AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election 2021: ಕೊವಿಡ್​ ಲಸಿಕೆ ಸರ್ಟಿಫಿಕೇಟ್​ನಿಂದ ಪ್ರಧಾನಿ ಮೋದಿ ಫೋಟೋ ತೆಗೆಯಲು ಚುನಾವಣಾ ಆಯೋಗ ಸೂಚನೆ

Covid Vaccine ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಂದಲೂ ಕ್ರೆಡಿಟ್​ ಪಡೆಯುತ್ತಿದ್ದಾರೆ ಎಂದು ಟಿಎಂಸಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

Assembly Election 2021: ಕೊವಿಡ್​ ಲಸಿಕೆ ಸರ್ಟಿಫಿಕೇಟ್​ನಿಂದ ಪ್ರಧಾನಿ ಮೋದಿ ಫೋಟೋ ತೆಗೆಯಲು ಚುನಾವಣಾ ಆಯೋಗ ಸೂಚನೆ
ಪ್ರಧಾನಿ ನರೇಂದ್ರ ಮೋದಿ
Follow us
Lakshmi Hegde
|

Updated on: Mar 06, 2021 | 12:48 PM

ದೆಹಲಿ: ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರೂ ತೆಗೆದುಕೊಂಡಿದ್ದಾರೆ. ಹೀಗೆ ಕೊರೊನಾ ಲಸಿಕೆ (Covid  ಪಡೆದವರಿಗೆ ಒಂದು ಡಿಜಿಟಲ್​ ಸರ್ಟಿಫಿಕೇಟ್​ ನೀಡಲಾಗುತ್ತಿದ್ದು ಅದರ ಕೆಳಗೆ ಮೂಲೆಯಲ್ಲಿ ಮೋದಿಯವರ ಫೋಟೋ ಇದೆ. ಇದರ ಬಗ್ಗೆ ಈಗಾಗಲೇ ಪ್ರತಿಪಕ್ಷಗಳು ಆಕ್ಷೇಪವನ್ನೂ ಎತ್ತಿವೆ. ಲಸಿಕೆ ಹೆಸರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಬ್ಲಿಸಿಟಿ ಪಡೆಯುತ್ತಿದ್ದಾರೆ ಎಂದೂ ಆರೋಪಿಸುತ್ತಿವೆ. ಅದರಲ್ಲಿ ತೃಣಮೂಲ ಕಾಂಗ್ರೆಸ್​ ಒಂದು ಹೆಜ್ಜೆ ಮುಂದೆ ಹೋಗಿ ಚುನಾವಣಾ ಆಯೋಗಕ್ಕೆ ಕೂಡ ದೂರು ಕೊಟ್ಟಿದ್ದರು. ಅದರ ಪರಿಣಾಮವಾಗಿ, ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೊರೊನಾ ಲಸಿಕೆ ಪಡೆದವರಿಗೆ ನೀಡುವ ಡಿಜಿಟಲ್​ ಸರ್ಟಿಫಿಕೇಟ್​ನಲ್ಲಿ ಮೋದಿ ಫೋಟೋವನ್ನು ತೆಗೆಯಬೇಕು ಎಂದು ಚುನಾವಣಾ ಆಯೋಗ ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ.

ಏಪ್ರಿಲ್​ ತಿಂಗಳಲ್ಲಿ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಚುನಾವಣಾ ಆಯೋಗದ ಆದೇಶದ ಅನ್ವಯ ಈ ಎಲ್ಲ ರಾಜ್ಯಗಳಲ್ಲಿ ಲಸಿಕೆ ಪಡೆಯುವವರಿಗೆ ನೀಡುವ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ಹಾಕುವಂತಿಲ್ಲ.

ಚುನಾವಣೆ ಹತ್ತಿರ ಬರುತ್ತಿದೆ. ಈ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೊವಿಡ್​ ಲಸಿಕೆ ಹೆಸರಿನಲ್ಲಿ ಪ್ರಚಾರ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಂದಲೂ ಕ್ರೆಡಿಟ್​ ಪಡೆಯುತ್ತಿದ್ದಾರೆ. ಹಾಗಾಗಿ ಅವರ ಫೋಟೋವನ್ನು ಸರ್ಟಿಫಿಕೇಟ್​​ನಿಂದ ತೆಗೆಯಬೇಕು ಎಂದು ಟಿಎಂಸಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಬಳಿಕ ಆರೋಗ್ಯ ಇಲಾಖೆಗೆ ಪತ್ರ ಬರೆದ EC, ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮಬಂಗಾಳ, ಪುದುಚೇರಿಗಳಲ್ಲಿ ಫೆ.26ರಿಂದ ನೀತಿ ಸಂಹಿತೆ ಜಾರಿಯಾಗಿದೆ. ಅದರ ಅನ್ವಯ ಪ್ರಧಾನಿ ಮೋದಿಯವರ ಫೋಟೋ ಸರ್ಟಿಫಿಕೇಟ್​ನಲ್ಲಿ ಇರುವಂತಿಲ್ಲ ಎಂದು ತಿಳಿಸಿದೆ.

ಎರಡು ಲಸಿಕೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದಾಗಲೂ ಪ್ರತಿಪಕ್ಷಗಳು ಬಿಜೆಪಿ ಲಸಿಕೆ ಎಂದು ಹೇಳಿದ್ದವು. ಲಸಿಕೆ ಹೆಸರಲ್ಲಿ ಕೇಂದ್ರ ಸರ್ಕಾರ ಕ್ರೆಡಿಟ್​ ತೆಗೆದುಕೊಳ್ಳುತ್ತಿದೆ ಎಂದೂ ಆರೋಪಿಸಿದ್ದವು.

ಇದನ್ನೂ ಓದಿ: ಕೊವಿಡ್​ ಲಸಿಕೆ ಬಗ್ಗೆ ನಿಮಗೆ ಗೊತ್ತಿರಬೇಕಾದ Top 9 ಸಂಗತಿಗಳು

How To | ಕೊವಿಡ್-19 ಲಸಿಕೆ ಸ್ವೀಕರಿಸಲು ಹೆಸರು ನೋಂದಣಿ ಹೇಗೆ?

ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್