AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election 2021: ಕೊವಿಡ್​ ಲಸಿಕೆ ಸರ್ಟಿಫಿಕೇಟ್​ನಿಂದ ಪ್ರಧಾನಿ ಮೋದಿ ಫೋಟೋ ತೆಗೆಯಲು ಚುನಾವಣಾ ಆಯೋಗ ಸೂಚನೆ

Covid Vaccine ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಂದಲೂ ಕ್ರೆಡಿಟ್​ ಪಡೆಯುತ್ತಿದ್ದಾರೆ ಎಂದು ಟಿಎಂಸಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

Assembly Election 2021: ಕೊವಿಡ್​ ಲಸಿಕೆ ಸರ್ಟಿಫಿಕೇಟ್​ನಿಂದ ಪ್ರಧಾನಿ ಮೋದಿ ಫೋಟೋ ತೆಗೆಯಲು ಚುನಾವಣಾ ಆಯೋಗ ಸೂಚನೆ
ಪ್ರಧಾನಿ ನರೇಂದ್ರ ಮೋದಿ
Lakshmi Hegde
|

Updated on: Mar 06, 2021 | 12:48 PM

Share

ದೆಹಲಿ: ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರೂ ತೆಗೆದುಕೊಂಡಿದ್ದಾರೆ. ಹೀಗೆ ಕೊರೊನಾ ಲಸಿಕೆ (Covid  ಪಡೆದವರಿಗೆ ಒಂದು ಡಿಜಿಟಲ್​ ಸರ್ಟಿಫಿಕೇಟ್​ ನೀಡಲಾಗುತ್ತಿದ್ದು ಅದರ ಕೆಳಗೆ ಮೂಲೆಯಲ್ಲಿ ಮೋದಿಯವರ ಫೋಟೋ ಇದೆ. ಇದರ ಬಗ್ಗೆ ಈಗಾಗಲೇ ಪ್ರತಿಪಕ್ಷಗಳು ಆಕ್ಷೇಪವನ್ನೂ ಎತ್ತಿವೆ. ಲಸಿಕೆ ಹೆಸರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಬ್ಲಿಸಿಟಿ ಪಡೆಯುತ್ತಿದ್ದಾರೆ ಎಂದೂ ಆರೋಪಿಸುತ್ತಿವೆ. ಅದರಲ್ಲಿ ತೃಣಮೂಲ ಕಾಂಗ್ರೆಸ್​ ಒಂದು ಹೆಜ್ಜೆ ಮುಂದೆ ಹೋಗಿ ಚುನಾವಣಾ ಆಯೋಗಕ್ಕೆ ಕೂಡ ದೂರು ಕೊಟ್ಟಿದ್ದರು. ಅದರ ಪರಿಣಾಮವಾಗಿ, ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೊರೊನಾ ಲಸಿಕೆ ಪಡೆದವರಿಗೆ ನೀಡುವ ಡಿಜಿಟಲ್​ ಸರ್ಟಿಫಿಕೇಟ್​ನಲ್ಲಿ ಮೋದಿ ಫೋಟೋವನ್ನು ತೆಗೆಯಬೇಕು ಎಂದು ಚುನಾವಣಾ ಆಯೋಗ ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ.

ಏಪ್ರಿಲ್​ ತಿಂಗಳಲ್ಲಿ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಚುನಾವಣಾ ಆಯೋಗದ ಆದೇಶದ ಅನ್ವಯ ಈ ಎಲ್ಲ ರಾಜ್ಯಗಳಲ್ಲಿ ಲಸಿಕೆ ಪಡೆಯುವವರಿಗೆ ನೀಡುವ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ಹಾಕುವಂತಿಲ್ಲ.

ಚುನಾವಣೆ ಹತ್ತಿರ ಬರುತ್ತಿದೆ. ಈ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೊವಿಡ್​ ಲಸಿಕೆ ಹೆಸರಿನಲ್ಲಿ ಪ್ರಚಾರ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಂದಲೂ ಕ್ರೆಡಿಟ್​ ಪಡೆಯುತ್ತಿದ್ದಾರೆ. ಹಾಗಾಗಿ ಅವರ ಫೋಟೋವನ್ನು ಸರ್ಟಿಫಿಕೇಟ್​​ನಿಂದ ತೆಗೆಯಬೇಕು ಎಂದು ಟಿಎಂಸಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಬಳಿಕ ಆರೋಗ್ಯ ಇಲಾಖೆಗೆ ಪತ್ರ ಬರೆದ EC, ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮಬಂಗಾಳ, ಪುದುಚೇರಿಗಳಲ್ಲಿ ಫೆ.26ರಿಂದ ನೀತಿ ಸಂಹಿತೆ ಜಾರಿಯಾಗಿದೆ. ಅದರ ಅನ್ವಯ ಪ್ರಧಾನಿ ಮೋದಿಯವರ ಫೋಟೋ ಸರ್ಟಿಫಿಕೇಟ್​ನಲ್ಲಿ ಇರುವಂತಿಲ್ಲ ಎಂದು ತಿಳಿಸಿದೆ.

ಎರಡು ಲಸಿಕೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದಾಗಲೂ ಪ್ರತಿಪಕ್ಷಗಳು ಬಿಜೆಪಿ ಲಸಿಕೆ ಎಂದು ಹೇಳಿದ್ದವು. ಲಸಿಕೆ ಹೆಸರಲ್ಲಿ ಕೇಂದ್ರ ಸರ್ಕಾರ ಕ್ರೆಡಿಟ್​ ತೆಗೆದುಕೊಳ್ಳುತ್ತಿದೆ ಎಂದೂ ಆರೋಪಿಸಿದ್ದವು.

ಇದನ್ನೂ ಓದಿ: ಕೊವಿಡ್​ ಲಸಿಕೆ ಬಗ್ಗೆ ನಿಮಗೆ ಗೊತ್ತಿರಬೇಕಾದ Top 9 ಸಂಗತಿಗಳು

How To | ಕೊವಿಡ್-19 ಲಸಿಕೆ ಸ್ವೀಕರಿಸಲು ಹೆಸರು ನೋಂದಣಿ ಹೇಗೆ?

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?