AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electoral Bond Scheme: ನಾಳೆಯೇ ಚುನಾವಣಾ ಬಾಂಡ್​ಗಳ ವಿವರಗಳನ್ನು ಬಹಿರಂಗಪಡಿಸುವಂತೆ ಎಸ್​ಬಿಐಗೆ ಸುಪ್ರೀಂ ಸೂಚನೆ

ಮಾರ್ಚ್​ 12ರಂದು ಅಂದರೆ ನಾಳೆಯೇ ಚುನಾವಣಾ ಬಾಂಡ್​ಗಳ ವಿವರಗಳನ್ನು ಬಹಿರಂಗಪಡಿಸುವಂತೆ ಸುಪ್ರೀಂಕೋರ್ಟ್​ ಎಸ್​ಬಿಐಗೆ ಸೂಚನೆ ನೀಡಿದೆ.

Electoral Bond Scheme: ನಾಳೆಯೇ ಚುನಾವಣಾ ಬಾಂಡ್​ಗಳ ವಿವರಗಳನ್ನು ಬಹಿರಂಗಪಡಿಸುವಂತೆ ಎಸ್​ಬಿಐಗೆ ಸುಪ್ರೀಂ ಸೂಚನೆ
ಸುಪ್ರೀಂಕೋರ್ಟ್​
ನಯನಾ ರಾಜೀವ್
|

Updated on: Mar 11, 2024 | 12:36 PM

Share

ಚುನಾವಣಾ ಬಾಂಡ್(Electoral Bonds)​ಗಳ ವಿವರಗಳನ್ನು ಬಹಿರಂಗಪಡಿಸಲು ಹೆಚ್ಚಿನ ಸಮಯ ಕೋರಿ ಎಸ್​ಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ಸೋಮವಾರ ವಜಾಗೊಳಿಸಿದೆ. ನಾಳೆಯೇ ಮಾಹಿತಿಯನ್ನು ಬಹಿರಂಗ ಪಡಿಸುವಂತೆ ಸುಪ್ರೀಂಕೋರ್ಟ್​ ಕೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಭಾರತೀಯ ಚುನಾವಣಾ ಆಯೋಗಕ್ಕೆ ಮಾರ್ಚ್​ 15ರೊಳಗೆ ತನ್ನ ಅಧಿಕೃತ ವೆಬ್​ಸೈಟ್​ನಲ್ಲಿ ವಿವರಗಳನ್ನು ಪ್ರಕಟಿಸಬೇಕು ಎಂದು ಹೇಳಿದೆ.

ಈ ಹಿಂದೆ ವಿಚಾರಣೆ ವೇಳೆ ಎಸ್​ಬಿಐ ಪರ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್​ ಸಾಳ್ವೆ, ಮಾಹಿತಿ ನೀಡಲು ಜೂನ್ 30ರವರೆಗೆ ಕಾಲಾವಕಾಶ ಕೋರಿದ್ದರು. ಬಾಂಡ್​ಗಳ ಖರೀದಿಯ ಬಗ್ಗೆ ಮಾಹಿತಿ ನೀಡುವಂತೆ ನ್ಯಾಯಾಲಯವು ಎಸ್​ಬಿಐಗೆ ಸೂಚಿಸಿದೆ.

ರಾಜಕೀಯ ಪಕ್ಷಗಳ ವಿವರಗಳು ಮತ್ತು ಪಕ್ಷಗಳು ಸ್ವೀಕರಿಸಿದ ಬಾಂಡ್​ಗಳ ಸಂಖ್ಯೆಯನ್ನು ಸಹ ನೀಡಬೇಕು. 5 ವರ್ಷದಲ್ಲಿ 22 ಸಾವಿರಕ್ಕೂ ಅಧಿಕ ಚುನಾವಣಾ ಬಾಂಡ್ ಗಳನ್ನು ಬಿಡುಗಡೆ ಮಾಡಲಾಗಿದ್ದು, ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿ ನೀಡಿಕೆಗಾಗಿ ನೀಡಿರುವ ಗಡುವನ್ನು ಮಾರ್ಚ್ 6 ರಿಂದ ಜೂನ್ 30 ರವರೆಗೆ ವಿಸ್ತರಿಸಿ ಎಂದು ಸುಪ್ರೀಂ ಕೋರ್ಟ್ ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮನವಿ ಮಾಡಿತ್ತು.

ಕಳೆದ ಐದು ವರ್ಷಗಳಲ್ಲಿ 22,217 ಚುನಾವಣಾ ಬಾಂಡ್ ಗಳನ್ನು ವಿವಿಧ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಸಲುವಾಗಿ ಬಳಸಲಾಗಿದೆ ಎಂಬ ಅಂಶವನ್ನು ಭಾರತೀಯ ಸ್ಟೇಟ್ ಬ್ಯಾಂಕ್ ಬಹಿರಂಗಪಡಿಸಿದೆ.

ಮತ್ತಷ್ಟು ಓದಿ: Electoral Bonds: ಚುನಾವಣಾ ಬಾಂಡ್​ ಕುರಿತು ಇಂದು ಮಹತ್ವದ ತೀರ್ಪು ನೀಡಲಿದೆ ಸುಪ್ರೀಂಕೋರ್ಟ್

ಎರಡು ಭಿನ್ನ ಮಾಹಿತಿ ಭಾಗಗಳು ಇರುವುದರಿಂದ ಒಟ್ಟು 44,434 ಮಾಹಿತಿ ಸೆಟ್ ಗಳನ್ನು ಡಿಕೋಡ್ ಮಾಡಿ, ಕ್ರೋಢೀಕರಿಸಿ, ತುಲನೆ ಮಾಡಬೇಕಾಗುತ್ತದೆ. ದಾನಿಗಳ ಹೆಸರನ್ನು ಗುಪ್ತವಾಗಿ ಇಡುವ ಉದ್ದೇಶದಿಂದ ಡಿಕೋಡ್ ಮಾಡುವ ಪ್ರಕ್ರಿಯೆ ಅತ್ಯಂತ ಸಂಕೀರ್ಣ ಪ್ರಕ್ರಿಯೆಯಾಗಲಿದೆ ಎಂದು ಎಸ್ ಬಿಐ ಸ್ಪಷ್ಟಪಡಿಸಿತ್ತು.

ಒಂದು ವೇಳೆ 116 ದಿನಗಳ ಕಾಲಾವಧಿಯನ್ನು ವಿಸ್ತರಿಸುವಂತೆ ಕೋರಿ ಎಸ್‌ಬಿಐ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದರೆ, ಲೋಕಸಭೆ ಚುನಾವಣೆ ಮುಗಿಯುವವರೆಗೂ ರಾಜಕೀಯ ನಿಧಿಯ ಕುರಿತು ಪ್ರಮುಖ ಮಾಹಿತಿಯು ಗೌಪ್ಯವಾಗಿರುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ