AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ತಿಂಗಳಲ್ಲಿ 5ರಾಜ್ಯಗಳ ವಿಧಾನಸಭಾ ಚುನಾವಣೆ; ಇಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿಯೊಂದಿಗೆ ಚುನಾವಣಾ ಆಯೋಗದ ಸಭೆ

ದೇಶದಲ್ಲಿ ಕೊವಿಡ್​ 19 ಪರಿಸ್ಥಿತಿ ಗಂಭೀರವಾಗುತ್ತಿದೆ. ಹೀಗಾಗಿ ಉತ್ತರಪ್ರದೇಶದ ಚುನಾವಣೆಯನ್ನು ಇನ್ನು 2 ಅಥವಾ 3ತಿಂಗಳವರೆಗೆ ಮುಂದೂಡಿ ಎಂದು ಅಲಹಾಬಾದ್​ ಹೈಕೋರ್ಟ್​ ಚುನಾವಣಾ ಆಯೋಗಕ್ಕೆ ಹೇಳಿತ್ತು.

ಕೆಲವೇ ತಿಂಗಳಲ್ಲಿ 5ರಾಜ್ಯಗಳ ವಿಧಾನಸಭಾ ಚುನಾವಣೆ; ಇಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿಯೊಂದಿಗೆ ಚುನಾವಣಾ ಆಯೋಗದ ಸಭೆ
ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್​ ಭೂಷಣ್​
TV9 Web
| Edited By: |

Updated on: Dec 27, 2021 | 8:01 AM

Share

2022ರ ಪ್ರಾರಂಭದಲ್ಲಿ 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ (Assembly Polls) ನಡೆಯಲಿದೆ. ಆದರೆ ದೇಶದಲ್ಲಿ ಕೊರೊನಾ, ಒಮಿಕ್ರಾನ್​ ಆತಂಕ (Omicron Variant) ಶುರುವಾಗಿದೆ. ಹೀಗಾಗಿ ದೇಶದ ಕೊವಿಡ್​ 19 ಸ್ಥಿತಿಗತಿಗಳ ಬಗ್ಗೆ ಚರ್ಚಿಸಲು ಇಂದು ಭಾರತೀಯ ಚುನಾವಣಾ ಆಯೋಗ, ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್​ ಭೂಷಣ್​ ಮತ್ತು ಇತರ ಆರೋಗ್ಯಾಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸಲಿದೆ. ಅಷ್ಟೇ ಅಲ್ಲ, ಚುನಾವಣಾ ಪ್ರಚಾರ, ಚುನಾವಣೆ ದಿನ ಮತ್ತು ಮತ ಎಣಿಕೆ ದಿನಗಳಂದು  ತೆಗೆದುಕೊಳ್ಳಬಹುದಾದ ಕೊವಿಡ್​ 19 ನಿಯಂತ್ರಣಕಾ ಕ್ರಮಗಳಿಗೆ ಸಂಬಂಧಪಟ್ಟಂತೆ ಸಲಹೆಯನ್ನೂ ಚುನಾವಣಾ ಆಯೋಗದ ಸಿಬ್ಬಂದಿ, ರಾಜೇಶ್​ ಭೂಷಣ್​​ ಬಳಿ ಕೇಳಲಿದ್ದಾರೆ. 

2022ರ ಮಾರ್ಚ್​ ತಿಂಗಳಲ್ಲಿ ಗೋವಾ, ಪಂಜಾಬ್​, ಉತ್ತರಾಖಂಡ್​ ಮತ್ತು ಮಣಿಪುರ ವಿಧಾನಸಭೆಗಳ ಅವಧಿ ಮಾರ್ಚ್​ ಅಂತ್ಯದ ಹೊತ್ತಿಗೆ ಮುಗಿಯಲಿದ್ದು, ಉತ್ತರಪ್ರದೇಶ ವಿಧಾನಸಭೆ ಅವಧಿ ಮೇ ತಿಂಗಳಲ್ಲಿ ಮುಕ್ತಾಯಗೊಳ್ಳುವುದು. ಹೀಗಾಗಿ ಈ ಐದು ರಾಜ್ಯಗಳಿಗೆ ಫೆಬ್ರವರಿ-ಮಾರ್ಚ್​ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು. ಚುನಾವಣಾ ದಿನಾಂಕವನ್ನು ಜನವರಿಯಲ್ಲಿ ಚುನಾವಣಾ ಆಯೋಗ ಘೋಷಣೆ ಮಾಡಲಿದೆ.

ದೇಶದಲ್ಲಿ ಕೊವಿಡ್​ 19 ಪರಿಸ್ಥಿತಿ ಗಂಭೀರವಾಗುತ್ತಿದೆ. ಹೀಗಾಗಿ ಉತ್ತರಪ್ರದೇಶದ ಚುನಾವಣೆಯನ್ನು ಇನ್ನು 2 ಅಥವಾ 3ತಿಂಗಳವರೆಗೆ ಮುಂದೂಡಿ ಎಂದು ಅಲಹಾಬಾದ್​ ಹೈಕೋರ್ಟ್​ ಚುನಾವಣಾ ಆಯೋಗಕ್ಕೆ ಹೇಳಿತ್ತು. ಅಷ್ಟೇ ಅಲ್ಲ, ಕೊವಿಡ್​ 19 ಎರಡನೇ ಅಲೆ ಸಂದರ್ಭದಲ್ಲಿ ಏನಾಯಿತು ಎಂದು ಎಲ್ಲರಿಗೂ ಗೊತ್ತು. ಈಗ ಸರಿಯಾಗಿ ಮುನ್ನೆಚ್ಚರಿಕೆ ತೆಗೆದುಕೊಳ್ಳದೆ ಇದ್ದರೆ, ಮತ್ತೊಮ್ಮೆ ಅಂಥ ಪರಿಸ್ಥಿತಿ ಎದುರಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದೆ. ಇನ್ನು ಪಂಜಾಬ್​, ಗೋವಾ, ಉತ್ತರಪ್ರದೇಶ, ಉತ್ತರಾಖಂಡ ಚುನಾವಣೆಗಳ ಸಿದ್ಧತೆಗಳು ಗರಿಗೆದರಿವೆ. ರಾಜಕೀಯ ಪಕ್ಷಗಳ ನಾಯಕರು ರಾಜ್ಯಕ್ಕೆ ಭೇಟಿ ನೀಡಿ, ಪ್ರಚಾರವನ್ನು ಶುರು ಮಾಡುತ್ತಿದ್ದಾರೆ. ಆದರೆ ಇದೀಗ ಹೊಸತಳಿ ಒಮಿಕ್ರಾನ್ ಆತಂಕ ಹೆಚ್ಚುತ್ತಿದೆ. ದೇಶದಲ್ಲಿ 4ಕ್ಕೂ ಹೆಚ್ಚು ಪ್ರಕರಣಗಳು ಕಾಣಿಸಿಕೊಂಡಿದ್ದು, ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಮಧ್ಯಪ್ರದೇಶ, ಆಸ್ಸಾಂ ಸೇರಿ ಕೆಲವು ರಾಜ್ಯಗಳು ಈಗಾಗಲೇ ನೈಟ್​ ಕರ್ಫ್ಯೂದಂಥ ನಿರ್ಬಂಧ ಹೇರಿಕೊಂಡಿವೆ.

ಇದನ್ನೂ ಓದಿ: ಇಂದು ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ; ವಿವಿಧ ಜಲವಿದ್ಯುತ್​ ಯೋಜನೆಗಳಿಗೆ ಶಂಕುಸ್ಥಾಪನೆ

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?