AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಮಾಜಿ ಡಿಜಿಪಿ ಅಂಜನಿ ಕುಮಾರ್ ಅಮಾನತು ಆದೇಶ ಹಿಂಪಡೆದ ಚುನಾವಣಾ ಆಯೋಗ

ತೆಲಂಗಾಣ ವಿಧಾನಸಭಾ ಚುನಾವಣೆ ಫಲಿತಾಂಶ(Telangana Assembly Election Result)ಕ್ಕೂ ಮುನ್ನವೇ  ರೇವಂತ್ ರೆಡ್ಡಿ(Revant Reddy)ಯವರನ್ನು ಭೇಟಿಯಾಗಿದ್ದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಮಾಜಿ ಡಿಜಿಪಿ ಅಂಜನಿ ಕುಮಾರ್(Anjani Kumar) ಅವರ ಅಮಾನತು ಆದೇಶವನ್ನು ಚುನಾವಣಾ ಆಯೋಗ ಹಿಂಪಡೆದಿದೆ.

ತೆಲಂಗಾಣ: ಮಾಜಿ ಡಿಜಿಪಿ ಅಂಜನಿ ಕುಮಾರ್ ಅಮಾನತು ಆದೇಶ ಹಿಂಪಡೆದ ಚುನಾವಣಾ ಆಯೋಗ
ಅಂಜನಿ ಕಮಾರ್
ನಯನಾ ರಾಜೀವ್
|

Updated on: Dec 12, 2023 | 12:58 PM

Share

ತೆಲಂಗಾಣ ವಿಧಾನಸಭಾ ಚುನಾವಣೆ ಫಲಿತಾಂಶ(Telangana Assembly Election Result)ಕ್ಕೂ ಮುನ್ನವೇ  ರೇವಂತ್ ರೆಡ್ಡಿ(Revant Reddy)ಯವರನ್ನು ಭೇಟಿಯಾಗಿದ್ದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಮಾಜಿ ಡಿಜಿಪಿ ಅಂಜನಿ ಕುಮಾರ್(Anjani Kumar) ಅವರ ಅಮಾನತು ಆದೇಶವನ್ನು ಚುನಾವಣಾ ಆಯೋಗ ಹಿಂಪಡೆದಿದೆ.

ತೆಲಂಗಾಣ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಅಂಜನಿ ಕುಮಾರ್ ರೇವಂತ್​ ರೆಡ್ಡಿಯನ್ನು ಭೇಟಿಯಾಗಿದ್ದರು. ರೇವಂತ್ ರೆಡ್ಡಿ ಭೇಟಿ ವಿಚಾರವಾಗಿ ಅಂಜನಿ ಕುಮಾರ್ ಅವರಿಂದ ವಿವರಣೆ ಕೇಳಿರುವ ಚುನಾವಣಾ ಆಯೋಗ . ಅವರನ್ನು ಅಮಾನತುಗೊಳಿಸಿತ್ತು.  ಅಂಜನಿ ಕುಮಾರ್ ಬದಲಿಗೆ ರವಿ ಗುಪ್ತಾ ಅವರನ್ನು ಡಿಜಿಪಿಯಾಗಿ ನೇಮಿಸಿತ್ತು.

ಇನ್ನು ಮುಂದೆ ಇಂತಹ ಪ್ರಮಾದ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಅಂಜನಿಕುಮಾರ್ ವಿವರಿಸಿದರು. ಅವರ ವಿವರಣೆಗೆ ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ಆಯೋಗ, ಅಮಾನತು ಆದೇಶವನ್ನು ಹಿಂಪಡೆದಿದೆ.

ಅಧಿಕೃತವಾಗಿ ಫಲಿತಾಂಶ ಇನ್ನೂ ಹೊರಬಂದಿರಲಿಲ್ಲ, ಅಷ್ಟರೊಳಗೆ ಅಂಜನಿ ಕುಮಾರ್ ರೆಡ್ಡಿಯವರನ್ನು ಭೇಟಿಯಾಗಿ, ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದ್ದರು.

ಮತ್ತಷ್ಟು ಓದಿ: ಫಲಿತಾಂಶ ಪ್ರಕಟಕ್ಕೂ ಮುನ್ನವೇ ಅಭ್ಯರ್ಥಿಯನ್ನು ಭೇಟಿ ಮಾಡಿದ ಡಿಜಿ ಐಜಿಪಿ; ಅಂಜನಿ ಕುಮಾರ್ ಅಮಾನತುಗೊಳಿಸಿದ ಚುನಾವಣಾ ಆಯೋಗ

ರೆಡ್ಡಿಗೆ ಪುಷ್ಪಗುಚ್ಛವನ್ನು ಹಸ್ತಾಂತರಿಸುವ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಅವರನ್ನು ಅಮಾನತುಗೊಳಿಸಲಾಗಿತ್ತು.

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ 64 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮತ್ತೊಂದೆಡೆ, ಬಿಆರ್‌ಎಸ್ 39 ಸ್ಥಾನಗಳನ್ನು, ಬಿಜೆಪಿ 9 ಸ್ಥಾನಗಳನ್ನು, ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) 7 ಸ್ಥಾನಗಳನ್ನು ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ 1 ಸ್ಥಾನವನ್ನು ಗೆದ್ದಿದೆ. ಇದೀಗ ಕಾಂಗ್ರೆಸ್​ನ ರೇವಂತ್ ರೆಡ್ಡಿ ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ