AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wrestlers Protest: ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ, ಚುನಾವಣಾಧಿಕಾರಿಯಾಗಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ನೇಮಕ

ಮುಂದಿನ ತಿಂಗಳು ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ ನಡೆಯಲಿದೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ ಸೋಮವಾರ ಪ್ರಕಟಿಸಿದೆ. ಒಲಿಂಪಿಕ್ ಅಸೋಸಿಯೇಷನ್ ​​ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅವರನ್ನು ಚುನಾವಣೆಗೆ ಚುನಾವಣಾಧಿಕಾರಿಯಾಗಿ ನೇಮಿಸಿದೆ.

Wrestlers Protest: ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ, ಚುನಾವಣಾಧಿಕಾರಿಯಾಗಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ನೇಮಕ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 12, 2023 | 5:48 PM

Share

ದೆಹಲಿ: ಮುಂದಿನ ತಿಂಗಳು ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ ನಡೆಯಲಿದೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ ಸೋಮವಾರ ಪ್ರಕಟಿಸಿದೆ. ಒಲಿಂಪಿಕ್ ಅಸೋಸಿಯೇಷನ್ ​​ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅವರನ್ನು ಚುನಾವಣೆಗೆ ಚುನಾವಣಾಧಿಕಾರಿಯಾಗಿ ನೇಮಿಸಿದೆ. ಐಒಎ ಡಬ್ಲ್ಯುಎಫ್‌ಐ ಕಾರ್ಯಕಾರಿ ಸಮಿತಿಯ ಚುನಾವಣೆಗಳನ್ನು ನಡೆಸಲು ಮುಂದಾಗಬೇಕಿದೆ ಮತ್ತು ಡಬ್ಲ್ಯುಎಫ್‌ಐನ ಚುನಾವಣೆಗಳನ್ನು ನಡೆಸಲು ನಿಮ್ಮನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗುತ್ತಿದೆ. ಜತೆಗೆ ನಿಮಗೆ ಒಬ್ಬ ಸಹಾಯಕ ಚುನಾವಣಾಧಿಕಾರಿ ಮತ್ತು ಇತರ ಸಿಬ್ಬಂದಿಯನ್ನು ನೇಮಿಸಲು ಅವಕಾಶ ನೀಡಲಾಗುವುದು ಎಂದು IOA ಹೇಳಿಕೆಯಲ್ಲಿ ತಿಳಿಸಿದೆ.

ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿ ಪಟುಗಳು ಅವರ ಮೇಲೆ ಲೈಂಗಿಕ ಆರೋಪ ಮಾಡಿದ್ದು, ಈಗಾಗಲೇ ಅವರ ಪೊಲೀಸ್ ತನಿಖೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ: Wrestlers Protest: ಆರೋಪಕ್ಕೆ ಸಂಬಂಧಿಸಿದ ಫೋಟೊಗಳು, ವಿಡಿಯೋಗಳನ್ನು ಒದಗಿಸುವಂತೆ ಕುಸ್ತಿಪಟುಗಳನ್ನು ಕೇಳಿದ ಪೊಲೀಸರು

ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಗುರುವಾರ ವಿಚಾರಣಾ ನ್ಯಾಯಾಲಯದ ಮುಂದೆ ತಮ್ಮ ತನಿಖಾ ವರದಿಗಳನ್ನು ಇಟ್ಟಿದ್ದಾರೆ. ಬಿಜೆಪಿ ನಾಯಕ ಬ್ರಿಜ್ ಭೂಷಣ್ ಶರಣ್ ಸಿಂಗ್ ಸುಮಾರು ಒಂದು ದಶಕದಿಂದ ಕುಸ್ತಿ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ಅವರ ಮಗ ಸ್ಥಳೀಯ ಶಾಸಕ ಮತ್ತು ಫೆಡರೇಶನ್‌ನಲ್ಲಿ ಅಧಿಕಾರಿಯೂ ಆಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್