AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಯೆಂದರೆ ಸೌಂದರ್ಯ ಸ್ಪರ್ಧೆಯಲ್ಲ; ರಾಜಸ್ಥಾನದಲ್ಲಿ ಮಹಿಳಾ ಸಿಎಂ ಆಯ್ಕೆ ಬಗ್ಗೆ ಜೈರಾಮ್ ರಮೇಶ್ ಪ್ರತಿಕ್ರಿಯೆ

ಚುನಾವಣೆ ಎಂಬುದು ಪಕ್ಷಗಳು, ಅವರ ಸಿದ್ಧಾಂತಗಳು ಮತ್ತು ಪ್ರಣಾಳಿಕೆಗಳ ನಡುವಿನ ಸ್ಪರ್ಧೆಯೇ ಹೊರತು ಅದೊಂದು ಸೌಂದರ್ಯ ಸ್ಪರ್ಧೆಯಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಚುನಾವಣೆಯೆಂದರೆ ಸೌಂದರ್ಯ ಸ್ಪರ್ಧೆಯಲ್ಲ; ರಾಜಸ್ಥಾನದಲ್ಲಿ ಮಹಿಳಾ ಸಿಎಂ ಆಯ್ಕೆ ಬಗ್ಗೆ ಜೈರಾಮ್ ರಮೇಶ್ ಪ್ರತಿಕ್ರಿಯೆ
ಜೈರಾಮ್ ರಮೇಶ್
TV9 Web
| Edited By: |

Updated on:Dec 13, 2022 | 9:40 AM

Share

ನವದೆಹಲಿ: ಮುಂದಿನ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ (Rajasthan) ಮಹಿಳಾ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ (Congress) ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ (Jairam Ramesh), ಚುನಾವಣೆಗಳು ವ್ಯಕ್ತಿಗಳ ನಡುವೆ ನಡೆಯುವ ಸೌಂದರ್ಯ ಸ್ಪರ್ಧೆಯಲ್ಲ ಎಂದು ಹೇಳಿದ್ದಾರೆ.

ಚುನಾವಣೆ ಎಂಬುದು ಪಕ್ಷಗಳು, ಅವರ ಸಿದ್ಧಾಂತಗಳು ಮತ್ತು ಪ್ರಣಾಳಿಕೆಗಳ ನಡುವಿನ ಸ್ಪರ್ಧೆಯೇ ಹೊರತು ಅದೊಂದು ಸೌಂದರ್ಯ ಸ್ಪರ್ಧೆಯಲ್ಲ. ಹೀಗಾಗಿ, ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನ ಮುಖ್ಯಮಂತ್ರಿಯ ಅಭ್ಯರ್ಥಿಯ ಹೆಸರನ್ನು ಘೋಷಿಸುತ್ತಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಬ್ರೇಕ್​ ಫೇಲ್ ಆಗಿರುವ ಪಕ್ಷ, ಯಾವತ್ತಾದರೂ ಒಂದು ದಿನ ಅಪಘಾತವಾಗುತ್ತೆ -ಶ್ರೀರಾಮುಲು

ಮುಂದಿನ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್​ನಿಂದ ಮುಖ್ಯಮಂತ್ರಿಯಾಗಿ ಮಹಿಳೆಯೊಬ್ಬರು ಅಭ್ಯರ್ಥಿಯಾಗಬಹುದೇ? ಎಂಬ ಪ್ರಶ್ನೆಗೆ ಉತ್ತರಿಸಿದ ಜೈರಾಮ್ ರಮೇಶ್, ಮಹಿಳೆಯೊಬ್ಬರು ಮುಖ್ಯಮಂತ್ರಿಯಾಗಲು ಸಾಧ್ಯವಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕು ಎಂಬುದು ನಮ್ಮ ಆದ್ಯತೆ. ನಮ್ಮ ದೇಶದಲ್ಲಿ ನಮ್ಮ ರಾಜಕೀಯ ವ್ಯವಸ್ಥೆಯಲ್ಲಿ ಚುನಾವಣೆಗಳು ವ್ಯಕ್ತಿಗಳ ನಡುವಿನ ಸೌಂದರ್ಯ ಸ್ಪರ್ಧೆಯಲ್ಲ. ಈ ಪದವನ್ನು ಯಾರೂ ತಪ್ಪಾಗಿ ಭಾವಿಸಬೇಡಿ ಎಂದು ಹೇಳಿದ್ದಾರೆ.

ಚುನಾವಣೆಗಳು ಪಕ್ಷಗಳ ನಡುವೆ ನಡೆಯುತ್ತವೆ. ಪಕ್ಷದ ಸಿದ್ಧಾಂತಗಳು, ಪ್ರಣಾಳಿಕೆಗಳು ಮತ್ತು ಪಕ್ಷಗಳ ಚಿಹ್ನೆಗಳ ಮೇಲೆ ಹೋರಾಡುತ್ತವೆ ಎಂದು ಕಾಂಗ್ರೆಸ್ ನಂಬುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಹತ್ಯೆ ಮಾಡಿ ಎಂದಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಬಂಧನ

ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂಬುದು ಚುನಾವಣೆಯ ನಂತರವೇ ಗೊತ್ತಾಗುತ್ತದೆ. ಒಂದು ಅಥವಾ ಎರಡು ಬಾರಿ ಹೊರತುಪಡಿಸಿ ಕಾಂಗ್ರೆಸ್ ಪಕ್ಷವು ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಚುನಾವಣೆಗೂ ಮೊದಲೇ ಘೋಷಣೆ ಮಾಡಿಲ್ಲ. ಏಕೆಂದರೆ ಇದು ಪಕ್ಷಗಳ ನಡುವಿನ ಸ್ಪರ್ಧೆ ಎಂದು ನಾವು ನಂಬುತ್ತೇವೆ. ಜನಾದೇಶವು ಪಕ್ಷಕ್ಕೆ ಇರಬೇಕೇ ಹೊರತು ಒಬ್ಬ ವ್ಯಕ್ತಿಗೆ ಅಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:40 am, Tue, 13 December 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ