AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಬಗ್ಗೆ ಸುಳಿವು ನೀಡಿದ ಚುನಾವಣಾ ಆಯೋಗ

ವಿಧಾನಸಭೆ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಆದರೆ, ಕಳೆದ ವರ್ಷ ಡಿಸೆಂಬರ್‌ನಲ್ಲಿ ಸುಪ್ರೀಂಕೋರ್ಟ್ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯನ್ನು ಸೆಪ್ಟೆಂಬರ್ 30ರೊಳಗೆ ನಡೆಸುವಂತೆ ಚುನಾವಣಾ ಸಮಿತಿಗೆ ಸೂಚಿಸಿತ್ತು. ಲೋಕಸಭೆ ಚುನಾವಣೆಯೊಂದಿಗೆ ಇಲ್ಲಿ ವಿಧಾನಸಭಾ ಚುನಾವಣೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ ಎಂಬ ಊಹಾಪೋಹಗಳು ಇತ್ತು

ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಬಗ್ಗೆ ಸುಳಿವು ನೀಡಿದ ಚುನಾವಣಾ ಆಯೋಗ
ಕಾಶ್ಮೀರದಲ್ಲಿ ಮತದಾನ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
|

Updated on: Jun 08, 2024 | 2:22 PM

Share

ದೆಹಲಿ ಜೂನ್ 08: ಭಾರತೀಯ ಚುನಾವಣಾ ಆಯೋಗವು (Election Commission) ಶುಕ್ರವಾರ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ನೋಂದಾಯಿತ ಗುರುತಿಸಲ್ಪಡದ ಪಕ್ಷಗಳಿಂದ ‘ಸಾಮಾನ್ಯ ಚಿಹ್ನೆ’ಗಳ ಹಂಚಿಕೆಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಮೂಲಕ 370 ನೇ ವಿಧಿಯನ್ನು (Article 370) ರದ್ದುಗೊಳಿಸಿದ ನಂತರ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂಬ ಸುಳಿವನ್ನು ಚುನಾವಣಾ ಆಯೋಗ ನೀಡಿದೆ. ಚುನಾವಣಾ ಸಂಸ್ಥೆಯ ಹೇಳಿಕೆಯ ಪ್ರಕಾರ, 1968 ರ ಚುನಾವಣಾ ಚಿಹ್ನೆಗಳ (ಮೀಸಲಾತಿ ಮತ್ತು ಹಂಚಿಕೆ) ಆದೇಶದ ಪ್ಯಾರಾ 10B ಅಡಿಯಲ್ಲಿ ತಕ್ಷಣವೇ ಚಿಹ್ನೆಗಳ ಹಂಚಿಕೆಯನ್ನು ಪಡೆಯಲು ಅವರು ನಿರ್ಧರಿಸಿದ್ದಾರೆ.

ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ಪಕ್ಷಗಳು ತಮ್ಮ ‘ಮೀಸಲು ಚಿಹ್ನೆಗಳನ್ನು’ ಹೊಂದಿದ್ದರೂ, ನೋಂದಾಯಿತ ಮಾನ್ಯತೆ ಪಡೆಯದ ಪಕ್ಷಗಳು ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಅರ್ಜಿ ಸಲ್ಲಿಸಬೇಕಾಗುತ್ತದೆ. ಚುನಾವಣಾ ಚಿಹ್ನೆಗಳ ಆದೇಶದ ಅಡಿಯಲ್ಲಿ, ಯಾವುದೇ ನೋಂದಾಯಿತ ಗುರುತಿಸದ ರಾಜಕೀಯ ಪಕ್ಷವು ಸದನದ ಅವಧಿ ಮುಗಿಯುವ ಆರು ತಿಂಗಳ ಮೊದಲು ‘ಸಾಮಾನ್ಯ ಚಿಹ್ನೆ’ಗಾಗಿ ಅರ್ಜಿ ಸಲ್ಲಿಸಬಹುದು. ಆದಾಗ್ಯೂ, ಜಮ್ಮು ಮತ್ತು ಕಾಶ್ಮೀರದಲ್ಲಿ ಇನ್ನೂ ಯಾವುದೇ ಕ್ರಿಯಾತ್ಮಕ ಅಸೆಂಬ್ಲಿ ಇಲ್ಲದ ಕಾರಣ, ಚುನಾವಣಾ ಆಯೋಗ ಅರ್ಜಿಗಳನ್ನು ಆಹ್ವಾನಿಸುತ್ತಿದೆ.

ವಿಧಾನಸಭೆ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಆದರೆ, ಕಳೆದ ವರ್ಷ ಡಿಸೆಂಬರ್‌ನಲ್ಲಿ ಸುಪ್ರೀಂಕೋರ್ಟ್ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯನ್ನು ಸೆಪ್ಟೆಂಬರ್ 30ರೊಳಗೆ ನಡೆಸುವಂತೆ ಚುನಾವಣಾ ಸಮಿತಿಗೆ ಸೂಚಿಸಿತ್ತು. ಲೋಕಸಭೆ ಚುನಾವಣೆಯೊಂದಿಗೆ ಇಲ್ಲಿ ವಿಧಾನಸಭಾ ಚುನಾವಣೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ ಎಂಬ ಊಹಾಪೋಹಗಳು ಇತ್ತು. ಈ ಬಗ್ಗೆ ಕೇಳಿದಾಗ “ತಾರ್ಕಿಕ ಮತ್ತು ಭದ್ರತೆ” ಕಾರಣಗಳಿಂದಾಗಿ ಏಕಕಾಲದಲ್ಲಿ ಚುನಾವಣೆ ನಡೆಸುವುದು “ಪ್ರಾಯೋಗಿಕವಾಗಿಲ್ಲ” ಎಂದು ಚುನಾವಣಾ ಆಯೋಗ ಹೇಳಿತ್ತು.

ಏತನ್ಮಧ್ಯೆ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್, ಈ ವಾರದ ಆರಂಭದಲ್ಲಿ, ಸಮಿತಿಯು ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣಾ ಪ್ರಕ್ರಿಯೆಯನ್ನು “ಶೀಘ್ರದಲ್ಲೇ” ಪ್ರಾರಂಭಿಸಲಿದೆ ಎಂದು ಹೇಳಿದ್ದರು.

ಇದನ್ನೂ ಓದಿ: CWC meeting: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶದ ಅವಲೋಕನ

“ನಾವು ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ, ಮತದಾರರ ಮತದಾನದಿಂದ ನಾವು ತುಂಬಾ ಉತ್ಸುಕರಾಗಿದ್ದೇವೆ. ಜಮ್ಮು ಮತ್ತು ಕಾಶ್ಮೀರವು ನಾಲ್ಕು ದಶಕಗಳಲ್ಲಿ ಒಟ್ಟಾರೆ 58.58 ಶೇಕಡಾ ಮತ್ತು ಕಾಶ್ಮೀರ ಕಣಿವೆಯಲ್ಲಿ ಶೇಕಡಾ 51.05 ರಷ್ಟು ಅತಿ ಹೆಚ್ಚು ಮತದಾನವನ್ನು ದಾಖಲಿಸಿದೆ ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ