AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wrestlers Protest: ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ, ಚುನಾವಣಾಧಿಕಾರಿಯಾಗಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ನೇಮಕ

ಮುಂದಿನ ತಿಂಗಳು ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ ನಡೆಯಲಿದೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ ಸೋಮವಾರ ಪ್ರಕಟಿಸಿದೆ. ಒಲಿಂಪಿಕ್ ಅಸೋಸಿಯೇಷನ್ ​​ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅವರನ್ನು ಚುನಾವಣೆಗೆ ಚುನಾವಣಾಧಿಕಾರಿಯಾಗಿ ನೇಮಿಸಿದೆ.

Wrestlers Protest: ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ, ಚುನಾವಣಾಧಿಕಾರಿಯಾಗಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ನೇಮಕ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 12, 2023 | 5:48 PM

Share

ದೆಹಲಿ: ಮುಂದಿನ ತಿಂಗಳು ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ ನಡೆಯಲಿದೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ ಸೋಮವಾರ ಪ್ರಕಟಿಸಿದೆ. ಒಲಿಂಪಿಕ್ ಅಸೋಸಿಯೇಷನ್ ​​ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅವರನ್ನು ಚುನಾವಣೆಗೆ ಚುನಾವಣಾಧಿಕಾರಿಯಾಗಿ ನೇಮಿಸಿದೆ. ಐಒಎ ಡಬ್ಲ್ಯುಎಫ್‌ಐ ಕಾರ್ಯಕಾರಿ ಸಮಿತಿಯ ಚುನಾವಣೆಗಳನ್ನು ನಡೆಸಲು ಮುಂದಾಗಬೇಕಿದೆ ಮತ್ತು ಡಬ್ಲ್ಯುಎಫ್‌ಐನ ಚುನಾವಣೆಗಳನ್ನು ನಡೆಸಲು ನಿಮ್ಮನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗುತ್ತಿದೆ. ಜತೆಗೆ ನಿಮಗೆ ಒಬ್ಬ ಸಹಾಯಕ ಚುನಾವಣಾಧಿಕಾರಿ ಮತ್ತು ಇತರ ಸಿಬ್ಬಂದಿಯನ್ನು ನೇಮಿಸಲು ಅವಕಾಶ ನೀಡಲಾಗುವುದು ಎಂದು IOA ಹೇಳಿಕೆಯಲ್ಲಿ ತಿಳಿಸಿದೆ.

ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿ ಪಟುಗಳು ಅವರ ಮೇಲೆ ಲೈಂಗಿಕ ಆರೋಪ ಮಾಡಿದ್ದು, ಈಗಾಗಲೇ ಅವರ ಪೊಲೀಸ್ ತನಿಖೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ: Wrestlers Protest: ಆರೋಪಕ್ಕೆ ಸಂಬಂಧಿಸಿದ ಫೋಟೊಗಳು, ವಿಡಿಯೋಗಳನ್ನು ಒದಗಿಸುವಂತೆ ಕುಸ್ತಿಪಟುಗಳನ್ನು ಕೇಳಿದ ಪೊಲೀಸರು

ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಗುರುವಾರ ವಿಚಾರಣಾ ನ್ಯಾಯಾಲಯದ ಮುಂದೆ ತಮ್ಮ ತನಿಖಾ ವರದಿಗಳನ್ನು ಇಟ್ಟಿದ್ದಾರೆ. ಬಿಜೆಪಿ ನಾಯಕ ಬ್ರಿಜ್ ಭೂಷಣ್ ಶರಣ್ ಸಿಂಗ್ ಸುಮಾರು ಒಂದು ದಶಕದಿಂದ ಕುಸ್ತಿ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ಅವರ ಮಗ ಸ್ಥಳೀಯ ಶಾಸಕ ಮತ್ತು ಫೆಡರೇಶನ್‌ನಲ್ಲಿ ಅಧಿಕಾರಿಯೂ ಆಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ