AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಂತ್ರಣ ಕಳೆದುಕೊಂಡ ಚಾಲಕ; ಕಾರು, ಬೈಕು, ನಿಂತಿದ್ದ ಟ್ರಕ್, ಜನರಿಗೆ ಡಿಕ್ಕಿ ಹೊಡೆದ ಬಸ್​, 6 ಮಂದಿ ಸಾವು

ಅವಾಂತರ ಮಾಡಿದ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅವನಿಗಾಗಿ ಹುಡುಕುತ್ತಿದ್ದೇವೆ. ಸದ್ಯ ಗಾಯಗೊಂಡ ಎಲ್ಲರನ್ನೂ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಯಂತ್ರಣ ಕಳೆದುಕೊಂಡ ಚಾಲಕ; ಕಾರು, ಬೈಕು, ನಿಂತಿದ್ದ ಟ್ರಕ್, ಜನರಿಗೆ ಡಿಕ್ಕಿ ಹೊಡೆದ ಬಸ್​, 6 ಮಂದಿ ಸಾವು
ಅಪಘಾತ ನಡೆದ ಸ್ಥಳ
TV9 Web
| Edited By: |

Updated on: Jan 31, 2022 | 8:13 AM

Share

ಕಾನ್ಪುರ:  ಎಲೆಕ್ಟ್ರಿಕ್​​  ಬಸ್​​ವೊಂದು ನಿಯಂತ್ರಣ ಕಳೆದುಕೊಂಡು ಮೂರ್ನಾಲ್ಕು ವಾಹನಗಳು, ರಸ್ತೆ ಬದಿಯಲ್ಲಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟು, 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಕಾನ್ಪುರದ ಟಾಟ್ ಮಿಲ್​​​ನಲ್ಲಿ ನಡೆದಿದೆ. ಬಸ್​ ಡಿಕ್ಕಿಯಾದ ರಭಸಕ್ಕೆ ಮೂರು ಕಾರುಗಳು, ಹಲವು ಬೈಕ್​​ಗಳು ಸಂಪೂರ್ಣ ನಾಶಗೊಂಡಿವೆ. ಅಷ್ಟೇ ಅಲ್ಲ, ಅಲ್ಲಿಯೇ ಇದ್ದ ಟ್ರಾಫಿಕ್ ಪೊಲೀಸ್ ಬೂತ್​, ನಿಂತಿದ್ದ ಟ್ರಕ್​ಗೆ ಕೂಡ ಡಿಕ್ಕಿಯಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಷ್ಟೆಲ್ಲ ಅವಾಂತರ ಮಾಡಿದ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅವನಿಗಾಗಿ ಹುಡುಕುತ್ತಿದ್ದೇವೆ. ಸದ್ಯ ಗಾಯಗೊಂಡ ಎಲ್ಲರನ್ನೂ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದೇವೆ ಎಂದು ಪೂರ್ವ ಕಾನ್ಪುರದ ಡೆಪ್ಯೂಟಿ ಕಮಿಷನರ್​ ಪ್ರಮೋದ್​ ಕುಮಾರ್  ಹೇಳಿದ್ದಾರೆ.  ಚಾಲಕ ಅತ್ಯಂತ ವೇಗವಾಗಿ ಬಸ್​ ಚಾಲನೆ ಮಾಡುತ್ತಿದ್ದ. ಹೀಗಾಗಿ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಹೇಳಿದ್ದಾರೆ.

ಬಸ್​ ದುರಂತದಲ್ಲಿ 6 ಮಂದಿ ಸಾವನ್ನಪ್ಪುತ್ತಿದ್ದಂತೆ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್​ ಮಾಡಿ, ಸಂತಾಪ ಸೂಚಿಸಿದ್ದಾರೆ. ಕಾನ್ಪುರದಲ್ಲಿ ರಸ್ತೆ ಅಪಘಾತದ ಸುದ್ದಿ ಕೇಳಿದೆ. ಮೃತರ ಕುಟುಂಬಗಳಿಗೆ ನೋವು ಸಹಿಸುವ ಶಕ್ತಿ ಭಗವಂತ ನೀಡಲಿ. ಗಾಯಗೊಂಡವರು ಬಹುಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಂದು ವಿಶ್ವಾಸದ್ರೋಹದ ದಿನ ಆಚರಿಸುವುದಾಗಿ ರೈತ ಮುಖಂಡ ರಾಕೇಶ್ ಟಿಕಾಯತ್​ ಘೋಷಣೆ; ಕೇಂದ್ರದ ವಿರುದ್ಧ ಮತ್ತೆ ಸಿಡಿಮಿಡಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್