯೋಗವು ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸಿದೆ. ಇತ್ತೀಚೆಗೆ ನಡೆದ 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಆಯೋಗವು ರಾಜ್ಯ(ಗಳಲ್ಲಿ) ವಿವಿಧ ಅಧಿಕಾರಿಗಳನ್ನು, ಹಿರಿಯ ಮಟ್ಟದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದನ್ನು ನೆನಪಿಸಿಕೊಳ್ಳಬಹುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Sat, 24 February 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!