AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಂತ್ರಣ ಕಳೆದುಕೊಂಡ ಚಾಲಕ; ಕಾರು, ಬೈಕು, ನಿಂತಿದ್ದ ಟ್ರಕ್, ಜನರಿಗೆ ಡಿಕ್ಕಿ ಹೊಡೆದ ಬಸ್​, 6 ಮಂದಿ ಸಾವು

ಅವಾಂತರ ಮಾಡಿದ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅವನಿಗಾಗಿ ಹುಡುಕುತ್ತಿದ್ದೇವೆ. ಸದ್ಯ ಗಾಯಗೊಂಡ ಎಲ್ಲರನ್ನೂ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಯಂತ್ರಣ ಕಳೆದುಕೊಂಡ ಚಾಲಕ; ಕಾರು, ಬೈಕು, ನಿಂತಿದ್ದ ಟ್ರಕ್, ಜನರಿಗೆ ಡಿಕ್ಕಿ ಹೊಡೆದ ಬಸ್​, 6 ಮಂದಿ ಸಾವು
ಅಪಘಾತ ನಡೆದ ಸ್ಥಳ
TV9 Web
| Edited By: |

Updated on: Jan 31, 2022 | 8:13 AM

Share

ಕಾನ್ಪುರ:  ಎಲೆಕ್ಟ್ರಿಕ್​​  ಬಸ್​​ವೊಂದು ನಿಯಂತ್ರಣ ಕಳೆದುಕೊಂಡು ಮೂರ್ನಾಲ್ಕು ವಾಹನಗಳು, ರಸ್ತೆ ಬದಿಯಲ್ಲಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟು, 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಕಾನ್ಪುರದ ಟಾಟ್ ಮಿಲ್​​​ನಲ್ಲಿ ನಡೆದಿದೆ. ಬಸ್​ ಡಿಕ್ಕಿಯಾದ ರಭಸಕ್ಕೆ ಮೂರು ಕಾರುಗಳು, ಹಲವು ಬೈಕ್​​ಗಳು ಸಂಪೂರ್ಣ ನಾಶಗೊಂಡಿವೆ. ಅಷ್ಟೇ ಅಲ್ಲ, ಅಲ್ಲಿಯೇ ಇದ್ದ ಟ್ರಾಫಿಕ್ ಪೊಲೀಸ್ ಬೂತ್​, ನಿಂತಿದ್ದ ಟ್ರಕ್​ಗೆ ಕೂಡ ಡಿಕ್ಕಿಯಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಷ್ಟೆಲ್ಲ ಅವಾಂತರ ಮಾಡಿದ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅವನಿಗಾಗಿ ಹುಡುಕುತ್ತಿದ್ದೇವೆ. ಸದ್ಯ ಗಾಯಗೊಂಡ ಎಲ್ಲರನ್ನೂ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದೇವೆ ಎಂದು ಪೂರ್ವ ಕಾನ್ಪುರದ ಡೆಪ್ಯೂಟಿ ಕಮಿಷನರ್​ ಪ್ರಮೋದ್​ ಕುಮಾರ್  ಹೇಳಿದ್ದಾರೆ.  ಚಾಲಕ ಅತ್ಯಂತ ವೇಗವಾಗಿ ಬಸ್​ ಚಾಲನೆ ಮಾಡುತ್ತಿದ್ದ. ಹೀಗಾಗಿ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಹೇಳಿದ್ದಾರೆ.

ಬಸ್​ ದುರಂತದಲ್ಲಿ 6 ಮಂದಿ ಸಾವನ್ನಪ್ಪುತ್ತಿದ್ದಂತೆ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್​ ಮಾಡಿ, ಸಂತಾಪ ಸೂಚಿಸಿದ್ದಾರೆ. ಕಾನ್ಪುರದಲ್ಲಿ ರಸ್ತೆ ಅಪಘಾತದ ಸುದ್ದಿ ಕೇಳಿದೆ. ಮೃತರ ಕುಟುಂಬಗಳಿಗೆ ನೋವು ಸಹಿಸುವ ಶಕ್ತಿ ಭಗವಂತ ನೀಡಲಿ. ಗಾಯಗೊಂಡವರು ಬಹುಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಂದು ವಿಶ್ವಾಸದ್ರೋಹದ ದಿನ ಆಚರಿಸುವುದಾಗಿ ರೈತ ಮುಖಂಡ ರಾಕೇಶ್ ಟಿಕಾಯತ್​ ಘೋಷಣೆ; ಕೇಂದ್ರದ ವಿರುದ್ಧ ಮತ್ತೆ ಸಿಡಿಮಿಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’