AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದ ಚುನಾವಣಾ ಆಯೋಗ; ಇಂದು ಕಾಂಗ್ರೆಸ್ ನಿಯೋಗದ ಭೇಟಿಗೆ ಒಪ್ಪಿಗೆ

ಚುನಾವಣಾ ಆಯೋಗವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದೆ. "ಈ ನಡುವೆ ಪ್ರತಿಪಕ್ಷದ ನಾಯಕರ ಹೇಳಿಕೆಗಳನ್ನು ಆಯೋಗವು ಗಮನಿಸಿದೆ. ಅವರು ಹರಿಯಾಣದ ಫಲಿತಾಂಶಗಳನ್ನು ಅನಿರೀಕ್ಷಿತ ಎಂದು ಬಣ್ಣಿಸಿದ್ದಾರೆ ಮತ್ತು ಚುನಾವಣಾ ಸೋಲನ್ನು ಪರಿಶೀಲಿಸಲು ಇಂದು ಕಾಂಗ್ರೆಸ್ ನಿಯೋಗವನ್ನು ಭೇಟಿ ಮಾಡಲು ಒಪ್ಪಿಕೊಂಡಿದ್ದೇವೆ" ಎಂದು ಚುನಾವಣಾ ಆಯೋಗ ಹೇಳಿದೆ.

ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದ ಚುನಾವಣಾ ಆಯೋಗ; ಇಂದು ಕಾಂಗ್ರೆಸ್ ನಿಯೋಗದ ಭೇಟಿಗೆ ಒಪ್ಪಿಗೆ
ಮಲ್ಲಿಕಾರ್ಜುನ ಖರ್ಗೆ
ಸುಷ್ಮಾ ಚಕ್ರೆ
|

Updated on: Oct 09, 2024 | 5:17 PM

Share

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ನಂತರ ಚುನಾವಣಾ ಆಯೋಗವು ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದು, ಚುನಾವಣೆಯ ಫಲಿತಾಂಶವನ್ನು ಪರಿಶೀಲಿಸಲು ಕಾಂಗ್ರೆಸ್ ಪಕ್ಷದ ನಿಯೋಗವನ್ನು ಭೇಟಿ ಮಾಡಲು ಒಪ್ಪಿಗೆ ನೀಡಿದೆ. “ಈ ಮಧ್ಯೆ ವಿರೋಧ ಪಕ್ಷದ ನಾಯಕರ ಹೇಳಿಕೆಗಳನ್ನು ಆಯೋಗವು ಗಮನಿಸಿದೆ. ನೀವು ಹರಿಯಾಣದ ಫಲಿತಾಂಶಗಳನ್ನು ಅನಿರೀಕ್ಷಿತ ಎಂದು ಬಣ್ಣಿಸಿದ್ದೀರಿ ಮತ್ತು INC ಅದನ್ನು ವಿಶ್ಲೇಷಿಸಲು ಬಯಸುವುದರಿಂದ ನಿಮ್ಮ ಭೇಟಿಗೆ ಅವಕಾಶ ನೀಡಲಾಗಿದೆ” ಎಂದು ಚುನಾವಣಾ ಆಯೋಗ ಖರ್ಗೆಗೆ ಪತ್ರ ಬರೆದಿದೆ.

“ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಹೇಳಿಕೆಯು ಚುನಾವಣೆಯ ಫಲಿತಾಂಶದ ಬಗ್ಗೆ ಪಕ್ಷದ ಅಧಿಕೃತ ಅಭಿಪ್ರಾಯವಾಗಿದೆ. ಚುನಾವಣಾ ಆಯೋಗ ಇಂದು ಸಂಜೆ 6 ಗಂಟೆಗೆ ಕಾಂಗ್ರೆಸ್ ನಿಯೋಗವನ್ನು ಭೇಟಿ ಮಾಡಲು ಒಪ್ಪಿಗೆ ನೀಡಿದೆ” ಎಂದು ಚುನಾವಣಾ ಆಯೋಗ ಪತ್ರದಲ್ಲಿ ತಿಳಿಸಿದೆ.

ಇದನ್ನೂ ಓದಿ: ‘ಹರಿಯಾಣದ ಗೆಲುವು ದೇಶಾದ್ಯಂತ ಪ್ರತಿಧ್ವನಿಸಲಿದೆ’; ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ಹಿರಿಯ ಕಾಂಗ್ರೆಸ್ ನಾಯಕರ ‘ಹರಿಯಾಣ ಚುನಾವಣೆಯ ಫಲಿತಾಂಶಗಳು ಸ್ವೀಕಾರಾರ್ಹವಲ್ಲ’ ಎಂಬ ಹೇಳಿಕೆಯನ್ನು ಭಾರತೀಯ ಚುನಾವಣಾ ಆಯೋಗ ದೇಶದ ಪ್ರಜಾಪ್ರಭುತ್ವ ಪರಂಪರೆಯಲ್ಲಿ ಕೇಳಿರದ ಮತ್ತು ವಾಕ್ ಸ್ವಾತಂತ್ರ್ಯದ ಕಾನೂನುಬದ್ಧ ಭಾಗದಿಂದ ದೂರವಿದೆ ಎಂದು ಬಣ್ಣಿಸಿದೆ.

ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ಗಮನಿಸಿರುವುದಾಗಿ ಚುನಾವಣಾ ಆಯೋಗವು ಹೇಳಿದೆ. ಹರಿಯಾಣದ ಫಲಿತಾಂಶಗಳನ್ನು “ಅನಿರೀಕ್ಷಿತ” ಎಂದು ಬಣ್ಣಿಸಿದೆ. ಕಾಂಗ್ರೆಸ್ ಪಕ್ಷವು ಅದನ್ನು ವಿಶ್ಲೇಷಿಸಲು ಮತ್ತು ಅದರ ದೂರುಗಳೊಂದಿಗೆ ಇಸಿಯನ್ನು ಸಂಪರ್ಕಿಸಲು ಪ್ರಸ್ತಾಪಿಸುತ್ತದೆ. ಹೀಗಾಗಿ, “ಚುನಾವಣಾ ಫಲಿತಾಂಶಗಳು ಸ್ವೀಕಾರಾರ್ಹವಲ್ಲ” ಎಂಬ ಹೇಳಿಕೆಯನ್ನು ನೀಡಿದವರು ಸೇರಿದಂತೆ 12 ಸದಸ್ಯರು ಚುನಾವಣಾ ಆಯೋಗವನ್ನು ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: ಹರಿಯಾಣದಲ್ಲಿ ಕಾಂಗ್ರೆಸ್‌ಗಾದ ಸೋಲಿನ ಗಾಯಕ್ಕೆ ಉಪ್ಪು ಸವರಿದ ಇಂಡಿಯ ಬ್ಲಾಕ್ ಮಿತ್ರಪಕ್ಷಗಳು

ಎಲ್ಲಾ ಎಕ್ಸಿಟ್ ಪೋಲ್‌ಗಳಿಂದ ಕಾಂಗ್ರೆಸ್ 50ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಹರಿಯಾಣ ರಾಜ್ಯದಲ್ಲಿ ಸರ್ಕಾರವನ್ನು ರಚಿಸುತ್ತದೆ ಎಂದು ಭವಿಷ್ಯ ನುಡಿದಿತ್ತು. ಆದರೆ ವಾಸ್ತವವಾಗಿ ಬಹುಮತದ ಕೊರತೆಯಿಂದ ಕೇವಲ 37 ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ, ಈ ಫಲಿತಾಂಶಗಳನ್ನು ‘ಅನಿರೀಕ್ಷಿತ’ ಎಂದು ಕರೆದ ರಾಹುಲ್ ಗಾಂಧಿ, “ಹಲವು ವಿಧಾನಸಭಾ ಕ್ಷೇತ್ರಗಳಿಂದ ಬರುವ ದೂರುಗಳ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ (ಇಸಿ) ತಿಳಿಸುತ್ತೇವೆ” ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗವು ಇಂದು ಸಂಜೆ 6 ಗಂಟೆಗೆ 12 ಸದಸ್ಯರ ಕಾಂಗ್ರೆಸ್ ನಿಯೋಗವನ್ನು ಭೇಟಿ ಮಾಡಿ ಪಕ್ಷದ ಅಸಮಾಧಾನವನ್ನು ಪರಿಹರಿಸಲು ಒಪ್ಪಿಗೆ ನೀಡಿದೆ.

ಜೈರಾಮ್ ರಮೇಶ್, ಪವನ್ ಖೇರಾ, ಕೆ.ಸಿ ವೇಣುಗೋಪಾಲ್, ಅಶೋಕ್ ಗೆಹ್ಲೋಟ್, ಭೂಪಿಂದರ್ ಸಿಂಗ್ ಹೂಡಾ, ಪ್ರತಾಪ್ ಸಿಂಗ್ ಬಾಜ್ವಾ ಮತ್ತು ಡಾ. ಅಭಿಷೇಕ್ ಮನು ಸಿಂಘ್ವಿ ಈ ನಿಯೋಗದ ಭಾಗವಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ