AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಾಠಿ ಧಾರಾವಾಹಿಗಳಲ್ಲಿ ಜಾಹೀರಾತು ಬಳಕೆ ಕುರಿತು ಶಿಂಧೆ ನೇತೃತ್ವದ ಶಿವಸೇನೆಗೆ ಚುನಾವಣಾ ಆಯೋಗ ನೋಟಿಸ್

ಚುನಾವಣಾ ಆಯೋಗದ ಸೂಚನೆಯ ಪ್ರಕಾರ ಖಾಸಗಿ ಚಾನೆಲ್‌ನಲ್ಲಿ ಪ್ರಸಾರವಾಗುವ ಕೆಲವು ಧಾರಾವಾಹಿಗಳಾದ ಮತಿಚ್ಯ ಚೂಲಿ ಮತ್ತು ಪ್ರೇಮಚಾ ಚಹಾಗಳಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಪ್ರಚಾರದ ಜಾಹೀರಾತು ಬಳಸಲಾಗಿತ್ತು. ಧಾರಾವಾಹಿಯಲ್ಲಿ ಶಿವಸೇನೆ ಪಕ್ಷದ ಜಾಹೀರಾತುಗಳನ್ನು ತೋರಿಸುವ ಮೂಲಕ ಗುಪ್ತ ಪ್ರಚಾರಕ್ಕಾಗಿ ಈ ಜಾಹೀರಾತುಗಳಿಗೆ ಪಕ್ಷವು ಸ್ವಲ್ಪ ಮೊತ್ತವನ್ನು ಪಾವತಿಸಿರುವ ಸಾಧ್ಯತೆಯ ಬಗ್ಗೆಯೂ ಈ ನೋಟಿಸ್​ನಲ್ಲಿ ಆರೋಪಿಸಲಾಗಿದೆ.

ಮರಾಠಿ ಧಾರಾವಾಹಿಗಳಲ್ಲಿ ಜಾಹೀರಾತು ಬಳಕೆ ಕುರಿತು ಶಿಂಧೆ ನೇತೃತ್ವದ ಶಿವಸೇನೆಗೆ ಚುನಾವಣಾ ಆಯೋಗ ನೋಟಿಸ್
ಏಕನಾಥ್ ಶಿಂಧೆ
ಸುಷ್ಮಾ ಚಕ್ರೆ
|

Updated on: Nov 19, 2024 | 4:52 PM

Share

ಮುಂಬೈ: ಮರಾಠಿ ಟಿವಿ ಚಾನೆಲ್‌ನಲ್ಲಿ ಧಾರಾವಾಹಿಗಳ ಮೂಲಕ ಪಕ್ಷದ ಪ್ರಚಾರಕ್ಕಾಗಿ ಬಾಡಿಗೆ ಜಾಹೀರಾತು ನೀಡಿದ್ದಕ್ಕಾಗಿ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಚುನಾವಣಾ ಆಯೋಗ ನೋಟಿಸ್ ಕಳುಹಿಸಿದೆ. ಮುಂದಿನ 24 ಗಂಟೆಗಳ ಒಳಗೆ ಈ ದೂರಿನ ಬಗ್ಗೆ ಶಿವಸೇನೆ ಪಕ್ಷದಿಂದ ವಿವರವಾದ ಹೇಳಿಕೆಯನ್ನು ನೀಡುವಂತೆ ಚುನಾವಣಾ ಆಯೋಗದ ನೋಟಿಸ್ ಕೋರಿದೆ. ಈ ನೋಟಿಸ್‌ನಲ್ಲಿ ಉಲ್ಲೇಖಿಸಿರುವಂತೆ ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಚುನಾವಣಾ ಆಯೋಗ ಏನು ಹೇಳುತ್ತದೆ?:

ಚುನಾವಣಾ ಆಯೋಗದ ಸೂಚನೆಯ ಪ್ರಕಾರ, ಸ್ಟಾರ್ ಪ್ರವಾಹ ಚಾನೆಲ್‌ನಲ್ಲಿ ಕೆಲವು ಧಾರಾವಾಹಿಗಳಾದ ಮತಿಚ್ಯ ಚೂಲಿ ಮತ್ತು ಪ್ರೇಮಚಾ ಚಹಾಗಳು ಶಿಂಧೆ ಸೇನೆಯ ಪ್ರಚಾರಕ್ಕಾಗಿ ಜಾಹೀರಾತುಗಳನ್ನು ಪ್ರದರ್ಶಿಸಿದವು. ಪಕ್ಷದ ಜಾಹೀರಾತುಗಳನ್ನು ತೋರಿಸುವ ಮೂಲಕ ಗುಪ್ತ ಪ್ರಚಾರಕ್ಕಾಗಿ ಈ ಜಾಹೀರಾತುಗಳಿಗೆ ಪಕ್ಷವು ಸ್ವಲ್ಪ ಮೊತ್ತವನ್ನು ಪಾವತಿಸುವ ಸಾಧ್ಯತೆಯನ್ನೂ ನೋಟಿಸ್ ಆರೋಪಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ನಡೆಯಬೇಕಿದ್ದ ನಾಲ್ಕು ಚುನಾವಣಾ ರ್‍ಯಾಲಿಗಳ ರದ್ದುಗೊಳಿಸಿದ ಅಮಿತ್ ಶಾ

ಮಾದರಿ ನೀತಿ ಸಂಹಿತೆಯ ಅಡಿಯಲ್ಲಿ ಈ ಜಾಹೀರಾತು ವೆಚ್ಚಗಳು ಸೇರಿದಂತೆ ಎಲ್ಲಾ ಚುನಾವಣಾ ಸಂಬಂಧಿತ ವೆಚ್ಚಗಳನ್ನು ಪಾರದರ್ಶಕವಾಗಿ ವರದಿ ಮಾಡಬೇಕು. ಚುನಾವಣಾ ಆಯೋಗವು ಅಭ್ಯರ್ಥಿಗಳು ಪ್ರಚಾರಕ್ಕಾಗಿ ಖರ್ಚು ಮಾಡುವ ಮೊತ್ತದ ಮೇಲೆ ಕಟ್ಟುನಿಟ್ಟಾದ ಮಿತಿಗಳನ್ನು ವಿಧಿಸುತ್ತದೆ. ಆ ಬಗ್ಗೆ ವಿವರವಾದ ಬಹಿರಂಗಪಡಿಸುವಿಕೆಯ ಅಗತ್ಯವಿರುತ್ತದೆ. ಅಂತಹ ಪರೋಕ್ಷ ಪ್ರಚಾರಗಳಿಗಾಗಿ ಯಾವುದಾದರೂ ಹಣಕಾಸಿನ ವಿನಿಮಯಗಳು ಸಂಭವಿಸಿವೆಯೇ? ಅವರು ಚುನಾವಣಾ ನಿಯಮಗಳನ್ನು ಉಲ್ಲಂಘಿಸಿದ್ದಾರೆಯೇ? ಎಂಬುದನ್ನು ನಿರ್ಧರಿಸಲು ಚುನಾವಣಾ ಆಯೋಗದ ಸೂಚನೆಯು ಪ್ರಯತ್ನಿಸುತ್ತದೆ.

ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ಪರಸ್ಪರ ದೂರು ದಾಖಲಿಸಿಕೊಳ್ಳುವುದು ಸಾಮಾನ್ಯ. ಒಮ್ಮೆ ದೂರನ್ನು ಸ್ವೀಕರಿಸಿದ ನಂತರ ಚುನಾವಣಾ ಆಯೋಗ ನೋಟಿಸ್‌ಗಳನ್ನು ನೀಡಬಹುದು ಅಥವಾ ತನಿಖೆಗಳನ್ನು ಪ್ರಾರಂಭಿಸಬಹುದು. ಇದೀಗ ಕಾಂಗ್ರೆಸ್ ದೂರಿನ ಮೇರೆಗೆ ಶಿಂಧೆ ಅವರ ಶಿವಸೇನೆಯು ಟಿವಿ ಧಾರಾವಾಹಿಗಳ ಮೂಲಕ ಅಘೋಷಿತ ಪ್ರಚಾರ ಚಟುವಟಿಕೆಗಳಲ್ಲಿ ತೊಡಗಿರುವ ಮೂಲಕ ನಿಯಮಗಳನ್ನು ಉಲ್ಲಂಘಿಸಿದೆಯೇ ಎಂದು ಪರಿಶೀಲಿಸಲು ಚುನಾವಣಾ ಆಯೋಗ ಮುಂದಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ