Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ನಡೆಯಲಿರುವ ರಾಜ್ಯಗಳು ಕೊವಿಡ್-19 ವ್ಯಾಕ್ಸಿನೇಷನ್‌ನ ವೇಗ ಹೆಚ್ಚಿಸಲು ಚುನಾವಣಾ ಆಯೋಗ ನಿರ್ದೇಶನ

ಕಳೆದ ವಾರ ಲಖನೌನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಯೋಗವು ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಲಸಿಕೆ ನೀಡಿಕೆ ವೇಗಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದ ನಂತರ ಈ ನಿರ್ದೇಶನ ಬಂದಿದೆ ಎಂದು ಚುನಾವಣಾ ಆಯೋಗದ  ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣೆ ನಡೆಯಲಿರುವ ರಾಜ್ಯಗಳು ಕೊವಿಡ್-19 ವ್ಯಾಕ್ಸಿನೇಷನ್‌ನ ವೇಗ ಹೆಚ್ಚಿಸಲು ಚುನಾವಣಾ ಆಯೋಗ ನಿರ್ದೇಶನ
ಚುನಾವಣಾ ಆಯೋಗ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jan 03, 2022 | 4:10 PM

ದೆಹಲಿ:ಕೊವಿಡ್-19 (Covid 19) ವ್ಯಾಕ್ಸಿನೇಷನ್‌ನ (vaccination)ವೇಗವನ್ನು ಹೆಚ್ಚಿಸುವಂತೆ ಭಾರತದ ಚುನಾವಣಾ ಆಯೋಗವು ಚುನಾವಣೆಗೆ ಒಳಪಡುವ ಐದು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ. ಮಣಿಪುರದಲ್ಲಿ(Manipur) ಮೊದಲ ಡೋಸ್ ವ್ಯಾಪ್ತಿಯ ಕಡಿಮೆ ಶೇಕಡಾವಾರು ಬಗ್ಗೆ ಚುನಾವಣಾ ಸಮಿತಿಯು ಕಳವಳ ವ್ಯಕ್ತಪಡಿಸಿದೆ. ಕಳೆದ ವಾರ ಲಖನೌನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಯೋಗವು ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಲಸಿಕೆ ನೀಡಿಕೆ ವೇಗಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದ ನಂತರ ಈ ನಿರ್ದೇಶನ ಬಂದಿದೆ ಎಂದು ಚುನಾವಣಾ ಆಯೋಗದ  ಅಧಿಕಾರಿಗಳು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು, ಲಸಿಕೆ ವ್ಯಾಪ್ತಿಯನ್ನು ಹೆಚ್ಚಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಚುನಾವಣಾ ಆಯೋಗ ರಾಜ್ಯಗಳನ್ನು ಕೇಳಿದೆ ಎಂದು ಹೇಳಿದರು.

ಇದಕ್ಕೂ ಮೊದಲು ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶರು ಪ್ರಧಾನಿ ನರೇಂದ್ರ ಮೋದಿಯವರನ್ನು “ಬಲವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ” ಒತ್ತಾಯಿಸಿದರು. ಹೆಚ್ಚುತ್ತಿರುವ ಪ್ರಕರಣಗಳು ಮತ್ತು ಸಂಭವನೀಯ ಮೂರನೇ ಅಲೆಯ ದೃಷ್ಟಿಯಿಂದ ರ್ಯಾಲಿಗಳು, ಸಭೆಗಳು ಮತ್ತು ಚುನಾವಣೆಗಳನ್ನು “ನಿಲ್ಲಿಸುವುದು ಮತ್ತು ಮುಂದೂಡುವುದನ್ನು” ಪರಿಗಣಿಸುವಂತೆ ಒತ್ತಾಯಿಸಿದರು.

ಆದಾಗ್ಯೂ, ಚುನಾವಣಾ ಆಯೋಗವು ಉತ್ತರ ಪ್ರದೇಶದ ಎಲ್ಲಾ ಪಕ್ಷಗಳು ವೇಳಾಪಟ್ಟಿಯಂತೆ ವಿಧಾನಸಭೆ ಚುನಾವಣೆಗಳನ್ನು ನಡೆಸಬೇಕೆಂದು ಬಯಸುತ್ತವೆ ಎಂದು ಹೇಳಿದರು. “ಎಲ್ಲಾ ರಾಜಕೀಯ ಪಕ್ಷಗಳು, ಯಾವುದೇ ಭಿನ್ನಾಭಿಪ್ರಾಯವಿಲ್ಲದೆ, ಕೊವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಿ ಸಮಯಕ್ಕೆ ಸರಿಯಾಗಿ ಚುನಾವಣೆಗಳನ್ನು ನಡೆಸಬೇಕು” ಎಂದು ಚುನಾವಣಾ ಆಯೋಗ ಹೇಳಿದೆ.

ಚುನಾವಣೆಯನ್ನು ಮುಂದೂಡುವುದನ್ನು ಚುನಾವಣಾ ಆಯೋಗ ಪರಿಗಣಿಸುತ್ತದೆಯೇ ಎಂದು ಕೇಳಿದಾಗ, ಚಂದ್ರ ಅವರು “ಸಂವಿಧಾನದ ಪ್ರಕಾರ ಚುನಾವಣಾ ಆಯೋದ ತನಗೆ ನಿಯೋಜಿಸಲಾದ ಜವಾಬ್ದಾರಿಯನ್ನು ನಿರ್ವಹಿಸುತ್ತದೆ. ಆ ಜವಾಬ್ದಾರಿಯನ್ನು ನಿರ್ವಹಿಸುವಾಗ, ಹೆಚ್ಚುತ್ತಿರುವ ಕೊವಿಡ್ ಸಂಖ್ಯೆಗಳನ್ನು ಅಥವಾ ಹೆಚ್ಚುತ್ತಿರುವ ರ್ಯಾಲಿಗಳನ್ನು ನಿರ್ವಹಿಸುವುದನ್ನು ಪರಿಗಣಿಸಲು ಅಗತ್ಯವಿರುವ ಯಾವುದನ್ನಾದರೂ ಪರಿಗಣನೆಗೆ ತೆಗೆದುಕೊಂಡ ನಂತರ ಚುನಾವಣೆಗಳನ್ನು ಘೋಷಿಸಲಾಗುತ್ತದೆ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ 86 ಪ್ರತಿಶತ ಜನರು ಮೊದಲ ಡೋಸ್ ಮತ್ತು 49 ಪ್ರತಿಶತದಷ್ಟು ಜನರು ಕೊವಿಡ್ ಲಸಿಕೆಯನ್ನು ಪಡೆದಿದ್ದಾರೆ ಎಂದು ನನಗೆ ತಿಳಿಸಲಾಗಿದೆ. 15-20 ದಿನಗಳಲ್ಲಿ, ಎಲ್ಲಾ ಅರ್ಹ ಜನರು ತಮ್ಮ ಮೊದಲ ಡೋಸ್ ಅನ್ನು ಪಡೆಯುತ್ತಾರೆ ಎಂದು ನಮಗೆ ಭರವಸೆ ನೀಡಲಾಗಿದೆ. ಲಸಿಕೆಯನ್ನು ಹೆಚ್ಚಿಸುವಂತೆ ನಾವು ಕೇಳಿದ್ದೇವೆ ಎಂದು ಅವರು ಹೇಳಿದ್ದಾರೆ.

ಕಳೆದ ವಾರ, ಚುನಾವಣಾ ಆಯೋಗವು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರೊಂದಿಗೆ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಕೊವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆ ನಡೆಸಿತ್ತು.

ವ್ಯಾಕ್ಸಿನೇಷನ್ ವ್ಯಾಪ್ತಿಯು ರಾಷ್ಟ್ರೀಯ ಸರಾಸರಿಗಿಂತ ಕಡಿಮೆಯಿದೆ ಎಂಬ ವರದಿಗಳ ನಂತರ ಆರೋಗ್ಯ ಸಚಿವಾಲಯವು ಉತ್ತರ ಪ್ರದೇಶ ಮತ್ತು ಪಂಜಾಬ್‌ಗೆ ಬಹುಶಿಸ್ತೀಯ ತಂಡಗಳನ್ನು ಕಳುಹಿಸಿದೆ. ಆರೋಗ್ಯ ಸಚಿವಾಲಯವು ಉತ್ತರ ಪ್ರದೇಶ ಮತ್ತು ಪಂಜಾಬ್‌ಗೆ ಬಹುಶಿಸ್ತೀಯ ತಂಡಗಳನ್ನು ಕಳುಹಿಸಿದೆ ಆರೋಗ್ಯ ಕಾರ್ಯದರ್ಶಿ ಡಿಸೆಂಬರ್ 23 ರಂದು ಚುನಾವಣೆಗೆ ಒಳಪಡುವ ರಾಜ್ಯಗಳಿಗೆ “ವ್ಯಾಕ್ಸಿನೇಷನ್ ವೇಗ ಹೆಚ್ಚಿಸುವಂತೆ” ನಿರ್ದೇಶನ ನೀಡಿದ್ದರು.

ಎಲ್ಲಾ ರಾಜ್ಯಗಳೊಂದಿಗಿನ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಭೂಷಣ್, ಕಡಿಮೆ ವ್ಯಾಕ್ಸಿನೇಷನ್ ಕವರೇಜ್ ಹೊಂದಿರುವ ಪ್ರದೇಶಗಳು ಹೊಸ ಒಮಿಕ್ರಾನ್ ರೂಪಾಂತರಕ್ಕೆ ಹೆಚ್ಚು ದುರ್ಬಲವಾಗಬಹುದು ಮತ್ತು ಈ ಪ್ರದೇಶಗಳಲ್ಲಿ ವ್ಯಾಕ್ಸಿನೇಷನ್ ಅನ್ನು ಹೆಚ್ಚಿಸಲು ಜಿಲ್ಲಾಡಳಿತಗಳು ವಿಶೇಷ ಗಮನ ಹರಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:  Coronavirus cases in India: ಭಾರತದಲ್ಲಿ 33,750 ಹೊಸ ಕೊವಿಡ್ ಪ್ರಕರಣ ಪತ್ತೆ, ಸಾವಿನ ಸಂಖ್ಯೆ ಇಳಿಕೆ; ಒಮಿಕ್ರಾನ್​​​ ಪ್ರಕರಣಗಳಲ್ಲಿ ಏರಿಕೆ

ಇದನ್ನೂ ಓದಿ:  ಫೆಬ್ರವರಿಯೊಳಗೆ 8 ಕೋಟಿ ಕೊವಾಕ್ಸಿನ್ ಡೋಸ್‌ಗಳನ್ನು ಪೂರೈಸುವ ಗುರಿ ಹೊಂದಿದ ಭಾರತ್ ಬಯೋಟೆಕ್

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್