AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election 2021: ಕೊವಿಡ್​ ಲಸಿಕೆ ಸರ್ಟಿಫಿಕೇಟ್​ನಿಂದ ಪ್ರಧಾನಿ ಮೋದಿ ಫೋಟೋ ತೆಗೆಯಲು ಚುನಾವಣಾ ಆಯೋಗ ಸೂಚನೆ

Covid Vaccine ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಂದಲೂ ಕ್ರೆಡಿಟ್​ ಪಡೆಯುತ್ತಿದ್ದಾರೆ ಎಂದು ಟಿಎಂಸಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

Assembly Election 2021: ಕೊವಿಡ್​ ಲಸಿಕೆ ಸರ್ಟಿಫಿಕೇಟ್​ನಿಂದ ಪ್ರಧಾನಿ ಮೋದಿ ಫೋಟೋ ತೆಗೆಯಲು ಚುನಾವಣಾ ಆಯೋಗ ಸೂಚನೆ
ಪ್ರಧಾನಿ ನರೇಂದ್ರ ಮೋದಿ
Lakshmi Hegde
|

Updated on: Mar 06, 2021 | 12:48 PM

Share

ದೆಹಲಿ: ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರೂ ತೆಗೆದುಕೊಂಡಿದ್ದಾರೆ. ಹೀಗೆ ಕೊರೊನಾ ಲಸಿಕೆ (Covid  ಪಡೆದವರಿಗೆ ಒಂದು ಡಿಜಿಟಲ್​ ಸರ್ಟಿಫಿಕೇಟ್​ ನೀಡಲಾಗುತ್ತಿದ್ದು ಅದರ ಕೆಳಗೆ ಮೂಲೆಯಲ್ಲಿ ಮೋದಿಯವರ ಫೋಟೋ ಇದೆ. ಇದರ ಬಗ್ಗೆ ಈಗಾಗಲೇ ಪ್ರತಿಪಕ್ಷಗಳು ಆಕ್ಷೇಪವನ್ನೂ ಎತ್ತಿವೆ. ಲಸಿಕೆ ಹೆಸರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಬ್ಲಿಸಿಟಿ ಪಡೆಯುತ್ತಿದ್ದಾರೆ ಎಂದೂ ಆರೋಪಿಸುತ್ತಿವೆ. ಅದರಲ್ಲಿ ತೃಣಮೂಲ ಕಾಂಗ್ರೆಸ್​ ಒಂದು ಹೆಜ್ಜೆ ಮುಂದೆ ಹೋಗಿ ಚುನಾವಣಾ ಆಯೋಗಕ್ಕೆ ಕೂಡ ದೂರು ಕೊಟ್ಟಿದ್ದರು. ಅದರ ಪರಿಣಾಮವಾಗಿ, ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೊರೊನಾ ಲಸಿಕೆ ಪಡೆದವರಿಗೆ ನೀಡುವ ಡಿಜಿಟಲ್​ ಸರ್ಟಿಫಿಕೇಟ್​ನಲ್ಲಿ ಮೋದಿ ಫೋಟೋವನ್ನು ತೆಗೆಯಬೇಕು ಎಂದು ಚುನಾವಣಾ ಆಯೋಗ ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ.

ಏಪ್ರಿಲ್​ ತಿಂಗಳಲ್ಲಿ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಚುನಾವಣಾ ಆಯೋಗದ ಆದೇಶದ ಅನ್ವಯ ಈ ಎಲ್ಲ ರಾಜ್ಯಗಳಲ್ಲಿ ಲಸಿಕೆ ಪಡೆಯುವವರಿಗೆ ನೀಡುವ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ಹಾಕುವಂತಿಲ್ಲ.

ಚುನಾವಣೆ ಹತ್ತಿರ ಬರುತ್ತಿದೆ. ಈ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೊವಿಡ್​ ಲಸಿಕೆ ಹೆಸರಿನಲ್ಲಿ ಪ್ರಚಾರ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಂದಲೂ ಕ್ರೆಡಿಟ್​ ಪಡೆಯುತ್ತಿದ್ದಾರೆ. ಹಾಗಾಗಿ ಅವರ ಫೋಟೋವನ್ನು ಸರ್ಟಿಫಿಕೇಟ್​​ನಿಂದ ತೆಗೆಯಬೇಕು ಎಂದು ಟಿಎಂಸಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಬಳಿಕ ಆರೋಗ್ಯ ಇಲಾಖೆಗೆ ಪತ್ರ ಬರೆದ EC, ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮಬಂಗಾಳ, ಪುದುಚೇರಿಗಳಲ್ಲಿ ಫೆ.26ರಿಂದ ನೀತಿ ಸಂಹಿತೆ ಜಾರಿಯಾಗಿದೆ. ಅದರ ಅನ್ವಯ ಪ್ರಧಾನಿ ಮೋದಿಯವರ ಫೋಟೋ ಸರ್ಟಿಫಿಕೇಟ್​ನಲ್ಲಿ ಇರುವಂತಿಲ್ಲ ಎಂದು ತಿಳಿಸಿದೆ.

ಎರಡು ಲಸಿಕೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದಾಗಲೂ ಪ್ರತಿಪಕ್ಷಗಳು ಬಿಜೆಪಿ ಲಸಿಕೆ ಎಂದು ಹೇಳಿದ್ದವು. ಲಸಿಕೆ ಹೆಸರಲ್ಲಿ ಕೇಂದ್ರ ಸರ್ಕಾರ ಕ್ರೆಡಿಟ್​ ತೆಗೆದುಕೊಳ್ಳುತ್ತಿದೆ ಎಂದೂ ಆರೋಪಿಸಿದ್ದವು.

ಇದನ್ನೂ ಓದಿ: ಕೊವಿಡ್​ ಲಸಿಕೆ ಬಗ್ಗೆ ನಿಮಗೆ ಗೊತ್ತಿರಬೇಕಾದ Top 9 ಸಂಗತಿಗಳು

How To | ಕೊವಿಡ್-19 ಲಸಿಕೆ ಸ್ವೀಕರಿಸಲು ಹೆಸರು ನೋಂದಣಿ ಹೇಗೆ?

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!